ದೇಶದ ಬೆಳವಣಿಗೆ ಆಗಬೇಕಾದ್ದು ಶಿಕ್ಷಣ ಹಾಗೂ ಆರೋಗ್ಯ ಸೇವೆಯ ಮೂಲಕ. ಶಾಲೆಗಳಿಗೆ, ಅದರಲ್ಲೂ ಗ್ರಾಮೀಣ ಶಾಲೆಗಳಿಗೆ ಶಿಕ್ಷಣಕ್ಕೆ ಆದ್ಯತೆ ಇರಬೇಕು. ಇನ್ನೊಂದು ಪ್ರಮುಖವಾದ್ದು ಆರೋಗ್ಯ ವ್ಯವಸ್ಥೆ. ಗ್ರಾಮೀಣ ಭಾಗದಲ್ಲಿ ಇಂದಿಗೂ ಆರೋಗ್ಯ ವ್ಯವಸ್ಥೆಗಳು ಸುಧಾರಣೆಗೆ ಇವೆ. ಇಂತಹದ್ದರಲ್ಲಿ ಸರ್ಕಾರಗಳು ನೀಡುವ ಉಚಿತ ಇರುವ ಶಿಕ್ಷಣ ವ್ಯವಸ್ಥೆ ಮೇಲೂ ಪರಿಣಾಮ ಬೀರುತ್ತಿದೆ. ಇದೀಗ ಗ್ಯಾರಂಟಿ #Guarantee ಹೊಡೆತದ ಕಾರಣ ಸರ್ಕಾರ #KarnatakaGovt ಶಾಲಾ ಮಕ್ಕಳ ಹಣಕ್ಕೂ ಕತ್ತರಿ ಹಾಕಬೇಕಾಗಿ ಬಂದಿದೆ. ಈಗ ಶೂ, ಸಾಕ್ಸ್ ಖರೀದಿ ಹಣವನ್ನು ರಾಜ್ಯ ಸರ್ಕಾರ ಕಡಿತ ಮಾಡಿ ಆದೇಶ ಹೊರಡಿಸಿದೆ.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಘೋಷಣೆಯಾದಾಗ ಹುಬ್ಬೇರಿಸಿದವರೆಷ್ಟೋ.. ಗ್ಯಾರಂಟಿ ನೀಡಿದ ಸರ್ಕಾರದ ಬಣ್ಣ ದಿನ ಕಳೆದಂತೆ ಕಳಚಿಕೊಳ್ಳುತ್ತಿದೆ. ಇದೀಗ ಗ್ಯಾರಂಟಿ ಹೊಡೆತದ ಕಾರಣ ಕಾಂಗ್ರೆಸ್ ಸರ್ಕಾರ ಶಾಲಾ ಮಕ್ಕಳ ಹಣಕ್ಕೂ ಕತ್ತರಿ ಹಾಕಿದೆ. ಶೂ, ಸಾಕ್ಸ್ ಖರೀದಿ ಹಣವನ್ನು ರಾಜ್ಯ ಸರ್ಕಾರ ಕಡಿತ ಮಾಡಿ ಆದೇಶ ಹೊರಡಿಸಿದೆ.
ಬಿಜೆಪಿ ಅವಧಿಯಲ್ಲಿ ಶೂಗೆ ನಿಗದಿ ಮಾಡಿದ್ದ ದರವನ್ನೇ ಈ ವರ್ಷವೂ ಸರ್ಕಾರ ಫಿಕ್ಸ್ ಮಾಡಿದೆ. ಕಳೆದ ವರ್ಷದ ರೇಟ್ನಲ್ಲಿಯೇ ಶೂ, ಸಾಕ್ಸ್ ಖರೀದಿ ಮಾಡುವಂತೆ ಶಾಲೆಗಳಿಗೆ ಸೂಚನೆ ನೀಡಿದೆ. 2019-20ನೇ ಸಾಲಿನಲ್ಲಿ ಇದ್ದ ದರದಲ್ಲೇ 2023-24ನೇ ಸಾಲಿಗೂ ಶೂ ಖರೀದಿಗೆ ಸರ್ಕಾರದ ಆದೇಶಿಸಿದೆ.
ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿಗಳು ಅನಿವಾರ್ಯವಾಗಿ ಸಂಘ ಸಂಸ್ಥೆಗಳು, ದಾನಿಗಳ ಮೊರೆ ಹೋಗಬೇಕಾಗಿದೆ. ಸರ್ಕಾರದ ಆದೇಶದಿಂದ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು ಕಂಗಾಲಾಗಿದ್ದಾರೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…