Advertisement
MIRROR FOCUS

#CauveryWater | ಪ್ರಾಧಿಕಾರದ ಸೂಚನೆಗೆ ತಲೆ ಬಾಗಿದ ಸರ್ಕಾರ | ಮತ್ತೆ ತಮಿಳುನಾಡಿಗೆ ನೀರು ಬಿಡುಗಡೆ

Share

ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಹಾಗೂ ತಮಿಳುನಾಡಿಗೆ ಒಮ್ಮತ ಒದಗಿ ಬರುತ್ತಲೇ ಇಲ್ಲ. ಅದರಲ್ಲೂ ರಾಜ್ಯ ಸರ್ಕಾರ, ತಮಿಳುನಾಡಿನ ಎದುರು ಹಿನ್ನಡೆಯನ್ನೇ ಅನುಭವಿಸ್ತಿದೆ. ಕೆಆರ್‌ಎಸ್‌ ಡ್ಯಾಂನಲ್ಲಿ ನೀರು ಇಲ್ಲದಿದ್ರೂ ಪ್ರಾಧಿಕಾರ ತಮಿಳುನಾಡಿಗೆ ನೀರು ಬಿಡಲು ತಾಕೀತು ಮಾಡಿದೆ. ಕಾವೇರಿ ನೀರು ಪ್ರಾಧಿಕಾರದ ಸೂಚನೆಗೆ ತಲೆ ಬಾಗಿದ ಕರ್ನಾಟಕ ಸರ್ಕಾರ ರಾತ್ರಿಯಿಂದಲೇ ಕೆಆರ್​ಎಸ್​ ಡ್ಯಾಂನಿಂದ ತಮಿಳುನಾಡಿಗೆ ನೀರು ಹರಿಸುತ್ತಿದೆ. ಪ್ರತಿದಿನ 5 ಸಾವಿರ ಕ್ಯೂಸೆಕ್​ನಂತೆ 15 ದಿನ ನೀರು ಹರಿಸುವಂತೆ ಕಾವೇರಿ ನೀರು ಪ್ರಾಧಿಕಾರ ಸೂಚನೆ ನೀಡಿತ್ತು. ಪ್ರಾಧಿಕಾರದ ಸೂಚನೆ ಹಿನ್ನೆಲೆ ರಾಜ್ಯದ ಜನತೆಯ ವಿರೋಧದ ನಡುವೆಯೂ ಅಧಿಕಾರಿಗಳು ಕಾವೇರಿ ನದಿಗೆ ನೀರು ಹರಿಬಿಟ್ಟಿದ್ದಾರೆ.

ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ಹಿನ್ನೆಲೆ ರೈತ ಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. CWMA ಆದೇಶವನ್ನ ಯಾವುದೇ ಕಾರಣಕ್ಕೂ ಪಾಲಿಸಲು ಸಾಧ್ಯವಿಲ್ಲ ಅಂತ ಆಕ್ರೋಶ ಹೊರಹಾಕಿದ್ದಾರೆ. ಆದರೆ ಸರ್ಕಾರ ಆದೇಶದಂತೆ ನೀರು ಹರಿಸುತ್ತಿದೆ. CWMA ಆದೇಶ ಕುರಿತಂತೆ ಮಂಡ್ಯ ಸಂಸದೆ ಸುಮಲತಾ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಸೇಖಾವತ್‌ ಅವರನ್ನು ಭೇಟಿಯಾಗಿದ್ದಾರೆ. ಮಂಡ್ಯ ಮತ್ತು ಕರ್ನಾಟಕದ ರೈತರು ಬರ ಕಾರಣದಿಂದಾಗಿ ತತ್ತರಿಸಿದ್ದು, ಮಂಡ್ಯ ರೈತರ ಜೀವನಾಡಿ ಆಗಿರುವ ಕಾವೇರಿಯಿಂದ ನಿರಂತರವಾಗಿ ತಮಿಳುನಾಡಿಗೆ ನೀರು ಬಿಡಲಾಗ್ತಿದೆ. ಇದೀಗ ಮತ್ತೆ 15 ದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೇಳಿದೆ ಅಂತ ವಿವರಿಸಿದ್ದಾರೆ.

ಸಂಸದರ ಮನವಿಗೆ ಸ್ಪಂದಿಸಿರೋ ಕೇಂದ್ರ ಜಲಶಕ್ತಿ ಸಚಿವ, ಆಯಾ ರಾಜ್ಯಗಳ ಜಂಟಿ ಸಮಿತಿ ರಚಿಸಲಾಗುವುದು ಮತ್ತು ಮುಂದಿನ ವಾರದಲ್ಲೇ ಸಮೀಕ್ಷೆ ನಡೆಸುವುದಾಗಿ, ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ. ಕಾವೇರಿ ಪ್ರಾಧಿಕಾರ ಆದೇಶ ಹಿನ್ನೆಲೆ, ಮಂಡ್ಯದಲ್ಲಿ ಮತ್ತೆ ರೈತರ ಕಿಚ್ಚು ಭುಗಿಲೆದ್ದಿದೆ. ಪ್ರಾಧಿಕಾರದ ಆದೇಶ ಖಂಡಿಸಿ ರೈತರು ನೀರಿಗಿಳಿದು, ಘೋಷಣೆ ಕೂಗಿ ಕಪ್ಪು ಭಾವುಟ ಪ್ರದರ್ಶನ ಮಾಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

4 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

4 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

4 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

9 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago