ಸುದ್ದಿಗಳು

ನೈಸರ್ಗಿಕ ಕೃಷಿಗೆ ಸರ್ಕಾರದಿಂದ ಉತ್ತೇಜನ | ಪ್ರತಿ ಎಕರೆಗೆ ಸಹಾಯಧನ…|

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರ್ನಾಟಕ ಸರ್ಕಾರವು ಕೃಷಿ ಭೂಮಿಯನ್ನು ಉಳಿಸುವುದರ ಜೊತೆಗೆ ಉತ್ತಮ ಗುಣಮಟ್ಟದ ಆಹಾರ ಧಾನ್ಯಗಳ ಬೆಳೆಯುವ ನೈಸರ್ಗಿಕ ಕೃಷಿಯ ಮೂಲಕ ಸಿರಿಧಾನ್ಯಗಳಿಗೆ ಇನ್ನಷ್ಟು ಆದ್ಯತೆಯನ್ನು ನೀಡಲು ಮುಂದಾಗಿದೆ. ರಾಸಾಯನಿಕ ಬಳಕೆಯಿಂದ ಕೃಷಿ ಭೂಮಿಯು ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಇದು ಹೀಗೇ ಮುಂದುವರೆದರೆ ಆಹಾರ ಧಾನ್ಯಗಳ ಉತ್ಪಾದನೆ ಮೇಲೆ ನೇರ ಪರಿಣಾಮ ಬೀರುವುದರ ಬಗ್ಗೆ ಎಚ್ಚೆತ್ತುಗೊಂಡ ಸರ್ಕಾರ,ಇದನ್ನು ತಪ್ಪಿಸಲು ಮುಂದಾಗಿದೆ.

Advertisement

ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ತಮ್ಮ ಮೊದಲ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ನೈಸರ್ಗಿಕ ಕೃಷಿ ಯೋಜನೆಯನ್ನು ಮತ್ತಷ್ಟು ವಿಸ್ತರಣೆ ಮಾಡಲು ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳಿಗೆ ಸಂಬಂಧಿಸಿದ ಐದು ವಿಶ್ವವಿದ್ಯಾಲಯ ವ್ಯಾಪ್ತಿಯ ತಲಾ ಒಂದು ಸಾವಿರ ಹೆಕ್ಟರ್ ನಲ್ಲಿ ನೈಸರ್ಗಿಕ ಕೃಷಿ ಮಾಡಲು ಘೋಷಣೆ ಮಾಡಲಾಗಿತ್ತು. ಅದಕ್ಕೀಗ ಸರ್ಕಾರ ಸಿದ್ಧತೆಯನ್ನು ನಡೆಸಿದೆ.

ನೈಸರ್ಗಿಕ ಕೃಷಿ ಅವಲಂಬಿಸಿದ ರೈತರಿಗೆ ಪ್ರತಿ ಎಕ್ಕರೆಗೆ ರೂ.7000 ಪ್ರೋತ್ಸಾಹ ಧನವನ್ನು ಸರ್ಕಾರ ನೀಡಲು ಮುಂದಾಗಿದೆ. ಇದನ್ನು ಹೆಚ್ಚಿಸುವ ಚಿಂತನೆಯೂ ಸರ್ಕಾರಕ್ಕಿದೆ. ಪ್ರತಿ ವರ್ಷ ದೇಶದಲ್ಲಿ ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳಿಗೆ ಸುಮಾರು ಮೂರು ಲಕ್ಷ ಕೋಟಿ ರೂಪಾಯಿಗಳ ಸಬ್ಸಿಡಿ ನೀಡಲಾಗುತ್ತಿದೆ.ಇದನ್ನು ಕಡಿಮೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.ಅದಕ್ಕಾಗಿಯೇ ನೈಸರ್ಗಿಕ ಕೃಷಿ ಪದ್ಧತಿಗೆ ಆದ್ಯತೆ ನೀಡುವುದು ಸರ್ಕಾರದ ಉದ್ದೇಶವಾಗಿದ್ದು,ಈ ನಿಟ್ಟಿನಲ್ಲಿ ರೈತರಿಗೆ ಪ್ರತಿ ಎಕ್ಕರೆಗೆ ರೂ.7000 ಪ್ರೋತ್ಸಾಹ ಧನ ನೀಡುವ ಮೂಲಕ ನೈಸರ್ಗಿಕ ಕೃಷಿಗೆ ಉತ್ತೇಜನೆ ನೀಡಲಾಗುತ್ತಿದೆ.

ನೈಸರ್ಗಿಕ ಕೃಷಿ ಎಂದರೇನು? : ನೈಸರ್ಗಿಕ ಕೃಷಿಯು ರಾಸಾಯನಿಕ ಮುಕ್ತ ಅಥವಾ ಸಾಂಪ್ರದಾಯಿಕ ಕೃಷಿ ವಿಧಾನವಾಗಿದೆ. ಇದು ಬೆಳೆಗಳು,ಮರಗಳು ಮತ್ತು ಜಾನುವಾರಗಳನ್ನು ಕ್ರಿಯಾತ್ಮಕ ಜೀವ ವೈವಿಧ್ಯತೆಯೊಂದಿಗೆ ಸಂಯೋಜಿಸುವ ಕೃಷಿ ವಿಜ್ಞಾನ ಆಧಾರಿತ ವೈವಿಧ್ಯಮಯ ವ್ಯವಸ್ಥೆ ಎಂದು ಪರಿಗಣಿಸಲಾಗಿದೆ. ಇದರಿಂದ ರಾಸಾಯನಿಕ ಬಳಕೆ ಕಡಿಮೆಯಾಗಿ ಭೂಮಿಯ ಫಲವತ್ತತೆಯೂ ಉಳಿಯುತ್ತದೆ ಹಾಗೂ ಉತ್ತಮ ಗುಣಮಟ್ಟದ ಪದಾರ್ಥಗಳನ್ನು ಬೆಳೆಯಬಹುದು.

ಒಂದುವರೆ ದರ್ಶ ದಶಕದ ಹಿಂದೆ ಮಣ್ಣಿನಲ್ಲಿ ಸಾವಯವ ಇಂಗಾಲದ ಪ್ರಮಾಣ ಶೇಕಡ 1 ರಿಂದ 1.5 ಇತ್ತು. ಆದರೆ ಈಗ 0.5ಕ್ಕೆ ಇಳಿಕೆ ಆಗಿರುವುದು ಗಮನಹರಿಸಬೇಕಾದ ವಿಷಯ. ಇದು ಹೀಗೇ ಮುಂದುವರೆದರೆ ಕೃಷಿ ಉತ್ಪನ್ನಗಳಿಗೆ ಪರಾವಲಂಬಿಯಾಗಬೇಕಾಗುತ್ತದೆ.ಇದರಿಂದ ಶೇ.25 ಆಹಾರ ಉತ್ಪಾದನೆ ಕಡಮೆಯಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

3 hours ago

ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್

ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…

3 hours ago

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

10 hours ago

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ

ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…

16 hours ago

ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ

ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ…

17 hours ago

ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ  | ಉಪಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ

ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ…

17 hours ago