Advertisement
ಸುದ್ದಿಗಳು

ಸರ್ಕಾರಿ ಗೋಶಾಲೆ ಶೀಘ್ರದಲ್ಲಿ ಪ್ರಾರಂಭಿಸಲು ಸೂಚನೆ |

Share

ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಸರ್ಕಾರಿ ಗೋಶಾಲೆ ಶೀಘ್ರದಲ್ಲಿ ಪ್ರಾರಂಭಿಸಬೇಕು ಎಂದು ಜಿಲ್ಲಾ ಪಂಚಾಯತ್ ಪ್ರಭಾರ ಜಿಲ್ಲಾಧಿಕಾರಿ ಡಾ. ಆನಂದ್.ಕೆ ಸೂಚಿಸಿದರು.

Advertisement

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ಕುಮಾರಾಧಾರ ಸರ್ಕಾರಿ ಗೋಶಾಲೆ ಇದೇ ವರ್ಷ ಪ್ರಾರಂಭವಾಗಿದ್ದು, ಸದ್ಯ 98 ಜಾನುವಾರುಗಳನ್ನು ಸಾಕಣೆ ಮಾಡಲಾಗುತ್ತಿದೆ. ಮೆನ್ನಬೆಟ್ಟು ಗ್ರಾಮದ 19.80 ಎಕ್ರೆ ಗೋಮಾಳ ಪ್ರದೇಶವನ್ನು ಗೋಶಾಲೆಗೆ ಕಾಯ್ದೆರಿಸಲು ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದರು. ಪ್ರಾಣಿಗಳ ರಕ್ಷಣೆ ಮತ್ತು ಪುನರ್ವಸತಿ ಕೇಂದ್ರ ಹಾಗೂ ಆಸ್ಪತ್ರೆಯ ಉದ್ದೇಶವಾಗಿದೆ ಮತ್ತು ಪ್ರಾಣಿ ಕಲ್ಯಾಣ ಕಾರ್ಯಕರ್ತರನ್ನು ಗುರುತಿಸಿ ತಾಲೂಕು ಪ್ರಾಣಿ ಮಿತ್ರ ತಂಡ ರಚನೆ ಮಾಡಲು ಎಲ್ಲ ತಾಲೂಕ ಮುಖ್ಯ ಪಶು ವೈದ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಪ್ರಾಣಿ ಕಲ್ಯಾಣ ಕಾಯ್ದೆ ಮತ್ತು ನಿಯಮಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಬೇಕು. ಕಾನೂನುಬಾಹಿರ ಕಸಾಯಿ ಖಾನೆಗಳನ್ನು ನಡೆಸುತ್ತಿರುವ ಬಗ್ಗೆ ಮಾಹಿತಿ ಸಿಕ್ಕಾಗ ಅದರ ಬಗ್ಗೆ ಕ್ರಮವನ್ನು ತೆಗೆದುಕೊಳ್ಳಬೇಕು ಮತ್ತು ಪೆಟ್ ಶಾಪ್ ನಡೆಸುತ್ತಿರುವವರು ಕಡ್ಡಾಯವಾಗಿ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಬೇಕು ಹಾಗೂ ಆಂಟಿ ಕ್ರುಯಾಲಿಟಿ ಇನ್ಸ್ಪೆಕ್ಟರ್ ನೇಮಕ ಮಾಡಲು ಮಾರ್ಗಸೂಚಿ ನೀಡಿದರು. ರೈತರು ಬೆಳೆಗಳನ್ನು ರಕ್ಷಿಸಿಕೊಳ್ಳಲು ಹೈ ಟೆನ್ಷನ್ ವಿದ್ಯುತ್ ಬೇಲಿಗಳ ಬಗ್ಗೆ ತಪಾಸನೆ ನಡೆಸಿ ಅಗತ್ಯ ಕ್ರಮ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂಥೋನಿ ಎಸ್ ಮರಿಯಪ್ಪ, ಜಿಲ್ಲಾ ಕಾನೂನು ಪ್ರಾಣಿ ಕಲ್ಯಾಣ ಸಲಹೆಗಾರ ಸುಮಾ ಆರ್ ನಾಯಕ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

4 minutes ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

23 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

1 day ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

1 day ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

1 day ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

1 day ago