Advertisement
MIRROR FOCUS

ಬೆಳೆಗಳಿಗೆ ಕೀಟನಾಶಕ ಸಿಂಪಡಣೆಗೆ ಡ್ರೋನ್‌ ಬಳಕೆ | 1 ವರ್ಷಕ್ಕೆ ಅನುಮೋದನೆಯನ್ನು ವಿಸ್ತರಿಸಿದ ಸರ್ಕಾರ

Share

ಕೆಲವು ಬೆಳೆಗಳಿಗೆ ಕೀಟನಾಶಕಗಳನ್ನು ಸಿಂಪಡಿಸಲು ಡ್ರೋನ್‌ ಬಳಕೆ ಮಾಡಲು ಸರ್ಕಾರವು 1 ವರ್ಷದ ಅವಧಿಗೆ ಅನುಮೋದನೆಯನ್ನು ವಿಸ್ತರಣೆ ಮಾಡಿದೆ. ಕೆಲವು ಕೃಷಿಯಲ್ಲಿ ಡ್ರೋನ್ ಬಳಕೆಯುವ ಹಲವು ಪ್ರಯೋಜನಗಳನ್ನು ನೀಡುತ್ತಿದೆ.  ಹೀಗಾಗಿ ನಿಗದಿತ ಕೀಟನಾಶಕಗಳನ್ನು ಮಾತ್ರಾ ಸಿಂಪಡಿಸಲು ಡ್ರೋನ್‌ಗಳನ್ನು ಬಳಸಲು ಸಸ್ಯ ಸಂರಕ್ಷಣಾ ಕಂಪನಿಗಳಿಗೆ ನೀಡಲಾದ ಮಧ್ಯಂತರ ಅನುಮೋದನೆಯನ್ನು ಸರ್ಕಾರ ವಿಸ್ತರಿಸಿದೆ.

Advertisement
Advertisement

ಏಪ್ರಿಲ್  2024 ರಿಂದ ಪ್ರಾರಂಭವಾಗುವಂತೆ ಈ ಅನುಮೋದನೆಯನ್ನು  ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ. ಈಗಾಗಲೇ ಎಲ್A ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚನೆ ನೀಡಿ ಅನುಮತಿ ನೀಡಲಾಗಿತ್ತು. ಅದೇ ನಿಯಮಗಳನ್ನು ಮುಂದುವರಿಸಲಾಗಿದೆ. ಕೆಲವು ಸಮಯದ ಹಿಂದೆ ಬೆಳೆಗಳಿಗೆ ಕೀಟನಾಶಕಗಳನ್ನು ಸಿಂಪಡಿಸಲು ಡ್ರೋನ್‌ಗಳ ಬಳಕೆಯ ಮಾರ್ಗಸೂಚಿಯನ್ನು ತಿಳಿಸಲಾಗಿತ್ತು. ನಿಬಂಧನೆಗಳು, ಹಾರುವ ಅನುಮತಿಗಳು, ಪ್ರದೇಶದ ದೂರ ನಿರ್ಬಂಧಗಳು, ತೂಕದ ವರ್ಗೀಕರಣ, ಜನದಟ್ಟಣೆ ಪ್ರದೇಶಗಳ ನಿರ್ಬಂಧ, ಡ್ರೋನ್ ನೋಂದಣಿ, ಸುರಕ್ಷತಾ ವಿಮೆ, ಪೈಲಟಿಂಗ್ ಪ್ರಮಾಣೀಕರಣ, ಕಾರ್ಯಾಚರಣೆ ಯೋಜನೆ, ವಿಮಾನ ಹಾರಾಟದಂತಹ ಪ್ರಮುಖ ಅಂಶಗಳನ್ನು ಒಳಗೊಂಡಿದೆ.

ಇದಲ್ಲದೆ, ಕೀಟನಾಶಕ ಸಿಂಪಡಣೆಯ ನಿರ್ವಾಹಕರು ಪ್ರಥಮ ಚಿಕಿತ್ಸಾ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಕೀಟನಾಶಕವನ್ನು ವೈಮಾನಿಕವಾಗಿ ಸಿಂಪಡಣೆಗೆ ಮುನ್ನ ಅಧಿಕಾರಿಗಳ ಮೂಲಕ 24 ಗಂಟೆಗಳ ಮುಂಚಿತವಾಗಿ ಸಾರ್ವಜನಿಕರಿಗೆ ತಿಳಿಸಬೇಕು. ಇದಲ್ಲದೆ, ಪೈಲಟ್‌ಗಳು ಕೀಟನಾಶಕಗಳ ಕ್ಲಿನಿಕಲ್ ಪರಿಣಾಮಗಳನ್ನು ಒಳಗೊಂಡಂತೆ ವಿಶೇಷ ತರಬೇತಿಗೆ ಒಳಗಾಗಬೇಕು ಎಂದು ಸಚಿವಾಲಯ ಹೇಳಿದೆ.

ಡ್ರೋನ್‌ ತಂತ್ರಜ್ಞಾನವು ಕೆಲವು ಕೃಷಿಯಲ್ಲಿ ಬಹಳಷ್ಟು ಉಪಯೋಗವಾಗಿದೆ. ಹೀಗಾಗಿ ಕೃಷಿಕರು ಈ ತಂತ್ರಜ್ಞಾನದ ಬಳಕೆಗೆ ಆಸಕ್ತರಾಗಿದ್ದಾರೆ. ಹೀಗಾಗಿ ಸರ್ಕಾರವು ಕೆಲವು ನಿಬಂಧನೆಗಳೊಂದಿಗೆ ಬಳಕೆಗೆ ಸದ್ಯ ಅನುಮೋದನೆ ನೀಡಿದೆ.

Source:BS Digital media

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

9 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago