Advertisement
MIRROR FOCUS

ಬೆಳೆಗಳಿಗೆ ಕೀಟನಾಶಕ ಸಿಂಪಡಣೆಗೆ ಡ್ರೋನ್‌ ಬಳಕೆ | 1 ವರ್ಷಕ್ಕೆ ಅನುಮೋದನೆಯನ್ನು ವಿಸ್ತರಿಸಿದ ಸರ್ಕಾರ

Share

ಕೆಲವು ಬೆಳೆಗಳಿಗೆ ಕೀಟನಾಶಕಗಳನ್ನು ಸಿಂಪಡಿಸಲು ಡ್ರೋನ್‌ ಬಳಕೆ ಮಾಡಲು ಸರ್ಕಾರವು 1 ವರ್ಷದ ಅವಧಿಗೆ ಅನುಮೋದನೆಯನ್ನು ವಿಸ್ತರಣೆ ಮಾಡಿದೆ. ಕೆಲವು ಕೃಷಿಯಲ್ಲಿ ಡ್ರೋನ್ ಬಳಕೆಯುವ ಹಲವು ಪ್ರಯೋಜನಗಳನ್ನು ನೀಡುತ್ತಿದೆ.  ಹೀಗಾಗಿ ನಿಗದಿತ ಕೀಟನಾಶಕಗಳನ್ನು ಮಾತ್ರಾ ಸಿಂಪಡಿಸಲು ಡ್ರೋನ್‌ಗಳನ್ನು ಬಳಸಲು ಸಸ್ಯ ಸಂರಕ್ಷಣಾ ಕಂಪನಿಗಳಿಗೆ ನೀಡಲಾದ ಮಧ್ಯಂತರ ಅನುಮೋದನೆಯನ್ನು ಸರ್ಕಾರ ವಿಸ್ತರಿಸಿದೆ.

ಏಪ್ರಿಲ್  2024 ರಿಂದ ಪ್ರಾರಂಭವಾಗುವಂತೆ ಈ ಅನುಮೋದನೆಯನ್ನು  ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ. ಈಗಾಗಲೇ ಎಲ್A ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚನೆ ನೀಡಿ ಅನುಮತಿ ನೀಡಲಾಗಿತ್ತು. ಅದೇ ನಿಯಮಗಳನ್ನು ಮುಂದುವರಿಸಲಾಗಿದೆ. ಕೆಲವು ಸಮಯದ ಹಿಂದೆ ಬೆಳೆಗಳಿಗೆ ಕೀಟನಾಶಕಗಳನ್ನು ಸಿಂಪಡಿಸಲು ಡ್ರೋನ್‌ಗಳ ಬಳಕೆಯ ಮಾರ್ಗಸೂಚಿಯನ್ನು ತಿಳಿಸಲಾಗಿತ್ತು. ನಿಬಂಧನೆಗಳು, ಹಾರುವ ಅನುಮತಿಗಳು, ಪ್ರದೇಶದ ದೂರ ನಿರ್ಬಂಧಗಳು, ತೂಕದ ವರ್ಗೀಕರಣ, ಜನದಟ್ಟಣೆ ಪ್ರದೇಶಗಳ ನಿರ್ಬಂಧ, ಡ್ರೋನ್ ನೋಂದಣಿ, ಸುರಕ್ಷತಾ ವಿಮೆ, ಪೈಲಟಿಂಗ್ ಪ್ರಮಾಣೀಕರಣ, ಕಾರ್ಯಾಚರಣೆ ಯೋಜನೆ, ವಿಮಾನ ಹಾರಾಟದಂತಹ ಪ್ರಮುಖ ಅಂಶಗಳನ್ನು ಒಳಗೊಂಡಿದೆ.

ಇದಲ್ಲದೆ, ಕೀಟನಾಶಕ ಸಿಂಪಡಣೆಯ ನಿರ್ವಾಹಕರು ಪ್ರಥಮ ಚಿಕಿತ್ಸಾ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಕೀಟನಾಶಕವನ್ನು ವೈಮಾನಿಕವಾಗಿ ಸಿಂಪಡಣೆಗೆ ಮುನ್ನ ಅಧಿಕಾರಿಗಳ ಮೂಲಕ 24 ಗಂಟೆಗಳ ಮುಂಚಿತವಾಗಿ ಸಾರ್ವಜನಿಕರಿಗೆ ತಿಳಿಸಬೇಕು. ಇದಲ್ಲದೆ, ಪೈಲಟ್‌ಗಳು ಕೀಟನಾಶಕಗಳ ಕ್ಲಿನಿಕಲ್ ಪರಿಣಾಮಗಳನ್ನು ಒಳಗೊಂಡಂತೆ ವಿಶೇಷ ತರಬೇತಿಗೆ ಒಳಗಾಗಬೇಕು ಎಂದು ಸಚಿವಾಲಯ ಹೇಳಿದೆ.

ಡ್ರೋನ್‌ ತಂತ್ರಜ್ಞಾನವು ಕೆಲವು ಕೃಷಿಯಲ್ಲಿ ಬಹಳಷ್ಟು ಉಪಯೋಗವಾಗಿದೆ. ಹೀಗಾಗಿ ಕೃಷಿಕರು ಈ ತಂತ್ರಜ್ಞಾನದ ಬಳಕೆಗೆ ಆಸಕ್ತರಾಗಿದ್ದಾರೆ. ಹೀಗಾಗಿ ಸರ್ಕಾರವು ಕೆಲವು ನಿಬಂಧನೆಗಳೊಂದಿಗೆ ಬಳಕೆಗೆ ಸದ್ಯ ಅನುಮೋದನೆ ನೀಡಿದೆ.

Source:BS Digital media

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

4 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

4 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

22 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

2 days ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago