ಸುದ್ದಿಗಳು

ನೈಸರ್ಗಿಕ ಕೃಷಿಗೆ ಸರ್ಕಾರದಿಂದ ಉತ್ತೇಜನ | ಪ್ರತಿ ಎಕರೆಗೆ ಸಹಾಯಧನ…|

Share

ಕರ್ನಾಟಕ ಸರ್ಕಾರವು ಕೃಷಿ ಭೂಮಿಯನ್ನು ಉಳಿಸುವುದರ ಜೊತೆಗೆ ಉತ್ತಮ ಗುಣಮಟ್ಟದ ಆಹಾರ ಧಾನ್ಯಗಳ ಬೆಳೆಯುವ ನೈಸರ್ಗಿಕ ಕೃಷಿಯ ಮೂಲಕ ಸಿರಿಧಾನ್ಯಗಳಿಗೆ ಇನ್ನಷ್ಟು ಆದ್ಯತೆಯನ್ನು ನೀಡಲು ಮುಂದಾಗಿದೆ. ರಾಸಾಯನಿಕ ಬಳಕೆಯಿಂದ ಕೃಷಿ ಭೂಮಿಯು ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಇದು ಹೀಗೇ ಮುಂದುವರೆದರೆ ಆಹಾರ ಧಾನ್ಯಗಳ ಉತ್ಪಾದನೆ ಮೇಲೆ ನೇರ ಪರಿಣಾಮ ಬೀರುವುದರ ಬಗ್ಗೆ ಎಚ್ಚೆತ್ತುಗೊಂಡ ಸರ್ಕಾರ,ಇದನ್ನು ತಪ್ಪಿಸಲು ಮುಂದಾಗಿದೆ.

ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ತಮ್ಮ ಮೊದಲ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ನೈಸರ್ಗಿಕ ಕೃಷಿ ಯೋಜನೆಯನ್ನು ಮತ್ತಷ್ಟು ವಿಸ್ತರಣೆ ಮಾಡಲು ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳಿಗೆ ಸಂಬಂಧಿಸಿದ ಐದು ವಿಶ್ವವಿದ್ಯಾಲಯ ವ್ಯಾಪ್ತಿಯ ತಲಾ ಒಂದು ಸಾವಿರ ಹೆಕ್ಟರ್ ನಲ್ಲಿ ನೈಸರ್ಗಿಕ ಕೃಷಿ ಮಾಡಲು ಘೋಷಣೆ ಮಾಡಲಾಗಿತ್ತು. ಅದಕ್ಕೀಗ ಸರ್ಕಾರ ಸಿದ್ಧತೆಯನ್ನು ನಡೆಸಿದೆ.

ನೈಸರ್ಗಿಕ ಕೃಷಿ ಅವಲಂಬಿಸಿದ ರೈತರಿಗೆ ಪ್ರತಿ ಎಕ್ಕರೆಗೆ ರೂ.7000 ಪ್ರೋತ್ಸಾಹ ಧನವನ್ನು ಸರ್ಕಾರ ನೀಡಲು ಮುಂದಾಗಿದೆ. ಇದನ್ನು ಹೆಚ್ಚಿಸುವ ಚಿಂತನೆಯೂ ಸರ್ಕಾರಕ್ಕಿದೆ. ಪ್ರತಿ ವರ್ಷ ದೇಶದಲ್ಲಿ ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳಿಗೆ ಸುಮಾರು ಮೂರು ಲಕ್ಷ ಕೋಟಿ ರೂಪಾಯಿಗಳ ಸಬ್ಸಿಡಿ ನೀಡಲಾಗುತ್ತಿದೆ.ಇದನ್ನು ಕಡಿಮೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.ಅದಕ್ಕಾಗಿಯೇ ನೈಸರ್ಗಿಕ ಕೃಷಿ ಪದ್ಧತಿಗೆ ಆದ್ಯತೆ ನೀಡುವುದು ಸರ್ಕಾರದ ಉದ್ದೇಶವಾಗಿದ್ದು,ಈ ನಿಟ್ಟಿನಲ್ಲಿ ರೈತರಿಗೆ ಪ್ರತಿ ಎಕ್ಕರೆಗೆ ರೂ.7000 ಪ್ರೋತ್ಸಾಹ ಧನ ನೀಡುವ ಮೂಲಕ ನೈಸರ್ಗಿಕ ಕೃಷಿಗೆ ಉತ್ತೇಜನೆ ನೀಡಲಾಗುತ್ತಿದೆ.

ನೈಸರ್ಗಿಕ ಕೃಷಿ ಎಂದರೇನು? : ನೈಸರ್ಗಿಕ ಕೃಷಿಯು ರಾಸಾಯನಿಕ ಮುಕ್ತ ಅಥವಾ ಸಾಂಪ್ರದಾಯಿಕ ಕೃಷಿ ವಿಧಾನವಾಗಿದೆ. ಇದು ಬೆಳೆಗಳು,ಮರಗಳು ಮತ್ತು ಜಾನುವಾರಗಳನ್ನು ಕ್ರಿಯಾತ್ಮಕ ಜೀವ ವೈವಿಧ್ಯತೆಯೊಂದಿಗೆ ಸಂಯೋಜಿಸುವ ಕೃಷಿ ವಿಜ್ಞಾನ ಆಧಾರಿತ ವೈವಿಧ್ಯಮಯ ವ್ಯವಸ್ಥೆ ಎಂದು ಪರಿಗಣಿಸಲಾಗಿದೆ. ಇದರಿಂದ ರಾಸಾಯನಿಕ ಬಳಕೆ ಕಡಿಮೆಯಾಗಿ ಭೂಮಿಯ ಫಲವತ್ತತೆಯೂ ಉಳಿಯುತ್ತದೆ ಹಾಗೂ ಉತ್ತಮ ಗುಣಮಟ್ಟದ ಪದಾರ್ಥಗಳನ್ನು ಬೆಳೆಯಬಹುದು.

ಒಂದುವರೆ ದರ್ಶ ದಶಕದ ಹಿಂದೆ ಮಣ್ಣಿನಲ್ಲಿ ಸಾವಯವ ಇಂಗಾಲದ ಪ್ರಮಾಣ ಶೇಕಡ 1 ರಿಂದ 1.5 ಇತ್ತು. ಆದರೆ ಈಗ 0.5ಕ್ಕೆ ಇಳಿಕೆ ಆಗಿರುವುದು ಗಮನಹರಿಸಬೇಕಾದ ವಿಷಯ. ಇದು ಹೀಗೇ ಮುಂದುವರೆದರೆ ಕೃಷಿ ಉತ್ಪನ್ನಗಳಿಗೆ ಪರಾವಲಂಬಿಯಾಗಬೇಕಾಗುತ್ತದೆ.ಇದರಿಂದ ಶೇ.25 ಆಹಾರ ಉತ್ಪಾದನೆ ಕಡಮೆಯಾಗುತ್ತದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…

4 hours ago

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…

4 hours ago

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

19 hours ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

19 hours ago

ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…

19 hours ago

ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ

ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…

19 hours ago