MIRROR FOCUS

#CauveryWater | ಪ್ರಾಧಿಕಾರದ ಸೂಚನೆಗೆ ತಲೆ ಬಾಗಿದ ಸರ್ಕಾರ | ಮತ್ತೆ ತಮಿಳುನಾಡಿಗೆ ನೀರು ಬಿಡುಗಡೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಹಾಗೂ ತಮಿಳುನಾಡಿಗೆ ಒಮ್ಮತ ಒದಗಿ ಬರುತ್ತಲೇ ಇಲ್ಲ. ಅದರಲ್ಲೂ ರಾಜ್ಯ ಸರ್ಕಾರ, ತಮಿಳುನಾಡಿನ ಎದುರು ಹಿನ್ನಡೆಯನ್ನೇ ಅನುಭವಿಸ್ತಿದೆ. ಕೆಆರ್‌ಎಸ್‌ ಡ್ಯಾಂನಲ್ಲಿ ನೀರು ಇಲ್ಲದಿದ್ರೂ ಪ್ರಾಧಿಕಾರ ತಮಿಳುನಾಡಿಗೆ ನೀರು ಬಿಡಲು ತಾಕೀತು ಮಾಡಿದೆ. ಕಾವೇರಿ ನೀರು ಪ್ರಾಧಿಕಾರದ ಸೂಚನೆಗೆ ತಲೆ ಬಾಗಿದ ಕರ್ನಾಟಕ ಸರ್ಕಾರ ರಾತ್ರಿಯಿಂದಲೇ ಕೆಆರ್​ಎಸ್​ ಡ್ಯಾಂನಿಂದ ತಮಿಳುನಾಡಿಗೆ ನೀರು ಹರಿಸುತ್ತಿದೆ. ಪ್ರತಿದಿನ 5 ಸಾವಿರ ಕ್ಯೂಸೆಕ್​ನಂತೆ 15 ದಿನ ನೀರು ಹರಿಸುವಂತೆ ಕಾವೇರಿ ನೀರು ಪ್ರಾಧಿಕಾರ ಸೂಚನೆ ನೀಡಿತ್ತು. ಪ್ರಾಧಿಕಾರದ ಸೂಚನೆ ಹಿನ್ನೆಲೆ ರಾಜ್ಯದ ಜನತೆಯ ವಿರೋಧದ ನಡುವೆಯೂ ಅಧಿಕಾರಿಗಳು ಕಾವೇರಿ ನದಿಗೆ ನೀರು ಹರಿಬಿಟ್ಟಿದ್ದಾರೆ.

Advertisement
Advertisement

ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ಹಿನ್ನೆಲೆ ರೈತ ಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. CWMA ಆದೇಶವನ್ನ ಯಾವುದೇ ಕಾರಣಕ್ಕೂ ಪಾಲಿಸಲು ಸಾಧ್ಯವಿಲ್ಲ ಅಂತ ಆಕ್ರೋಶ ಹೊರಹಾಕಿದ್ದಾರೆ. ಆದರೆ ಸರ್ಕಾರ ಆದೇಶದಂತೆ ನೀರು ಹರಿಸುತ್ತಿದೆ. CWMA ಆದೇಶ ಕುರಿತಂತೆ ಮಂಡ್ಯ ಸಂಸದೆ ಸುಮಲತಾ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಸೇಖಾವತ್‌ ಅವರನ್ನು ಭೇಟಿಯಾಗಿದ್ದಾರೆ. ಮಂಡ್ಯ ಮತ್ತು ಕರ್ನಾಟಕದ ರೈತರು ಬರ ಕಾರಣದಿಂದಾಗಿ ತತ್ತರಿಸಿದ್ದು, ಮಂಡ್ಯ ರೈತರ ಜೀವನಾಡಿ ಆಗಿರುವ ಕಾವೇರಿಯಿಂದ ನಿರಂತರವಾಗಿ ತಮಿಳುನಾಡಿಗೆ ನೀರು ಬಿಡಲಾಗ್ತಿದೆ. ಇದೀಗ ಮತ್ತೆ 15 ದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೇಳಿದೆ ಅಂತ ವಿವರಿಸಿದ್ದಾರೆ.

ಸಂಸದರ ಮನವಿಗೆ ಸ್ಪಂದಿಸಿರೋ ಕೇಂದ್ರ ಜಲಶಕ್ತಿ ಸಚಿವ, ಆಯಾ ರಾಜ್ಯಗಳ ಜಂಟಿ ಸಮಿತಿ ರಚಿಸಲಾಗುವುದು ಮತ್ತು ಮುಂದಿನ ವಾರದಲ್ಲೇ ಸಮೀಕ್ಷೆ ನಡೆಸುವುದಾಗಿ, ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ. ಕಾವೇರಿ ಪ್ರಾಧಿಕಾರ ಆದೇಶ ಹಿನ್ನೆಲೆ, ಮಂಡ್ಯದಲ್ಲಿ ಮತ್ತೆ ರೈತರ ಕಿಚ್ಚು ಭುಗಿಲೆದ್ದಿದೆ. ಪ್ರಾಧಿಕಾರದ ಆದೇಶ ಖಂಡಿಸಿ ರೈತರು ನೀರಿಗಿಳಿದು, ಘೋಷಣೆ ಕೂಗಿ ಕಪ್ಪು ಭಾವುಟ ಪ್ರದರ್ಶನ ಮಾಡಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಾವೇರಿ ಜಿಲ್ಲೆಯಲ್ಲಿ 441 ಸಾಕ್ಷರತಾ ಕಲಿಕಾ ಕೇಂದ್ರ ಸ್ಥಾಪನೆ

ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…

2 minutes ago

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

10 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

11 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

14 hours ago

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…

14 hours ago

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

14 hours ago