ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಮಾತುಕತೆ ಪ್ರಗತಿಯಲ್ಲಿವೆ. ರೈತರು ಮತ್ತು ಸಣ್ಣ ಉತ್ಪಾದಕರ ಹಿತಾಸಕ್ತಿಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ದೆಹಲಿಯಲ್ಲಿ ಹೇಳಿದ್ದಾರೆ.
ಎಕಾನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆಯಲ್ಲಿ ಪಾಲ್ಗೊಂಡ ಸಚಿವರು, ಅಮೆರಿಕ ಜೊತೆಗಿನ ಮಾತುಕತೆಗಳಲ್ಲಿ ಭಾರತ ತನ್ನ ನಿಲುವಿನ ಬಗ್ಗೆ ಸ್ಪಷ್ಟವಾಗಿದೆ ಮತ್ತು ತನ್ನ ರಾಷ್ಟ್ರೀಯ ಹಿತಾಸಕ್ತಿ ರಕ್ಷಿಸುವ ನಿರ್ಧಾರ ಕೈಗೊಂಡಿದೆ ಎಂದರು. ತೈಲ ಆಮದು ಮತ್ತು ನಿರ್ಬಂಧಗಳ ಕುರಿತು ಪ್ರಸ್ತಾಪಿಸಿದ ಸಚಿವ ಎಸ್.ಜೈಶಂಕರ್, ಭಾರತ, ರಷ್ಯಾ ತೈಲದ ಅತಿದೊಡ್ಡ ಖರೀದಿದಾರ ದೇಶವಲ್ಲ, ಬದಲಿಗೆ ಚೈನಾ ರಷ್ಯಾದ ಅತಿ ದೊಡ್ಡ ತೈಲ ಖರೀದಿದಾರ ದೇಶ. ಭಾರತ ಅಮೆರಿಕದಿಂದ ತೈಲ ಆಮದುಗಳನ್ನು ಹೆಚ್ಚಿಸಿದೆ ಮತ್ತು ರಾಷ್ಟ್ರೀಯ ಹಿತಾಸಕ್ತಿ ಮತ್ತು ಜಾಗತಿಕ ಮಾರುಕಟ್ಟೆ ಸ್ಥಿರತೆಗೆ ಅನುಗುಣವಾಗಿ ಕಾರ್ಯನಿರ್ವಹಿಸಿದೆ ಎಂದರು. ಕೇಂದ್ರ ಸರ್ಕಾರ ಸ್ವಾವಲಂಬನೆ, ಆತ್ಮನಿರ್ಭರತೆಗೆ ವಿಶೇಷ ಒತ್ತು ನೀಡುತ್ತಿದೆ. ಇತ್ತೀಚಿನ ಕೆಲವು ಅನುಭವವು ಒಂದೇ ಪೂರೈಕೆ ಸರಪಳಿ ಅಥವಾ ಒಂದೇ ದೇಶದ ಮೂಲದ ಮೇಲೆ ಅತಿಯಾಗಿ ಅವಲಂಬಿತರಾಗಬಾರದು ಎಂಬ ಪಾಠ ಕಲಿಸಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…