Advertisement
Local mirror

ಶ್ರೀ ಮದ್ವಾಲ್ಮೀಕಿ ರಾಮಾಯಣದ 108 ಪಾರಾಯಣ | ” ರಾಮಾಯಣ ಸಿದ್ಧ” ಗೌರವಾರ್ಪಣೆ

Share

ಶ್ರೀ ಮದ್ವಾಲ್ಮೀಕಿ ರಾಮಾಯಣದ 108 ಪಾರಾಯಣ ಮಾಡಿ ವಿಶೇಷವಾಗಿ ಸಾಧನೆ ಮಾಡಿದ ಕಾಟುಕುಕ್ಕೆಯ ಬಿ ವಿ ನಾರಾಯಣ ಭಟ್ಟರಿಗೆ ಗೌರವಾರ್ಪಣಾ ಕಾರ್ಯಕ್ರಮವು ಶ್ರೀ ರಾಘವೇಶ್ವರಭಾರತೀ ಸ್ವಾಮಿಗಳವರ ನಿರ್ದೇಶನದಂತೆ ಪೆರ್ಲದ ಬಜಕೂಡ್ಲು ಅಮೃತಧಾರಾ ಗೋಶಾಲೆಯ ಶ್ರೀ ಗೋವರ್ಧನ ಧರ್ಮಮಂದಿರದಲ್ಲಿ  ಸಂಪನ್ನವಾಯಿತು.

ಈ ಸಂದರ್ಭ  ಬಿ ವಿ ನಾರಾಯಣ ಭಟ್ಟರು ಶ್ರೀ ಮದ್ವಾಲ್ಮೀಕಿ ರಾಮಾಯಣ ಪಾರಾಯಣದ ಶ್ರೀ ರಾಮ ಪಟ್ಟಾಭಿಷೇಕ ಸರ್ಗವನ್ನು ಪಾರಾಯಣ ಮಾಡಿದರು. ಬಳಿಕ ಜರಗಿದ ಸನ್ಮಾನ ಸಮಾರಂಭದ ಸಭಾ ಕಾರ್ಯಕ್ರಮದಲ್ಲಿ ಮುಳ್ಳೇರಿಯಾ ಮಂಡಲಾಧ್ಯಕ್ಷರಾದ ಬಾಲಸುಬ್ರಹ್ಮಣ್ಯ ಭಟ್ ಸರ್ಪಮಲೆಯವರು ಪ್ರಸ್ತಾವನೆ ಮಾಡಿ ಸ್ವಾಗತಿಸಿದರು.

ಮಹಾಮಂಡಲ ಧರ್ಮಕರ್ಮ ವಿಭಾಗದ ಸಹಕಾರ್ಯದರ್ಶಿ ವೇ ಮೂ ಕೇಶವಪ್ರಸಾದ ಭಟ್ಟ ಕೂಟೇಲು ಇವರು ದಿಕ್ಸೂಚಿ ಮಾತುಗಳನ್ನಾಡಿ ಶ್ರೀ ಮದ್ವಾಲ್ಮೀಕಿ ರಾಮಾಯಣದ ವಿಶೇಷತೆ, ಔಚಿತ್ಯ, ಉದ್ದೇಶ, ಪರಿಣಾಮ, ಫಲ ಇವುಗಳ ಬಗ್ಗೆ ವೇದದ ಶಾಸ್ತ್ರೀಯ ಮಾಹಿತಿಗಳನ್ನು ಪ್ರಸ್ತುತಪಡಿಸಿದರು.

 

 

ಬಿ ವಿ ನಾರಾಯಣ ಭಟ್ಟ ಮತ್ತು ಶೈಲಾ ಯನ್ ಭಟ್ ಇವರನ್ನು ಶಾಲುಹೊದೆಸಿ ಶ್ರೀಗಂಧ ಹಾರಾರ್ಪಣೆ ಮಾಡಿ ಫಲ, ಅಭಿನಂದನಾ ಪತ್ರ ಇವುಗಳನ್ನಿತ್ತು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಹವ್ಯಕ ಮಹಾಮಂಡಲ ವಿದ್ಯಾರ್ಥಿವಾಹಿನೀ ಸಂಘಟನಾ ನೇತೃತ್ವದಲ್ಲಿ ಕುಮಾರಿ ದಿವ್ಯಾ ಭಾರತಿ, ಒಡಿಯೂರು ಮನೆ, ಕನ್ಯಾನ ವಲಯ, ಮಂಗಳೂರು ಮಂಡಲ ಇವರು ರಚಿಸಿದ ಬಿ ವಿ ನಾರಾಯಣ ಭಟ್ಟರ ಭಾವ ಚಿತ್ರವನ್ನು ಗೌರವ ಪೂರ್ಣವಾಗಿ ಅವರಿಗೆ ಸಮರ್ಪಣೆ ಮಾಡಿದರು.

ಈ ಕುರಿತಾದ ಮಾಹಿತಿಯನ್ನು ಸಂಘಟನಾ ಕಾರ್ಯದರ್ಶಿ ಕೇಶವ ಪ್ರಸಾದ ಎಡಕ್ಕಾನ ಅವರು ವಿವರಿಸಿದರು. ದಿವ್ಯಾ ಭಾರತಿ ಇವರಿಗೆ ಮಹಾ ಮಂಡಲ ಮಾತೃತ್ವಂ ಸಂಚಾಲಕಿ ಈಶ್ವರಿ ಬೇರ್ಕಡವು, ಮಂಡಲ ಮಾತೃ ವಿಭಾಗ ಪ್ರಧಾನೆ  ಕುಸುಮಾ ಪೆರ್ಮುಖ ಇವರು ಶಾಲು ಹೊದೆಸಿ ಸ್ಮರಣಿಕೆಯನ್ನು ನೀಡಿದರು.

ಮಹಾ ಮಂಡಲ ಕಾರ್ಯದರ್ಶಿ ನಾಗರಾಜ ಭಟ್ ಪೆದಮಲೆ, ಮಹಾಮಂಡಲ ಶಾಸನತಂತ್ರದ ಗುರುಸಂಪರ್ಕ ಶ್ರೀಸಂಯೋಜಕರು ಹಾಗೂ ಮುಳ್ಳೇರಿಯಾ ಮಂಡಲ ಗುರಿಕ್ಕಾರ ಸತ್ಯನಾರಾಯಣ ಭಟ್ ಮೊಗ್ರ, ಶಿವಪ್ರಸಾದ ವರ್ಮುಡಿ, ಜಯದೇವ ಖಂಡಿಗೆ ಇವರು ಅಭಿನಂದನಾ ಭಾಷಣ ಮಾಡಿದರು.

ಸನ್ಮಾನಿತರಾದ ಬಿ ವಿ ನಾರಾಯಣ ಭಟ್ಟರು ರಾಮಾಯಣ ಪಾರಾಯಣದ ಸಂದರ್ಭದ ಅನುಭವ ಮತ್ತು ಸನ್ಮಾನಿಸಿದ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಗೋಶಾಲಾ ಆಡಳಿತ ಮಂಡಳೀಯ ಕಾರ್ಯದರ್ಶಿ ಕೃಷ್ಣ ಪ್ರಸಾದ ಬನಾರಿ ಇವರು ಗೋಶಾಲೆಯ ಬಗ್ಗೆ ಮಾಹಿತಿಗಳನ್ನಿತ್ತರು. ಕುಂಬಳೆ ವಲಯಾಧ್ಯಕ್ಷರಾದ ಬಾಲಕೃಷ್ಣ ಶರ್ಮ ಇವರು ಧನ್ಯವಾದವನ್ನಿತ್ತರು. ಎಣ್ಮಕಜೆ ವಲಯ ಕಾರ್ಯದರ್ಶಿ ಶಂಕರಪ್ರಸಾದ ಕುಂಚಿನಡ್ಕ ಇವರು ಸಭಾ ನಿರೂಪಣೆ ಮಾಡಿ ಗೋವಿಂದ ಬಳ್ಳಮೂಲೆ ಕಾರ್ಯಕ್ರಮ ಸಂಯೋಜನೆ ಮಾಡಿದರು.

ವಿದ್ಯಾರ್ಥಿ ವಾಹಿನಿ ಪ್ರಧಾನ ಗುರುಮೂರ್ತಿ ಮೇಣ, ಮಂಡಲ, ವಲಯ ಹಾಗೂ ಗೋಶಾಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

7 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

11 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

22 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

23 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

24 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

1 day ago