Advertisement
MIRROR FOCUS

ಬೆಳೆಗಳಿಗೆ ಕೀಟನಾಶಕ ಸಿಂಪಡಣೆಗೆ ಡ್ರೋನ್‌ ಬಳಕೆ | 1 ವರ್ಷಕ್ಕೆ ಅನುಮೋದನೆಯನ್ನು ವಿಸ್ತರಿಸಿದ ಸರ್ಕಾರ

Share

ಕೆಲವು ಬೆಳೆಗಳಿಗೆ ಕೀಟನಾಶಕಗಳನ್ನು ಸಿಂಪಡಿಸಲು ಡ್ರೋನ್‌ ಬಳಕೆ ಮಾಡಲು ಸರ್ಕಾರವು 1 ವರ್ಷದ ಅವಧಿಗೆ ಅನುಮೋದನೆಯನ್ನು ವಿಸ್ತರಣೆ ಮಾಡಿದೆ. ಕೆಲವು ಕೃಷಿಯಲ್ಲಿ ಡ್ರೋನ್ ಬಳಕೆಯುವ ಹಲವು ಪ್ರಯೋಜನಗಳನ್ನು ನೀಡುತ್ತಿದೆ.  ಹೀಗಾಗಿ ನಿಗದಿತ ಕೀಟನಾಶಕಗಳನ್ನು ಮಾತ್ರಾ ಸಿಂಪಡಿಸಲು ಡ್ರೋನ್‌ಗಳನ್ನು ಬಳಸಲು ಸಸ್ಯ ಸಂರಕ್ಷಣಾ ಕಂಪನಿಗಳಿಗೆ ನೀಡಲಾದ ಮಧ್ಯಂತರ ಅನುಮೋದನೆಯನ್ನು ಸರ್ಕಾರ ವಿಸ್ತರಿಸಿದೆ.

ಏಪ್ರಿಲ್  2024 ರಿಂದ ಪ್ರಾರಂಭವಾಗುವಂತೆ ಈ ಅನುಮೋದನೆಯನ್ನು  ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ. ಈಗಾಗಲೇ ಎಲ್A ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚನೆ ನೀಡಿ ಅನುಮತಿ ನೀಡಲಾಗಿತ್ತು. ಅದೇ ನಿಯಮಗಳನ್ನು ಮುಂದುವರಿಸಲಾಗಿದೆ. ಕೆಲವು ಸಮಯದ ಹಿಂದೆ ಬೆಳೆಗಳಿಗೆ ಕೀಟನಾಶಕಗಳನ್ನು ಸಿಂಪಡಿಸಲು ಡ್ರೋನ್‌ಗಳ ಬಳಕೆಯ ಮಾರ್ಗಸೂಚಿಯನ್ನು ತಿಳಿಸಲಾಗಿತ್ತು. ನಿಬಂಧನೆಗಳು, ಹಾರುವ ಅನುಮತಿಗಳು, ಪ್ರದೇಶದ ದೂರ ನಿರ್ಬಂಧಗಳು, ತೂಕದ ವರ್ಗೀಕರಣ, ಜನದಟ್ಟಣೆ ಪ್ರದೇಶಗಳ ನಿರ್ಬಂಧ, ಡ್ರೋನ್ ನೋಂದಣಿ, ಸುರಕ್ಷತಾ ವಿಮೆ, ಪೈಲಟಿಂಗ್ ಪ್ರಮಾಣೀಕರಣ, ಕಾರ್ಯಾಚರಣೆ ಯೋಜನೆ, ವಿಮಾನ ಹಾರಾಟದಂತಹ ಪ್ರಮುಖ ಅಂಶಗಳನ್ನು ಒಳಗೊಂಡಿದೆ.

ಇದಲ್ಲದೆ, ಕೀಟನಾಶಕ ಸಿಂಪಡಣೆಯ ನಿರ್ವಾಹಕರು ಪ್ರಥಮ ಚಿಕಿತ್ಸಾ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಕೀಟನಾಶಕವನ್ನು ವೈಮಾನಿಕವಾಗಿ ಸಿಂಪಡಣೆಗೆ ಮುನ್ನ ಅಧಿಕಾರಿಗಳ ಮೂಲಕ 24 ಗಂಟೆಗಳ ಮುಂಚಿತವಾಗಿ ಸಾರ್ವಜನಿಕರಿಗೆ ತಿಳಿಸಬೇಕು. ಇದಲ್ಲದೆ, ಪೈಲಟ್‌ಗಳು ಕೀಟನಾಶಕಗಳ ಕ್ಲಿನಿಕಲ್ ಪರಿಣಾಮಗಳನ್ನು ಒಳಗೊಂಡಂತೆ ವಿಶೇಷ ತರಬೇತಿಗೆ ಒಳಗಾಗಬೇಕು ಎಂದು ಸಚಿವಾಲಯ ಹೇಳಿದೆ.

ಡ್ರೋನ್‌ ತಂತ್ರಜ್ಞಾನವು ಕೆಲವು ಕೃಷಿಯಲ್ಲಿ ಬಹಳಷ್ಟು ಉಪಯೋಗವಾಗಿದೆ. ಹೀಗಾಗಿ ಕೃಷಿಕರು ಈ ತಂತ್ರಜ್ಞಾನದ ಬಳಕೆಗೆ ಆಸಕ್ತರಾಗಿದ್ದಾರೆ. ಹೀಗಾಗಿ ಸರ್ಕಾರವು ಕೆಲವು ನಿಬಂಧನೆಗಳೊಂದಿಗೆ ಬಳಕೆಗೆ ಸದ್ಯ ಅನುಮೋದನೆ ನೀಡಿದೆ.

Source:BS Digital media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

3 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago