ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಹಾಗೂ ತಮಿಳುನಾಡಿಗೆ ಒಮ್ಮತ ಒದಗಿ ಬರುತ್ತಲೇ ಇಲ್ಲ. ಅದರಲ್ಲೂ ರಾಜ್ಯ ಸರ್ಕಾರ, ತಮಿಳುನಾಡಿನ ಎದುರು ಹಿನ್ನಡೆಯನ್ನೇ ಅನುಭವಿಸ್ತಿದೆ. ಕೆಆರ್ಎಸ್ ಡ್ಯಾಂನಲ್ಲಿ ನೀರು ಇಲ್ಲದಿದ್ರೂ ಪ್ರಾಧಿಕಾರ ತಮಿಳುನಾಡಿಗೆ ನೀರು ಬಿಡಲು ತಾಕೀತು ಮಾಡಿದೆ. ಕಾವೇರಿ ನೀರು ಪ್ರಾಧಿಕಾರದ ಸೂಚನೆಗೆ ತಲೆ ಬಾಗಿದ ಕರ್ನಾಟಕ ಸರ್ಕಾರ ರಾತ್ರಿಯಿಂದಲೇ ಕೆಆರ್ಎಸ್ ಡ್ಯಾಂನಿಂದ ತಮಿಳುನಾಡಿಗೆ ನೀರು ಹರಿಸುತ್ತಿದೆ. ಪ್ರತಿದಿನ 5 ಸಾವಿರ ಕ್ಯೂಸೆಕ್ನಂತೆ 15 ದಿನ ನೀರು ಹರಿಸುವಂತೆ ಕಾವೇರಿ ನೀರು ಪ್ರಾಧಿಕಾರ ಸೂಚನೆ ನೀಡಿತ್ತು. ಪ್ರಾಧಿಕಾರದ ಸೂಚನೆ ಹಿನ್ನೆಲೆ ರಾಜ್ಯದ ಜನತೆಯ ವಿರೋಧದ ನಡುವೆಯೂ ಅಧಿಕಾರಿಗಳು ಕಾವೇರಿ ನದಿಗೆ ನೀರು ಹರಿಬಿಟ್ಟಿದ್ದಾರೆ.
ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ಹಿನ್ನೆಲೆ ರೈತ ಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. CWMA ಆದೇಶವನ್ನ ಯಾವುದೇ ಕಾರಣಕ್ಕೂ ಪಾಲಿಸಲು ಸಾಧ್ಯವಿಲ್ಲ ಅಂತ ಆಕ್ರೋಶ ಹೊರಹಾಕಿದ್ದಾರೆ. ಆದರೆ ಸರ್ಕಾರ ಆದೇಶದಂತೆ ನೀರು ಹರಿಸುತ್ತಿದೆ. CWMA ಆದೇಶ ಕುರಿತಂತೆ ಮಂಡ್ಯ ಸಂಸದೆ ಸುಮಲತಾ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಸೇಖಾವತ್ ಅವರನ್ನು ಭೇಟಿಯಾಗಿದ್ದಾರೆ. ಮಂಡ್ಯ ಮತ್ತು ಕರ್ನಾಟಕದ ರೈತರು ಬರ ಕಾರಣದಿಂದಾಗಿ ತತ್ತರಿಸಿದ್ದು, ಮಂಡ್ಯ ರೈತರ ಜೀವನಾಡಿ ಆಗಿರುವ ಕಾವೇರಿಯಿಂದ ನಿರಂತರವಾಗಿ ತಮಿಳುನಾಡಿಗೆ ನೀರು ಬಿಡಲಾಗ್ತಿದೆ. ಇದೀಗ ಮತ್ತೆ 15 ದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೇಳಿದೆ ಅಂತ ವಿವರಿಸಿದ್ದಾರೆ.
ಸಂಸದರ ಮನವಿಗೆ ಸ್ಪಂದಿಸಿರೋ ಕೇಂದ್ರ ಜಲಶಕ್ತಿ ಸಚಿವ, ಆಯಾ ರಾಜ್ಯಗಳ ಜಂಟಿ ಸಮಿತಿ ರಚಿಸಲಾಗುವುದು ಮತ್ತು ಮುಂದಿನ ವಾರದಲ್ಲೇ ಸಮೀಕ್ಷೆ ನಡೆಸುವುದಾಗಿ, ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ. ಕಾವೇರಿ ಪ್ರಾಧಿಕಾರ ಆದೇಶ ಹಿನ್ನೆಲೆ, ಮಂಡ್ಯದಲ್ಲಿ ಮತ್ತೆ ರೈತರ ಕಿಚ್ಚು ಭುಗಿಲೆದ್ದಿದೆ. ಪ್ರಾಧಿಕಾರದ ಆದೇಶ ಖಂಡಿಸಿ ರೈತರು ನೀರಿಗಿಳಿದು, ಘೋಷಣೆ ಕೂಗಿ ಕಪ್ಪು ಭಾವುಟ ಪ್ರದರ್ಶನ ಮಾಡಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…