ವಿವಿಧ ಬೇಡಿಕೆ ಆಗ್ರಹಿಸಿ ಮಾರ್ಚ್ 1 ರಿಂದ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿವರೆಗೆ ಮುಷ್ಕರ ಮಾಡಲು ನಿರ್ಧರಿಸಿದ್ದೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್ ಷಡಕ್ಷರಿ ಹೇಳಿದ್ದಾರೆ. ರಾಜ್ಯದ ಎಲ್ಲ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು ಬಜೆಟ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದಾಸೀನತೆ ತೋರಿಸಿದ್ದಾರೆ. ಸಿಎಂ ಬೊಮ್ಮಾಯಿ ಅವರ ಧೋರಣೆಯಿಂದ ರಾಜ್ಯದ 9 ಲಕ್ಷ ನೌಕರರಿಗೆ ಬೇಸರ ಆಗಿದೆ. ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಎಲ್ಲ ನೌಕರರು ಕರ್ತವ್ಯಕ್ಕೆ ಗೈರಾಗುವ ಮೂಲಕ ಹೋರಾಟ ಮಾಡಲು ಸಜ್ಜಾಗಿದ್ದಾರೆ ಎಂದರು.
ಸರ್ಕಾರ 7ನೇ ವೇತನ ಆಯೋಗದ ಶಿಫಾರಸನ್ನು ಮಧ್ಯಂತರ ಆದೇಶ ಹೊರಡಿಸಬೇಕು. ಅಂದ್ರೆ ಮಾತ್ರ ನಮ್ಮ ಹೋರಾಟ ವಾಪಸ್ ಪಡೆಯುತ್ತೇವೆ ಇಲ್ಲದಿದ್ದರೆ ಮುಷ್ಕರ ಮಾಡುವುದು ಖಚಿತ. ಇನ್ನೂ 3-4 ದಿನ ಸಮಯವಿದೆ, ಸರ್ಕಾರ ಒಂದು ಉತ್ತಮ ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನುವ ವಿಶ್ವಾಸ ಇದೆ ಎಂದು ಹೇಳಿದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…