Advertisement
ಸುದ್ದಿಗಳು

ನೈಸರ್ಗಿಕ ಕೃಷಿಗೆ ಸರ್ಕಾರದಿಂದ ಉತ್ತೇಜನ | ಪ್ರತಿ ಎಕರೆಗೆ ಸಹಾಯಧನ…|

Share

ಕರ್ನಾಟಕ ಸರ್ಕಾರವು ಕೃಷಿ ಭೂಮಿಯನ್ನು ಉಳಿಸುವುದರ ಜೊತೆಗೆ ಉತ್ತಮ ಗುಣಮಟ್ಟದ ಆಹಾರ ಧಾನ್ಯಗಳ ಬೆಳೆಯುವ ನೈಸರ್ಗಿಕ ಕೃಷಿಯ ಮೂಲಕ ಸಿರಿಧಾನ್ಯಗಳಿಗೆ ಇನ್ನಷ್ಟು ಆದ್ಯತೆಯನ್ನು ನೀಡಲು ಮುಂದಾಗಿದೆ. ರಾಸಾಯನಿಕ ಬಳಕೆಯಿಂದ ಕೃಷಿ ಭೂಮಿಯು ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಇದು ಹೀಗೇ ಮುಂದುವರೆದರೆ ಆಹಾರ ಧಾನ್ಯಗಳ ಉತ್ಪಾದನೆ ಮೇಲೆ ನೇರ ಪರಿಣಾಮ ಬೀರುವುದರ ಬಗ್ಗೆ ಎಚ್ಚೆತ್ತುಗೊಂಡ ಸರ್ಕಾರ,ಇದನ್ನು ತಪ್ಪಿಸಲು ಮುಂದಾಗಿದೆ.

ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ತಮ್ಮ ಮೊದಲ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ನೈಸರ್ಗಿಕ ಕೃಷಿ ಯೋಜನೆಯನ್ನು ಮತ್ತಷ್ಟು ವಿಸ್ತರಣೆ ಮಾಡಲು ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳಿಗೆ ಸಂಬಂಧಿಸಿದ ಐದು ವಿಶ್ವವಿದ್ಯಾಲಯ ವ್ಯಾಪ್ತಿಯ ತಲಾ ಒಂದು ಸಾವಿರ ಹೆಕ್ಟರ್ ನಲ್ಲಿ ನೈಸರ್ಗಿಕ ಕೃಷಿ ಮಾಡಲು ಘೋಷಣೆ ಮಾಡಲಾಗಿತ್ತು. ಅದಕ್ಕೀಗ ಸರ್ಕಾರ ಸಿದ್ಧತೆಯನ್ನು ನಡೆಸಿದೆ.

ನೈಸರ್ಗಿಕ ಕೃಷಿ ಅವಲಂಬಿಸಿದ ರೈತರಿಗೆ ಪ್ರತಿ ಎಕ್ಕರೆಗೆ ರೂ.7000 ಪ್ರೋತ್ಸಾಹ ಧನವನ್ನು ಸರ್ಕಾರ ನೀಡಲು ಮುಂದಾಗಿದೆ. ಇದನ್ನು ಹೆಚ್ಚಿಸುವ ಚಿಂತನೆಯೂ ಸರ್ಕಾರಕ್ಕಿದೆ. ಪ್ರತಿ ವರ್ಷ ದೇಶದಲ್ಲಿ ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳಿಗೆ ಸುಮಾರು ಮೂರು ಲಕ್ಷ ಕೋಟಿ ರೂಪಾಯಿಗಳ ಸಬ್ಸಿಡಿ ನೀಡಲಾಗುತ್ತಿದೆ.ಇದನ್ನು ಕಡಿಮೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.ಅದಕ್ಕಾಗಿಯೇ ನೈಸರ್ಗಿಕ ಕೃಷಿ ಪದ್ಧತಿಗೆ ಆದ್ಯತೆ ನೀಡುವುದು ಸರ್ಕಾರದ ಉದ್ದೇಶವಾಗಿದ್ದು,ಈ ನಿಟ್ಟಿನಲ್ಲಿ ರೈತರಿಗೆ ಪ್ರತಿ ಎಕ್ಕರೆಗೆ ರೂ.7000 ಪ್ರೋತ್ಸಾಹ ಧನ ನೀಡುವ ಮೂಲಕ ನೈಸರ್ಗಿಕ ಕೃಷಿಗೆ ಉತ್ತೇಜನೆ ನೀಡಲಾಗುತ್ತಿದೆ.

ನೈಸರ್ಗಿಕ ಕೃಷಿ ಎಂದರೇನು? : ನೈಸರ್ಗಿಕ ಕೃಷಿಯು ರಾಸಾಯನಿಕ ಮುಕ್ತ ಅಥವಾ ಸಾಂಪ್ರದಾಯಿಕ ಕೃಷಿ ವಿಧಾನವಾಗಿದೆ. ಇದು ಬೆಳೆಗಳು,ಮರಗಳು ಮತ್ತು ಜಾನುವಾರಗಳನ್ನು ಕ್ರಿಯಾತ್ಮಕ ಜೀವ ವೈವಿಧ್ಯತೆಯೊಂದಿಗೆ ಸಂಯೋಜಿಸುವ ಕೃಷಿ ವಿಜ್ಞಾನ ಆಧಾರಿತ ವೈವಿಧ್ಯಮಯ ವ್ಯವಸ್ಥೆ ಎಂದು ಪರಿಗಣಿಸಲಾಗಿದೆ. ಇದರಿಂದ ರಾಸಾಯನಿಕ ಬಳಕೆ ಕಡಿಮೆಯಾಗಿ ಭೂಮಿಯ ಫಲವತ್ತತೆಯೂ ಉಳಿಯುತ್ತದೆ ಹಾಗೂ ಉತ್ತಮ ಗುಣಮಟ್ಟದ ಪದಾರ್ಥಗಳನ್ನು ಬೆಳೆಯಬಹುದು.

ಒಂದುವರೆ ದರ್ಶ ದಶಕದ ಹಿಂದೆ ಮಣ್ಣಿನಲ್ಲಿ ಸಾವಯವ ಇಂಗಾಲದ ಪ್ರಮಾಣ ಶೇಕಡ 1 ರಿಂದ 1.5 ಇತ್ತು. ಆದರೆ ಈಗ 0.5ಕ್ಕೆ ಇಳಿಕೆ ಆಗಿರುವುದು ಗಮನಹರಿಸಬೇಕಾದ ವಿಷಯ. ಇದು ಹೀಗೇ ಮುಂದುವರೆದರೆ ಕೃಷಿ ಉತ್ಪನ್ನಗಳಿಗೆ ಪರಾವಲಂಬಿಯಾಗಬೇಕಾಗುತ್ತದೆ.ಇದರಿಂದ ಶೇ.25 ಆಹಾರ ಉತ್ಪಾದನೆ ಕಡಮೆಯಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳೆ ವೈರಸ್‌ ರೋಗಗಳಿಗೆ ಇನ್ನೂ ವ್ಯಾಕ್ಸಿನ್‌ ಇಲ್ಲ..! – ರೋಗ ನಿರೋಧಕ ತಳಿಗಳೇ ಭವಿಷ್ಯದ ಆಶಾಕಿರಣ

ಬೆಳೆ ವೈರಸ್‌ ರೋಗಗಳಿಗೆ ಇನ್ನೂ ವ್ಯಾಕ್ಸಿನ್‌ ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ರೋಗ…

4 minutes ago

ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…

8 hours ago

ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದ ಭರವಸೆ..! ಟಿಶ್ಯೂ ಕಲ್ಚರ್‌ನಲ್ಲಿ ಮೊದಲ ಹಂತದ ಅಡಿಕೆ ಗಿಡಗಳು ನಾಟಿಗೆ ಸಿದ್ಧ

ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್‌ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ…

16 hours ago

ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?

ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…

1 day ago

ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!

ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…

1 day ago

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲೆ – ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಬಹಿರಂಗವಾದ ಅಚ್ಚರಿಯ ಜೀವ ವೈವಿಧ್ಯ

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…

2 days ago