Advertisement
MIRROR FOCUS

ಬೆಳೆಗಳಿಗೆ ಕೀಟನಾಶಕ ಸಿಂಪಡಣೆಗೆ ಡ್ರೋನ್‌ ಬಳಕೆ | 1 ವರ್ಷಕ್ಕೆ ಅನುಮೋದನೆಯನ್ನು ವಿಸ್ತರಿಸಿದ ಸರ್ಕಾರ

Share

ಕೆಲವು ಬೆಳೆಗಳಿಗೆ ಕೀಟನಾಶಕಗಳನ್ನು ಸಿಂಪಡಿಸಲು ಡ್ರೋನ್‌ ಬಳಕೆ ಮಾಡಲು ಸರ್ಕಾರವು 1 ವರ್ಷದ ಅವಧಿಗೆ ಅನುಮೋದನೆಯನ್ನು ವಿಸ್ತರಣೆ ಮಾಡಿದೆ. ಕೆಲವು ಕೃಷಿಯಲ್ಲಿ ಡ್ರೋನ್ ಬಳಕೆಯುವ ಹಲವು ಪ್ರಯೋಜನಗಳನ್ನು ನೀಡುತ್ತಿದೆ.  ಹೀಗಾಗಿ ನಿಗದಿತ ಕೀಟನಾಶಕಗಳನ್ನು ಮಾತ್ರಾ ಸಿಂಪಡಿಸಲು ಡ್ರೋನ್‌ಗಳನ್ನು ಬಳಸಲು ಸಸ್ಯ ಸಂರಕ್ಷಣಾ ಕಂಪನಿಗಳಿಗೆ ನೀಡಲಾದ ಮಧ್ಯಂತರ ಅನುಮೋದನೆಯನ್ನು ಸರ್ಕಾರ ವಿಸ್ತರಿಸಿದೆ.

ಏಪ್ರಿಲ್  2024 ರಿಂದ ಪ್ರಾರಂಭವಾಗುವಂತೆ ಈ ಅನುಮೋದನೆಯನ್ನು  ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ. ಈಗಾಗಲೇ ಎಲ್A ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚನೆ ನೀಡಿ ಅನುಮತಿ ನೀಡಲಾಗಿತ್ತು. ಅದೇ ನಿಯಮಗಳನ್ನು ಮುಂದುವರಿಸಲಾಗಿದೆ. ಕೆಲವು ಸಮಯದ ಹಿಂದೆ ಬೆಳೆಗಳಿಗೆ ಕೀಟನಾಶಕಗಳನ್ನು ಸಿಂಪಡಿಸಲು ಡ್ರೋನ್‌ಗಳ ಬಳಕೆಯ ಮಾರ್ಗಸೂಚಿಯನ್ನು ತಿಳಿಸಲಾಗಿತ್ತು. ನಿಬಂಧನೆಗಳು, ಹಾರುವ ಅನುಮತಿಗಳು, ಪ್ರದೇಶದ ದೂರ ನಿರ್ಬಂಧಗಳು, ತೂಕದ ವರ್ಗೀಕರಣ, ಜನದಟ್ಟಣೆ ಪ್ರದೇಶಗಳ ನಿರ್ಬಂಧ, ಡ್ರೋನ್ ನೋಂದಣಿ, ಸುರಕ್ಷತಾ ವಿಮೆ, ಪೈಲಟಿಂಗ್ ಪ್ರಮಾಣೀಕರಣ, ಕಾರ್ಯಾಚರಣೆ ಯೋಜನೆ, ವಿಮಾನ ಹಾರಾಟದಂತಹ ಪ್ರಮುಖ ಅಂಶಗಳನ್ನು ಒಳಗೊಂಡಿದೆ.

ಇದಲ್ಲದೆ, ಕೀಟನಾಶಕ ಸಿಂಪಡಣೆಯ ನಿರ್ವಾಹಕರು ಪ್ರಥಮ ಚಿಕಿತ್ಸಾ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಕೀಟನಾಶಕವನ್ನು ವೈಮಾನಿಕವಾಗಿ ಸಿಂಪಡಣೆಗೆ ಮುನ್ನ ಅಧಿಕಾರಿಗಳ ಮೂಲಕ 24 ಗಂಟೆಗಳ ಮುಂಚಿತವಾಗಿ ಸಾರ್ವಜನಿಕರಿಗೆ ತಿಳಿಸಬೇಕು. ಇದಲ್ಲದೆ, ಪೈಲಟ್‌ಗಳು ಕೀಟನಾಶಕಗಳ ಕ್ಲಿನಿಕಲ್ ಪರಿಣಾಮಗಳನ್ನು ಒಳಗೊಂಡಂತೆ ವಿಶೇಷ ತರಬೇತಿಗೆ ಒಳಗಾಗಬೇಕು ಎಂದು ಸಚಿವಾಲಯ ಹೇಳಿದೆ.

ಡ್ರೋನ್‌ ತಂತ್ರಜ್ಞಾನವು ಕೆಲವು ಕೃಷಿಯಲ್ಲಿ ಬಹಳಷ್ಟು ಉಪಯೋಗವಾಗಿದೆ. ಹೀಗಾಗಿ ಕೃಷಿಕರು ಈ ತಂತ್ರಜ್ಞಾನದ ಬಳಕೆಗೆ ಆಸಕ್ತರಾಗಿದ್ದಾರೆ. ಹೀಗಾಗಿ ಸರ್ಕಾರವು ಕೆಲವು ನಿಬಂಧನೆಗಳೊಂದಿಗೆ ಬಳಕೆಗೆ ಸದ್ಯ ಅನುಮೋದನೆ ನೀಡಿದೆ.

Source:BS Digital media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

23 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago