ದೇಶದ ಬೆಳವಣಿಗೆ ಆಗಬೇಕಾದ್ದು ಶಿಕ್ಷಣ ಹಾಗೂ ಆರೋಗ್ಯ ಸೇವೆಯ ಮೂಲಕ. ಶಾಲೆಗಳಿಗೆ, ಅದರಲ್ಲೂ ಗ್ರಾಮೀಣ ಶಾಲೆಗಳಿಗೆ ಶಿಕ್ಷಣಕ್ಕೆ ಆದ್ಯತೆ ಇರಬೇಕು. ಇನ್ನೊಂದು ಪ್ರಮುಖವಾದ್ದು ಆರೋಗ್ಯ ವ್ಯವಸ್ಥೆ. ಗ್ರಾಮೀಣ ಭಾಗದಲ್ಲಿ ಇಂದಿಗೂ ಆರೋಗ್ಯ ವ್ಯವಸ್ಥೆಗಳು ಸುಧಾರಣೆಗೆ ಇವೆ. ಇಂತಹದ್ದರಲ್ಲಿ ಸರ್ಕಾರಗಳು ನೀಡುವ ಉಚಿತ ಇರುವ ಶಿಕ್ಷಣ ವ್ಯವಸ್ಥೆ ಮೇಲೂ ಪರಿಣಾಮ ಬೀರುತ್ತಿದೆ. ಇದೀಗ ಗ್ಯಾರಂಟಿ #Guarantee ಹೊಡೆತದ ಕಾರಣ ಸರ್ಕಾರ #KarnatakaGovt ಶಾಲಾ ಮಕ್ಕಳ ಹಣಕ್ಕೂ ಕತ್ತರಿ ಹಾಕಬೇಕಾಗಿ ಬಂದಿದೆ. ಈಗ ಶೂ, ಸಾಕ್ಸ್ ಖರೀದಿ ಹಣವನ್ನು ರಾಜ್ಯ ಸರ್ಕಾರ ಕಡಿತ ಮಾಡಿ ಆದೇಶ ಹೊರಡಿಸಿದೆ.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಘೋಷಣೆಯಾದಾಗ ಹುಬ್ಬೇರಿಸಿದವರೆಷ್ಟೋ.. ಗ್ಯಾರಂಟಿ ನೀಡಿದ ಸರ್ಕಾರದ ಬಣ್ಣ ದಿನ ಕಳೆದಂತೆ ಕಳಚಿಕೊಳ್ಳುತ್ತಿದೆ. ಇದೀಗ ಗ್ಯಾರಂಟಿ ಹೊಡೆತದ ಕಾರಣ ಕಾಂಗ್ರೆಸ್ ಸರ್ಕಾರ ಶಾಲಾ ಮಕ್ಕಳ ಹಣಕ್ಕೂ ಕತ್ತರಿ ಹಾಕಿದೆ. ಶೂ, ಸಾಕ್ಸ್ ಖರೀದಿ ಹಣವನ್ನು ರಾಜ್ಯ ಸರ್ಕಾರ ಕಡಿತ ಮಾಡಿ ಆದೇಶ ಹೊರಡಿಸಿದೆ.
ಬಿಜೆಪಿ ಅವಧಿಯಲ್ಲಿ ಶೂಗೆ ನಿಗದಿ ಮಾಡಿದ್ದ ದರವನ್ನೇ ಈ ವರ್ಷವೂ ಸರ್ಕಾರ ಫಿಕ್ಸ್ ಮಾಡಿದೆ. ಕಳೆದ ವರ್ಷದ ರೇಟ್ನಲ್ಲಿಯೇ ಶೂ, ಸಾಕ್ಸ್ ಖರೀದಿ ಮಾಡುವಂತೆ ಶಾಲೆಗಳಿಗೆ ಸೂಚನೆ ನೀಡಿದೆ. 2019-20ನೇ ಸಾಲಿನಲ್ಲಿ ಇದ್ದ ದರದಲ್ಲೇ 2023-24ನೇ ಸಾಲಿಗೂ ಶೂ ಖರೀದಿಗೆ ಸರ್ಕಾರದ ಆದೇಶಿಸಿದೆ.
ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿಗಳು ಅನಿವಾರ್ಯವಾಗಿ ಸಂಘ ಸಂಸ್ಥೆಗಳು, ದಾನಿಗಳ ಮೊರೆ ಹೋಗಬೇಕಾಗಿದೆ. ಸರ್ಕಾರದ ಆದೇಶದಿಂದ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು ಕಂಗಾಲಾಗಿದ್ದಾರೆ.
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…