ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಮಾತುಕತೆ ಪ್ರಗತಿಯಲ್ಲಿವೆ. ರೈತರು ಮತ್ತು ಸಣ್ಣ ಉತ್ಪಾದಕರ ಹಿತಾಸಕ್ತಿಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ದೆಹಲಿಯಲ್ಲಿ ಹೇಳಿದ್ದಾರೆ.
ಎಕಾನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆಯಲ್ಲಿ ಪಾಲ್ಗೊಂಡ ಸಚಿವರು, ಅಮೆರಿಕ ಜೊತೆಗಿನ ಮಾತುಕತೆಗಳಲ್ಲಿ ಭಾರತ ತನ್ನ ನಿಲುವಿನ ಬಗ್ಗೆ ಸ್ಪಷ್ಟವಾಗಿದೆ ಮತ್ತು ತನ್ನ ರಾಷ್ಟ್ರೀಯ ಹಿತಾಸಕ್ತಿ ರಕ್ಷಿಸುವ ನಿರ್ಧಾರ ಕೈಗೊಂಡಿದೆ ಎಂದರು. ತೈಲ ಆಮದು ಮತ್ತು ನಿರ್ಬಂಧಗಳ ಕುರಿತು ಪ್ರಸ್ತಾಪಿಸಿದ ಸಚಿವ ಎಸ್.ಜೈಶಂಕರ್, ಭಾರತ, ರಷ್ಯಾ ತೈಲದ ಅತಿದೊಡ್ಡ ಖರೀದಿದಾರ ದೇಶವಲ್ಲ, ಬದಲಿಗೆ ಚೈನಾ ರಷ್ಯಾದ ಅತಿ ದೊಡ್ಡ ತೈಲ ಖರೀದಿದಾರ ದೇಶ. ಭಾರತ ಅಮೆರಿಕದಿಂದ ತೈಲ ಆಮದುಗಳನ್ನು ಹೆಚ್ಚಿಸಿದೆ ಮತ್ತು ರಾಷ್ಟ್ರೀಯ ಹಿತಾಸಕ್ತಿ ಮತ್ತು ಜಾಗತಿಕ ಮಾರುಕಟ್ಟೆ ಸ್ಥಿರತೆಗೆ ಅನುಗುಣವಾಗಿ ಕಾರ್ಯನಿರ್ವಹಿಸಿದೆ ಎಂದರು. ಕೇಂದ್ರ ಸರ್ಕಾರ ಸ್ವಾವಲಂಬನೆ, ಆತ್ಮನಿರ್ಭರತೆಗೆ ವಿಶೇಷ ಒತ್ತು ನೀಡುತ್ತಿದೆ. ಇತ್ತೀಚಿನ ಕೆಲವು ಅನುಭವವು ಒಂದೇ ಪೂರೈಕೆ ಸರಪಳಿ ಅಥವಾ ಒಂದೇ ದೇಶದ ಮೂಲದ ಮೇಲೆ ಅತಿಯಾಗಿ ಅವಲಂಬಿತರಾಗಬಾರದು ಎಂಬ ಪಾಠ ಕಲಿಸಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…