ಕೃಷಿ

ಪಿಎಂ ಕಿಸಾನ್ ಪಟ್ಟಿಯಿಂದ ಕೆಲ ರೈತರು ಔಟ್ | ಕಾರಣ ಏನು ಗೊತ್ತಾ? | ನಿಮ್ಮ ಆಧಾರ್‌ ಸೀಡಿಂಗ್‌ ಆಗಿದೆಯೇ ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪಿಎಂ ಕಿಸಾನ್ ಪಟ್ಟಿಯಲ್ಲಿ ಅನರ್ಹರಾಗಿದ್ದ ಕೆಲ ರೈತರ ಹೆಸರುಗಳನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ ತಿಳಿಸಿದ್ದಾರೆ. ಕೈ ಬಿಟ್ಟ ರೈತರನ್ನು ಹೊರತುಪಡಿಸಿ ಉಳಿದೆಲ್ಲಾ ಅರ್ಹ ಫಲಾನುಭವಿಗಳು ಪಿಎಂ ಕಿಸಾನ್ ಯೋಜನೆಯ ಪ್ರಯೋಜನ ಪಡೆಯಬಹುದು ಎಂದು ಲೋಕಸಭೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Advertisement
ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ಹಲವು ನಕಲಿ ನಮೂದುಗಳಿರುವುದರಿಂದ ಅಂತವರ ಹೆಸರನ್ನು ಪತ್ತೆ ಹಚ್ಚಿ ತೆಗೆದುಹಾಕಲಾಗಿದೆ. ಫಲಾನುಭವಿಯ ಡೇಟಾದ ಸರಿಯಾದ ಪರಿಶೀಲನೆ ಮತ್ತು ಮೌಲ್ಯಾಂಕನದ ನಂತರ ಸತ್ತವರು ಸೇರಿದಂತೆ ಅನರ್ಹ ಫಲಾನುಭವಿಗಳನ್ನು ತೆಗೆದುಹಾಕಲಾಗಿದೆ ಎಂದು ಕೇಂದ್ರ ಹೇಳಿದೆ. ಪ್ರಮುಖ ಯೋಜನೆ ಕಡಿತದ ಬಗ್ಗೆ ರೈತರು ಮತ್ತು ವಿರೋಧ ಪಕ್ಷದ ನಾಯಕರಿಂದ ತೀವ್ರ ವಿರೋಧದ ನಂತರ ಅಚಿವರು ಈ ಹೇಳಿಕೆಯನ್ನು ನೀಡಿದ್ದಾರೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಲಭಿಸುತ್ತದೆ. ಕೇಂದ್ರ ಬಜೆಟ್ 2023 ರ ಅಂದಾಜಿನ ಪ್ರಕಾರ, ಪಿಎಂ ಕಿಸಾನ್ ಯೋಜನೆಯ ಹಂಚಿಕೆಯು ರೂ 8,000 ಕೋಟಿಗಳಷ್ಟು ಕಡಿಮೆಯಾಗಿದೆ. ಆದರೆ ಬಜೆಟ್ ಕಡಿತದಿಂದ ಯೋಜನೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹಣಕಾಸು ಸಚಿವರು ಹೇಳಿದರು.
ಯೋಜನೆಯಲ್ಲಿ ಸಾಕಷ್ಟು ಡೇಟಾ ನವೀಕರಣಗಳು ನಡೆಯುತ್ತಿವೆ ಮತ್ತು ಫಲಾನುಭವಿಗಳ ಡಿಪ್ಲಿಕೇಶನ್ ಪರೀಕ್ಷೆಯನ್ನು ಕೃಷಿ ಸಚಿವಾಲಯ ಮಾಡುತ್ತಿದೆ ಎಂದು ಸೀತಾರಾಮನ್ ಪ್ರತಿಪಕ್ಷಗಳಿಗೆ ತಿಳಿಸಿದರು. ಯೋಜನೆಯ ಮೊತ್ತವನ್ನು ಹೆಚ್ಚಿಸುವ ಬಗ್ಗೆ, ಕೃಷಿ ಸಚಿವ ನರೇಂದ್ರ ತೋಮರ್ , ಪಿಎಂ-ಕಿಸಾನ್ ಅಡಿಯಲ್ಲಿ ವರ್ಷಕ್ಕೆ 6,000 ಮೊತ್ತವನ್ನು ಹೆಚ್ಚಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಹೇಳಿದ್ದಾರೆ.

ಪಿಎಂ ಕಿಸಾನ್‌ ಸಹಿತ ಸರ್ಕಾರದ ಎಲ್ಲಾ ಯೋಜನೆಗಳ ಸಹಾಯಧನವು ಇನ್ನು ಮುಂದ ಆಧಾರ್‌ ಕಾರ್ಡ್‌ ನೋಂದಣಿಯಾದ ಬ್ಯಾಂಕ್‌ಗೆ ಮಾತ್ರಾ ಪಾವತಿಯಾಗುತ್ತದೆ. ಅದಕ್ಕಾಗಿ ಆಧಾರ್‌ ಸೀಡಿಂಗ್‌ ಕಾರ್ಯ ನಡೆಯುತ್ತದೆ. ನಿಮ್ಮ ಬ್ಯಾಂಕ್‌ ಖಾತೆಗೆ ಆಧಾರ್‌ ಕಾರ್ಡ್‌ ಸಂಖ್ಯೆಯು ಲಿಂಕ್‌ ಆಗಿರಬೇಕು, ಕೇವಲ ಲಿಂಕ್‌ ಆಗಿದ್ದರೆ ಸಾಲದು ಸೀಡಿಂಗ್‌ ಆಗಿರಬೇಕು. ಸೀಡಿಂಗ್‌ ಆಗಿರದ ಆಧಾರ್‌ ಕಾರ್ಡ್‌ಗಳಿಗೆ ಸಹಾಯಧನವು ಮುಂದಿನ ದಿನಗಳಲ್ಲಿ ಪಾವತಿಯಾಗುವುದಿಲ್ಲ.ಈಗ ಪಿಎಂ ಕಿಸಾನ್‌ ಯೋಜನೆಯಲ್ಲೂ ಇದೇ ಸಮಸ್ಯೆಯಾಗುತ್ತಿದೆ.

Advertisement

ನಕಲಿ ವಿಳಾಸಗಳು, ಮೃತರ ಖಾತೆಗೆ ಹಣ ಪಾವತಿ ತಡೆಯಲು ಮುಂದಿನ ದಿನಗಳಲ್ಲಿ ಬ್ಯಾಂಕ್‌ ಖಾತೆಗಳ ಬದಲಾಗಿ ಆಧಾರ್‌ ಸಂಖ್ಯೆಗಳಿಗೆ ಹಣ ಪಾವತಿಯಾಗುತ್ತದೆ. ಈ ಸಂದರ್ಭದಲ್ಲಿ ಆಧಾರ್‌ ಸಂಖ್ಯೆಗೆ ಬ್ಯಾಂಕ್‌ ಖಾತೆಗಳು ಸೀಡಿಂಗ್‌ ಆಗಿರಬೇಕಾಗಿರುತ್ತದೆ. ಒಂದು ಆಧಾರ್‌ ಗೆ ಒಂದು ಖಾತೆ ಮಾತ್ರಾ ಸೀಡಿಂಗ್‌ ಆಗಿರುತ್ತದೆ. ಆಧಾರ್‌ ಗೆ ನಿಮ್ಮ ಬ್ಯಾಕ್‌ ಖಾತೆ ಸೀಡಿಂಗ್‌ ಆಗಿದೆಯೇ ಎಂದು ಪರಿಶೀಲನೆ ಮಾಡಲು ಈ  ಲಿಂಕ್‌ ಮೂಲಕ ಗಮನಿಸಬಹುದಾಗಿದೆ. https://resident.uidai.gov.in/bank-mapper   

ಒಂದು ವೇಳೆ ಆಧಾರ್‌ ಸಂಖ್ಯೆ ಜೊತೆ ನಿಮ್ಮ ಬ್ಯಾಂಕ್‌ ಖಾತೆ ಲಿಂಕ್‌ ಆಗದೇ ಇದ್ದರೆ ಅಥವಾ ಸೀಡಿಂಗ್‌ ಆಗದೇ ಇದ್ದರೆ ಬ್ಯಾಂಕ್‌ ನಲ್ಲಿ ಈ ಬಗ್ಗೆ ಪ್ರತ್ಯೇಕವಾಗಿ ತಿಳಿಸಿ ಸೀಡಿಂಗ್‌ ಮಾಡಿಸಿದರೆ ಪಿಎಂ ಕಿಸಾನ್‌ ಯೋಜನೆಯ ಹಣ ಹಾಗೂ ಸರ್ಕಾರದ ಇತರ ಎಲ್ಲಾ ಯೋಜನೆಯ ಹಣವು ಪಾವತಿಯಾಗುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬದುಕು ಪುರಾಣ | ರಾಮಬಾಣದ ಇರಿತ

ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…

3 hours ago

ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್

ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…

4 hours ago

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

13 hours ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

14 hours ago

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ…

14 hours ago

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…

14 hours ago