ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಮಾತುಕತೆ ಪ್ರಗತಿಯಲ್ಲಿವೆ. ರೈತರು ಮತ್ತು ಸಣ್ಣ ಉತ್ಪಾದಕರ ಹಿತಾಸಕ್ತಿಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ದೆಹಲಿಯಲ್ಲಿ ಹೇಳಿದ್ದಾರೆ.
ಎಕಾನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆಯಲ್ಲಿ ಪಾಲ್ಗೊಂಡ ಸಚಿವರು, ಅಮೆರಿಕ ಜೊತೆಗಿನ ಮಾತುಕತೆಗಳಲ್ಲಿ ಭಾರತ ತನ್ನ ನಿಲುವಿನ ಬಗ್ಗೆ ಸ್ಪಷ್ಟವಾಗಿದೆ ಮತ್ತು ತನ್ನ ರಾಷ್ಟ್ರೀಯ ಹಿತಾಸಕ್ತಿ ರಕ್ಷಿಸುವ ನಿರ್ಧಾರ ಕೈಗೊಂಡಿದೆ ಎಂದರು. ತೈಲ ಆಮದು ಮತ್ತು ನಿರ್ಬಂಧಗಳ ಕುರಿತು ಪ್ರಸ್ತಾಪಿಸಿದ ಸಚಿವ ಎಸ್.ಜೈಶಂಕರ್, ಭಾರತ, ರಷ್ಯಾ ತೈಲದ ಅತಿದೊಡ್ಡ ಖರೀದಿದಾರ ದೇಶವಲ್ಲ, ಬದಲಿಗೆ ಚೈನಾ ರಷ್ಯಾದ ಅತಿ ದೊಡ್ಡ ತೈಲ ಖರೀದಿದಾರ ದೇಶ. ಭಾರತ ಅಮೆರಿಕದಿಂದ ತೈಲ ಆಮದುಗಳನ್ನು ಹೆಚ್ಚಿಸಿದೆ ಮತ್ತು ರಾಷ್ಟ್ರೀಯ ಹಿತಾಸಕ್ತಿ ಮತ್ತು ಜಾಗತಿಕ ಮಾರುಕಟ್ಟೆ ಸ್ಥಿರತೆಗೆ ಅನುಗುಣವಾಗಿ ಕಾರ್ಯನಿರ್ವಹಿಸಿದೆ ಎಂದರು. ಕೇಂದ್ರ ಸರ್ಕಾರ ಸ್ವಾವಲಂಬನೆ, ಆತ್ಮನಿರ್ಭರತೆಗೆ ವಿಶೇಷ ಒತ್ತು ನೀಡುತ್ತಿದೆ. ಇತ್ತೀಚಿನ ಕೆಲವು ಅನುಭವವು ಒಂದೇ ಪೂರೈಕೆ ಸರಪಳಿ ಅಥವಾ ಒಂದೇ ದೇಶದ ಮೂಲದ ಮೇಲೆ ಅತಿಯಾಗಿ ಅವಲಂಬಿತರಾಗಬಾರದು ಎಂಬ ಪಾಠ ಕಲಿಸಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…