Advertisement
MIRROR FOCUS

#CauveryWater | ಪ್ರಾಧಿಕಾರದ ಸೂಚನೆಗೆ ತಲೆ ಬಾಗಿದ ಸರ್ಕಾರ | ಮತ್ತೆ ತಮಿಳುನಾಡಿಗೆ ನೀರು ಬಿಡುಗಡೆ

Share

ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಹಾಗೂ ತಮಿಳುನಾಡಿಗೆ ಒಮ್ಮತ ಒದಗಿ ಬರುತ್ತಲೇ ಇಲ್ಲ. ಅದರಲ್ಲೂ ರಾಜ್ಯ ಸರ್ಕಾರ, ತಮಿಳುನಾಡಿನ ಎದುರು ಹಿನ್ನಡೆಯನ್ನೇ ಅನುಭವಿಸ್ತಿದೆ. ಕೆಆರ್‌ಎಸ್‌ ಡ್ಯಾಂನಲ್ಲಿ ನೀರು ಇಲ್ಲದಿದ್ರೂ ಪ್ರಾಧಿಕಾರ ತಮಿಳುನಾಡಿಗೆ ನೀರು ಬಿಡಲು ತಾಕೀತು ಮಾಡಿದೆ. ಕಾವೇರಿ ನೀರು ಪ್ರಾಧಿಕಾರದ ಸೂಚನೆಗೆ ತಲೆ ಬಾಗಿದ ಕರ್ನಾಟಕ ಸರ್ಕಾರ ರಾತ್ರಿಯಿಂದಲೇ ಕೆಆರ್​ಎಸ್​ ಡ್ಯಾಂನಿಂದ ತಮಿಳುನಾಡಿಗೆ ನೀರು ಹರಿಸುತ್ತಿದೆ. ಪ್ರತಿದಿನ 5 ಸಾವಿರ ಕ್ಯೂಸೆಕ್​ನಂತೆ 15 ದಿನ ನೀರು ಹರಿಸುವಂತೆ ಕಾವೇರಿ ನೀರು ಪ್ರಾಧಿಕಾರ ಸೂಚನೆ ನೀಡಿತ್ತು. ಪ್ರಾಧಿಕಾರದ ಸೂಚನೆ ಹಿನ್ನೆಲೆ ರಾಜ್ಯದ ಜನತೆಯ ವಿರೋಧದ ನಡುವೆಯೂ ಅಧಿಕಾರಿಗಳು ಕಾವೇರಿ ನದಿಗೆ ನೀರು ಹರಿಬಿಟ್ಟಿದ್ದಾರೆ.

ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ಹಿನ್ನೆಲೆ ರೈತ ಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. CWMA ಆದೇಶವನ್ನ ಯಾವುದೇ ಕಾರಣಕ್ಕೂ ಪಾಲಿಸಲು ಸಾಧ್ಯವಿಲ್ಲ ಅಂತ ಆಕ್ರೋಶ ಹೊರಹಾಕಿದ್ದಾರೆ. ಆದರೆ ಸರ್ಕಾರ ಆದೇಶದಂತೆ ನೀರು ಹರಿಸುತ್ತಿದೆ. CWMA ಆದೇಶ ಕುರಿತಂತೆ ಮಂಡ್ಯ ಸಂಸದೆ ಸುಮಲತಾ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಸೇಖಾವತ್‌ ಅವರನ್ನು ಭೇಟಿಯಾಗಿದ್ದಾರೆ. ಮಂಡ್ಯ ಮತ್ತು ಕರ್ನಾಟಕದ ರೈತರು ಬರ ಕಾರಣದಿಂದಾಗಿ ತತ್ತರಿಸಿದ್ದು, ಮಂಡ್ಯ ರೈತರ ಜೀವನಾಡಿ ಆಗಿರುವ ಕಾವೇರಿಯಿಂದ ನಿರಂತರವಾಗಿ ತಮಿಳುನಾಡಿಗೆ ನೀರು ಬಿಡಲಾಗ್ತಿದೆ. ಇದೀಗ ಮತ್ತೆ 15 ದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೇಳಿದೆ ಅಂತ ವಿವರಿಸಿದ್ದಾರೆ.

ಸಂಸದರ ಮನವಿಗೆ ಸ್ಪಂದಿಸಿರೋ ಕೇಂದ್ರ ಜಲಶಕ್ತಿ ಸಚಿವ, ಆಯಾ ರಾಜ್ಯಗಳ ಜಂಟಿ ಸಮಿತಿ ರಚಿಸಲಾಗುವುದು ಮತ್ತು ಮುಂದಿನ ವಾರದಲ್ಲೇ ಸಮೀಕ್ಷೆ ನಡೆಸುವುದಾಗಿ, ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ. ಕಾವೇರಿ ಪ್ರಾಧಿಕಾರ ಆದೇಶ ಹಿನ್ನೆಲೆ, ಮಂಡ್ಯದಲ್ಲಿ ಮತ್ತೆ ರೈತರ ಕಿಚ್ಚು ಭುಗಿಲೆದ್ದಿದೆ. ಪ್ರಾಧಿಕಾರದ ಆದೇಶ ಖಂಡಿಸಿ ರೈತರು ನೀರಿಗಿಳಿದು, ಘೋಷಣೆ ಕೂಗಿ ಕಪ್ಪು ಭಾವುಟ ಪ್ರದರ್ಶನ ಮಾಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

10 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

10 hours ago

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

15 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

23 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

2 days ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

2 days ago