Advertisement
ಸುದ್ದಿಗಳು

ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರಿ ನೌಕರರ ಆಗ್ರಹ: ಮಾರ್ಚ್ 1 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

Share

ವಿವಿಧ ಬೇಡಿಕೆ ಆಗ್ರಹಿಸಿ ಮಾರ್ಚ್​ 1 ರಿಂದ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿವರೆಗೆ ಮುಷ್ಕರ ಮಾಡಲು ನಿರ್ಧರಿಸಿದ್ದೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್ ಷಡಕ್ಷರಿ ಹೇಳಿದ್ದಾರೆ. ರಾಜ್ಯದ ಎಲ್ಲ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು ಬಜೆಟ್​ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದಾಸೀನತೆ ತೋರಿಸಿದ್ದಾರೆ. ಸಿಎಂ ಬೊಮ್ಮಾಯಿ ಅವರ ಧೋರಣೆಯಿಂದ ರಾಜ್ಯದ 9 ಲಕ್ಷ ನೌಕರರಿಗೆ ಬೇಸರ ಆಗಿದೆ. ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಎಲ್ಲ ನೌಕರರು ಕರ್ತವ್ಯಕ್ಕೆ ಗೈರಾಗುವ ಮೂಲಕ ಹೋರಾಟ ಮಾಡಲು ಸಜ್ಜಾಗಿದ್ದಾರೆ ಎಂದರು.

ಸರ್ಕಾರ 7ನೇ ವೇತನ ಆಯೋಗದ ಶಿಫಾರಸನ್ನು ಮಧ್ಯಂತರ ಆದೇಶ ಹೊರಡಿಸಬೇಕು. ಅಂದ್ರೆ ಮಾತ್ರ ನಮ್ಮ ಹೋರಾಟ ವಾಪಸ್ ಪಡೆಯುತ್ತೇವೆ ಇಲ್ಲದಿದ್ದರೆ ಮುಷ್ಕರ ಮಾಡುವುದು ಖಚಿತ.  ಇನ್ನೂ 3-4 ದಿನ ಸಮಯವಿದೆ, ಸರ್ಕಾರ ಒಂದು ಉತ್ತಮ ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನುವ ವಿಶ್ವಾಸ ಇದೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

7 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

12 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

13 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

23 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

1 day ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

1 day ago