Advertisement
ಸುದ್ದಿಗಳು

ನೈಸರ್ಗಿಕ ಕೃಷಿಗೆ ಸರ್ಕಾರದಿಂದ ಉತ್ತೇಜನ | ಪ್ರತಿ ಎಕರೆಗೆ ಸಹಾಯಧನ…|

Share

ಕರ್ನಾಟಕ ಸರ್ಕಾರವು ಕೃಷಿ ಭೂಮಿಯನ್ನು ಉಳಿಸುವುದರ ಜೊತೆಗೆ ಉತ್ತಮ ಗುಣಮಟ್ಟದ ಆಹಾರ ಧಾನ್ಯಗಳ ಬೆಳೆಯುವ ನೈಸರ್ಗಿಕ ಕೃಷಿಯ ಮೂಲಕ ಸಿರಿಧಾನ್ಯಗಳಿಗೆ ಇನ್ನಷ್ಟು ಆದ್ಯತೆಯನ್ನು ನೀಡಲು ಮುಂದಾಗಿದೆ. ರಾಸಾಯನಿಕ ಬಳಕೆಯಿಂದ ಕೃಷಿ ಭೂಮಿಯು ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಇದು ಹೀಗೇ ಮುಂದುವರೆದರೆ ಆಹಾರ ಧಾನ್ಯಗಳ ಉತ್ಪಾದನೆ ಮೇಲೆ ನೇರ ಪರಿಣಾಮ ಬೀರುವುದರ ಬಗ್ಗೆ ಎಚ್ಚೆತ್ತುಗೊಂಡ ಸರ್ಕಾರ,ಇದನ್ನು ತಪ್ಪಿಸಲು ಮುಂದಾಗಿದೆ.

ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ತಮ್ಮ ಮೊದಲ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ನೈಸರ್ಗಿಕ ಕೃಷಿ ಯೋಜನೆಯನ್ನು ಮತ್ತಷ್ಟು ವಿಸ್ತರಣೆ ಮಾಡಲು ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳಿಗೆ ಸಂಬಂಧಿಸಿದ ಐದು ವಿಶ್ವವಿದ್ಯಾಲಯ ವ್ಯಾಪ್ತಿಯ ತಲಾ ಒಂದು ಸಾವಿರ ಹೆಕ್ಟರ್ ನಲ್ಲಿ ನೈಸರ್ಗಿಕ ಕೃಷಿ ಮಾಡಲು ಘೋಷಣೆ ಮಾಡಲಾಗಿತ್ತು. ಅದಕ್ಕೀಗ ಸರ್ಕಾರ ಸಿದ್ಧತೆಯನ್ನು ನಡೆಸಿದೆ.

Advertisement

ನೈಸರ್ಗಿಕ ಕೃಷಿ ಅವಲಂಬಿಸಿದ ರೈತರಿಗೆ ಪ್ರತಿ ಎಕ್ಕರೆಗೆ ರೂ.7000 ಪ್ರೋತ್ಸಾಹ ಧನವನ್ನು ಸರ್ಕಾರ ನೀಡಲು ಮುಂದಾಗಿದೆ. ಇದನ್ನು ಹೆಚ್ಚಿಸುವ ಚಿಂತನೆಯೂ ಸರ್ಕಾರಕ್ಕಿದೆ. ಪ್ರತಿ ವರ್ಷ ದೇಶದಲ್ಲಿ ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳಿಗೆ ಸುಮಾರು ಮೂರು ಲಕ್ಷ ಕೋಟಿ ರೂಪಾಯಿಗಳ ಸಬ್ಸಿಡಿ ನೀಡಲಾಗುತ್ತಿದೆ.ಇದನ್ನು ಕಡಿಮೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.ಅದಕ್ಕಾಗಿಯೇ ನೈಸರ್ಗಿಕ ಕೃಷಿ ಪದ್ಧತಿಗೆ ಆದ್ಯತೆ ನೀಡುವುದು ಸರ್ಕಾರದ ಉದ್ದೇಶವಾಗಿದ್ದು,ಈ ನಿಟ್ಟಿನಲ್ಲಿ ರೈತರಿಗೆ ಪ್ರತಿ ಎಕ್ಕರೆಗೆ ರೂ.7000 ಪ್ರೋತ್ಸಾಹ ಧನ ನೀಡುವ ಮೂಲಕ ನೈಸರ್ಗಿಕ ಕೃಷಿಗೆ ಉತ್ತೇಜನೆ ನೀಡಲಾಗುತ್ತಿದೆ.

Advertisement

ನೈಸರ್ಗಿಕ ಕೃಷಿ ಎಂದರೇನು? : ನೈಸರ್ಗಿಕ ಕೃಷಿಯು ರಾಸಾಯನಿಕ ಮುಕ್ತ ಅಥವಾ ಸಾಂಪ್ರದಾಯಿಕ ಕೃಷಿ ವಿಧಾನವಾಗಿದೆ. ಇದು ಬೆಳೆಗಳು,ಮರಗಳು ಮತ್ತು ಜಾನುವಾರಗಳನ್ನು ಕ್ರಿಯಾತ್ಮಕ ಜೀವ ವೈವಿಧ್ಯತೆಯೊಂದಿಗೆ ಸಂಯೋಜಿಸುವ ಕೃಷಿ ವಿಜ್ಞಾನ ಆಧಾರಿತ ವೈವಿಧ್ಯಮಯ ವ್ಯವಸ್ಥೆ ಎಂದು ಪರಿಗಣಿಸಲಾಗಿದೆ. ಇದರಿಂದ ರಾಸಾಯನಿಕ ಬಳಕೆ ಕಡಿಮೆಯಾಗಿ ಭೂಮಿಯ ಫಲವತ್ತತೆಯೂ ಉಳಿಯುತ್ತದೆ ಹಾಗೂ ಉತ್ತಮ ಗುಣಮಟ್ಟದ ಪದಾರ್ಥಗಳನ್ನು ಬೆಳೆಯಬಹುದು.

ಒಂದುವರೆ ದರ್ಶ ದಶಕದ ಹಿಂದೆ ಮಣ್ಣಿನಲ್ಲಿ ಸಾವಯವ ಇಂಗಾಲದ ಪ್ರಮಾಣ ಶೇಕಡ 1 ರಿಂದ 1.5 ಇತ್ತು. ಆದರೆ ಈಗ 0.5ಕ್ಕೆ ಇಳಿಕೆ ಆಗಿರುವುದು ಗಮನಹರಿಸಬೇಕಾದ ವಿಷಯ. ಇದು ಹೀಗೇ ಮುಂದುವರೆದರೆ ಕೃಷಿ ಉತ್ಪನ್ನಗಳಿಗೆ ಪರಾವಲಂಬಿಯಾಗಬೇಕಾಗುತ್ತದೆ.ಇದರಿಂದ ಶೇ.25 ಆಹಾರ ಉತ್ಪಾದನೆ ಕಡಮೆಯಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

4 hours ago

ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…

4 hours ago

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

1 day ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

2 days ago