Advertisement
MIRROR FOCUS

#CauveryWater | ಪ್ರಾಧಿಕಾರದ ಸೂಚನೆಗೆ ತಲೆ ಬಾಗಿದ ಸರ್ಕಾರ | ಮತ್ತೆ ತಮಿಳುನಾಡಿಗೆ ನೀರು ಬಿಡುಗಡೆ

Share

ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಹಾಗೂ ತಮಿಳುನಾಡಿಗೆ ಒಮ್ಮತ ಒದಗಿ ಬರುತ್ತಲೇ ಇಲ್ಲ. ಅದರಲ್ಲೂ ರಾಜ್ಯ ಸರ್ಕಾರ, ತಮಿಳುನಾಡಿನ ಎದುರು ಹಿನ್ನಡೆಯನ್ನೇ ಅನುಭವಿಸ್ತಿದೆ. ಕೆಆರ್‌ಎಸ್‌ ಡ್ಯಾಂನಲ್ಲಿ ನೀರು ಇಲ್ಲದಿದ್ರೂ ಪ್ರಾಧಿಕಾರ ತಮಿಳುನಾಡಿಗೆ ನೀರು ಬಿಡಲು ತಾಕೀತು ಮಾಡಿದೆ. ಕಾವೇರಿ ನೀರು ಪ್ರಾಧಿಕಾರದ ಸೂಚನೆಗೆ ತಲೆ ಬಾಗಿದ ಕರ್ನಾಟಕ ಸರ್ಕಾರ ರಾತ್ರಿಯಿಂದಲೇ ಕೆಆರ್​ಎಸ್​ ಡ್ಯಾಂನಿಂದ ತಮಿಳುನಾಡಿಗೆ ನೀರು ಹರಿಸುತ್ತಿದೆ. ಪ್ರತಿದಿನ 5 ಸಾವಿರ ಕ್ಯೂಸೆಕ್​ನಂತೆ 15 ದಿನ ನೀರು ಹರಿಸುವಂತೆ ಕಾವೇರಿ ನೀರು ಪ್ರಾಧಿಕಾರ ಸೂಚನೆ ನೀಡಿತ್ತು. ಪ್ರಾಧಿಕಾರದ ಸೂಚನೆ ಹಿನ್ನೆಲೆ ರಾಜ್ಯದ ಜನತೆಯ ವಿರೋಧದ ನಡುವೆಯೂ ಅಧಿಕಾರಿಗಳು ಕಾವೇರಿ ನದಿಗೆ ನೀರು ಹರಿಬಿಟ್ಟಿದ್ದಾರೆ.

ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ಹಿನ್ನೆಲೆ ರೈತ ಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. CWMA ಆದೇಶವನ್ನ ಯಾವುದೇ ಕಾರಣಕ್ಕೂ ಪಾಲಿಸಲು ಸಾಧ್ಯವಿಲ್ಲ ಅಂತ ಆಕ್ರೋಶ ಹೊರಹಾಕಿದ್ದಾರೆ. ಆದರೆ ಸರ್ಕಾರ ಆದೇಶದಂತೆ ನೀರು ಹರಿಸುತ್ತಿದೆ. CWMA ಆದೇಶ ಕುರಿತಂತೆ ಮಂಡ್ಯ ಸಂಸದೆ ಸುಮಲತಾ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಸೇಖಾವತ್‌ ಅವರನ್ನು ಭೇಟಿಯಾಗಿದ್ದಾರೆ. ಮಂಡ್ಯ ಮತ್ತು ಕರ್ನಾಟಕದ ರೈತರು ಬರ ಕಾರಣದಿಂದಾಗಿ ತತ್ತರಿಸಿದ್ದು, ಮಂಡ್ಯ ರೈತರ ಜೀವನಾಡಿ ಆಗಿರುವ ಕಾವೇರಿಯಿಂದ ನಿರಂತರವಾಗಿ ತಮಿಳುನಾಡಿಗೆ ನೀರು ಬಿಡಲಾಗ್ತಿದೆ. ಇದೀಗ ಮತ್ತೆ 15 ದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೇಳಿದೆ ಅಂತ ವಿವರಿಸಿದ್ದಾರೆ.

ಸಂಸದರ ಮನವಿಗೆ ಸ್ಪಂದಿಸಿರೋ ಕೇಂದ್ರ ಜಲಶಕ್ತಿ ಸಚಿವ, ಆಯಾ ರಾಜ್ಯಗಳ ಜಂಟಿ ಸಮಿತಿ ರಚಿಸಲಾಗುವುದು ಮತ್ತು ಮುಂದಿನ ವಾರದಲ್ಲೇ ಸಮೀಕ್ಷೆ ನಡೆಸುವುದಾಗಿ, ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ. ಕಾವೇರಿ ಪ್ರಾಧಿಕಾರ ಆದೇಶ ಹಿನ್ನೆಲೆ, ಮಂಡ್ಯದಲ್ಲಿ ಮತ್ತೆ ರೈತರ ಕಿಚ್ಚು ಭುಗಿಲೆದ್ದಿದೆ. ಪ್ರಾಧಿಕಾರದ ಆದೇಶ ಖಂಡಿಸಿ ರೈತರು ನೀರಿಗಿಳಿದು, ಘೋಷಣೆ ಕೂಗಿ ಕಪ್ಪು ಭಾವುಟ ಪ್ರದರ್ಶನ ಮಾಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

8 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

9 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

9 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

9 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

10 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

10 hours ago