Advertisement
MIRROR FOCUS

ಬೆಳೆಗಳಿಗೆ ಕೀಟನಾಶಕ ಸಿಂಪಡಣೆಗೆ ಡ್ರೋನ್‌ ಬಳಕೆ | 1 ವರ್ಷಕ್ಕೆ ಅನುಮೋದನೆಯನ್ನು ವಿಸ್ತರಿಸಿದ ಸರ್ಕಾರ

Share

ಕೆಲವು ಬೆಳೆಗಳಿಗೆ ಕೀಟನಾಶಕಗಳನ್ನು ಸಿಂಪಡಿಸಲು ಡ್ರೋನ್‌ ಬಳಕೆ ಮಾಡಲು ಸರ್ಕಾರವು 1 ವರ್ಷದ ಅವಧಿಗೆ ಅನುಮೋದನೆಯನ್ನು ವಿಸ್ತರಣೆ ಮಾಡಿದೆ. ಕೆಲವು ಕೃಷಿಯಲ್ಲಿ ಡ್ರೋನ್ ಬಳಕೆಯುವ ಹಲವು ಪ್ರಯೋಜನಗಳನ್ನು ನೀಡುತ್ತಿದೆ.  ಹೀಗಾಗಿ ನಿಗದಿತ ಕೀಟನಾಶಕಗಳನ್ನು ಮಾತ್ರಾ ಸಿಂಪಡಿಸಲು ಡ್ರೋನ್‌ಗಳನ್ನು ಬಳಸಲು ಸಸ್ಯ ಸಂರಕ್ಷಣಾ ಕಂಪನಿಗಳಿಗೆ ನೀಡಲಾದ ಮಧ್ಯಂತರ ಅನುಮೋದನೆಯನ್ನು ಸರ್ಕಾರ ವಿಸ್ತರಿಸಿದೆ.

ಏಪ್ರಿಲ್  2024 ರಿಂದ ಪ್ರಾರಂಭವಾಗುವಂತೆ ಈ ಅನುಮೋದನೆಯನ್ನು  ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ. ಈಗಾಗಲೇ ಎಲ್A ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚನೆ ನೀಡಿ ಅನುಮತಿ ನೀಡಲಾಗಿತ್ತು. ಅದೇ ನಿಯಮಗಳನ್ನು ಮುಂದುವರಿಸಲಾಗಿದೆ. ಕೆಲವು ಸಮಯದ ಹಿಂದೆ ಬೆಳೆಗಳಿಗೆ ಕೀಟನಾಶಕಗಳನ್ನು ಸಿಂಪಡಿಸಲು ಡ್ರೋನ್‌ಗಳ ಬಳಕೆಯ ಮಾರ್ಗಸೂಚಿಯನ್ನು ತಿಳಿಸಲಾಗಿತ್ತು. ನಿಬಂಧನೆಗಳು, ಹಾರುವ ಅನುಮತಿಗಳು, ಪ್ರದೇಶದ ದೂರ ನಿರ್ಬಂಧಗಳು, ತೂಕದ ವರ್ಗೀಕರಣ, ಜನದಟ್ಟಣೆ ಪ್ರದೇಶಗಳ ನಿರ್ಬಂಧ, ಡ್ರೋನ್ ನೋಂದಣಿ, ಸುರಕ್ಷತಾ ವಿಮೆ, ಪೈಲಟಿಂಗ್ ಪ್ರಮಾಣೀಕರಣ, ಕಾರ್ಯಾಚರಣೆ ಯೋಜನೆ, ವಿಮಾನ ಹಾರಾಟದಂತಹ ಪ್ರಮುಖ ಅಂಶಗಳನ್ನು ಒಳಗೊಂಡಿದೆ.

ಇದಲ್ಲದೆ, ಕೀಟನಾಶಕ ಸಿಂಪಡಣೆಯ ನಿರ್ವಾಹಕರು ಪ್ರಥಮ ಚಿಕಿತ್ಸಾ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಕೀಟನಾಶಕವನ್ನು ವೈಮಾನಿಕವಾಗಿ ಸಿಂಪಡಣೆಗೆ ಮುನ್ನ ಅಧಿಕಾರಿಗಳ ಮೂಲಕ 24 ಗಂಟೆಗಳ ಮುಂಚಿತವಾಗಿ ಸಾರ್ವಜನಿಕರಿಗೆ ತಿಳಿಸಬೇಕು. ಇದಲ್ಲದೆ, ಪೈಲಟ್‌ಗಳು ಕೀಟನಾಶಕಗಳ ಕ್ಲಿನಿಕಲ್ ಪರಿಣಾಮಗಳನ್ನು ಒಳಗೊಂಡಂತೆ ವಿಶೇಷ ತರಬೇತಿಗೆ ಒಳಗಾಗಬೇಕು ಎಂದು ಸಚಿವಾಲಯ ಹೇಳಿದೆ.

ಡ್ರೋನ್‌ ತಂತ್ರಜ್ಞಾನವು ಕೆಲವು ಕೃಷಿಯಲ್ಲಿ ಬಹಳಷ್ಟು ಉಪಯೋಗವಾಗಿದೆ. ಹೀಗಾಗಿ ಕೃಷಿಕರು ಈ ತಂತ್ರಜ್ಞಾನದ ಬಳಕೆಗೆ ಆಸಕ್ತರಾಗಿದ್ದಾರೆ. ಹೀಗಾಗಿ ಸರ್ಕಾರವು ಕೆಲವು ನಿಬಂಧನೆಗಳೊಂದಿಗೆ ಬಳಕೆಗೆ ಸದ್ಯ ಅನುಮೋದನೆ ನೀಡಿದೆ.

Source:BS Digital media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago