ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಮಾತುಕತೆ ಪ್ರಗತಿಯಲ್ಲಿವೆ. ರೈತರು ಮತ್ತು ಸಣ್ಣ ಉತ್ಪಾದಕರ ಹಿತಾಸಕ್ತಿಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ದೆಹಲಿಯಲ್ಲಿ ಹೇಳಿದ್ದಾರೆ.
ಎಕಾನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆಯಲ್ಲಿ ಪಾಲ್ಗೊಂಡ ಸಚಿವರು, ಅಮೆರಿಕ ಜೊತೆಗಿನ ಮಾತುಕತೆಗಳಲ್ಲಿ ಭಾರತ ತನ್ನ ನಿಲುವಿನ ಬಗ್ಗೆ ಸ್ಪಷ್ಟವಾಗಿದೆ ಮತ್ತು ತನ್ನ ರಾಷ್ಟ್ರೀಯ ಹಿತಾಸಕ್ತಿ ರಕ್ಷಿಸುವ ನಿರ್ಧಾರ ಕೈಗೊಂಡಿದೆ ಎಂದರು. ತೈಲ ಆಮದು ಮತ್ತು ನಿರ್ಬಂಧಗಳ ಕುರಿತು ಪ್ರಸ್ತಾಪಿಸಿದ ಸಚಿವ ಎಸ್.ಜೈಶಂಕರ್, ಭಾರತ, ರಷ್ಯಾ ತೈಲದ ಅತಿದೊಡ್ಡ ಖರೀದಿದಾರ ದೇಶವಲ್ಲ, ಬದಲಿಗೆ ಚೈನಾ ರಷ್ಯಾದ ಅತಿ ದೊಡ್ಡ ತೈಲ ಖರೀದಿದಾರ ದೇಶ. ಭಾರತ ಅಮೆರಿಕದಿಂದ ತೈಲ ಆಮದುಗಳನ್ನು ಹೆಚ್ಚಿಸಿದೆ ಮತ್ತು ರಾಷ್ಟ್ರೀಯ ಹಿತಾಸಕ್ತಿ ಮತ್ತು ಜಾಗತಿಕ ಮಾರುಕಟ್ಟೆ ಸ್ಥಿರತೆಗೆ ಅನುಗುಣವಾಗಿ ಕಾರ್ಯನಿರ್ವಹಿಸಿದೆ ಎಂದರು. ಕೇಂದ್ರ ಸರ್ಕಾರ ಸ್ವಾವಲಂಬನೆ, ಆತ್ಮನಿರ್ಭರತೆಗೆ ವಿಶೇಷ ಒತ್ತು ನೀಡುತ್ತಿದೆ. ಇತ್ತೀಚಿನ ಕೆಲವು ಅನುಭವವು ಒಂದೇ ಪೂರೈಕೆ ಸರಪಳಿ ಅಥವಾ ಒಂದೇ ದೇಶದ ಮೂಲದ ಮೇಲೆ ಅತಿಯಾಗಿ ಅವಲಂಬಿತರಾಗಬಾರದು ಎಂಬ ಪಾಠ ಕಲಿಸಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…