Advertisement
MIRROR FOCUS

ಬೆಳೆಗಳಿಗೆ ಕೀಟನಾಶಕ ಸಿಂಪಡಣೆಗೆ ಡ್ರೋನ್‌ ಬಳಕೆ | 1 ವರ್ಷಕ್ಕೆ ಅನುಮೋದನೆಯನ್ನು ವಿಸ್ತರಿಸಿದ ಸರ್ಕಾರ

Share

ಕೆಲವು ಬೆಳೆಗಳಿಗೆ ಕೀಟನಾಶಕಗಳನ್ನು ಸಿಂಪಡಿಸಲು ಡ್ರೋನ್‌ ಬಳಕೆ ಮಾಡಲು ಸರ್ಕಾರವು 1 ವರ್ಷದ ಅವಧಿಗೆ ಅನುಮೋದನೆಯನ್ನು ವಿಸ್ತರಣೆ ಮಾಡಿದೆ. ಕೆಲವು ಕೃಷಿಯಲ್ಲಿ ಡ್ರೋನ್ ಬಳಕೆಯುವ ಹಲವು ಪ್ರಯೋಜನಗಳನ್ನು ನೀಡುತ್ತಿದೆ.  ಹೀಗಾಗಿ ನಿಗದಿತ ಕೀಟನಾಶಕಗಳನ್ನು ಮಾತ್ರಾ ಸಿಂಪಡಿಸಲು ಡ್ರೋನ್‌ಗಳನ್ನು ಬಳಸಲು ಸಸ್ಯ ಸಂರಕ್ಷಣಾ ಕಂಪನಿಗಳಿಗೆ ನೀಡಲಾದ ಮಧ್ಯಂತರ ಅನುಮೋದನೆಯನ್ನು ಸರ್ಕಾರ ವಿಸ್ತರಿಸಿದೆ.

ಏಪ್ರಿಲ್  2024 ರಿಂದ ಪ್ರಾರಂಭವಾಗುವಂತೆ ಈ ಅನುಮೋದನೆಯನ್ನು  ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ. ಈಗಾಗಲೇ ಎಲ್A ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚನೆ ನೀಡಿ ಅನುಮತಿ ನೀಡಲಾಗಿತ್ತು. ಅದೇ ನಿಯಮಗಳನ್ನು ಮುಂದುವರಿಸಲಾಗಿದೆ. ಕೆಲವು ಸಮಯದ ಹಿಂದೆ ಬೆಳೆಗಳಿಗೆ ಕೀಟನಾಶಕಗಳನ್ನು ಸಿಂಪಡಿಸಲು ಡ್ರೋನ್‌ಗಳ ಬಳಕೆಯ ಮಾರ್ಗಸೂಚಿಯನ್ನು ತಿಳಿಸಲಾಗಿತ್ತು. ನಿಬಂಧನೆಗಳು, ಹಾರುವ ಅನುಮತಿಗಳು, ಪ್ರದೇಶದ ದೂರ ನಿರ್ಬಂಧಗಳು, ತೂಕದ ವರ್ಗೀಕರಣ, ಜನದಟ್ಟಣೆ ಪ್ರದೇಶಗಳ ನಿರ್ಬಂಧ, ಡ್ರೋನ್ ನೋಂದಣಿ, ಸುರಕ್ಷತಾ ವಿಮೆ, ಪೈಲಟಿಂಗ್ ಪ್ರಮಾಣೀಕರಣ, ಕಾರ್ಯಾಚರಣೆ ಯೋಜನೆ, ವಿಮಾನ ಹಾರಾಟದಂತಹ ಪ್ರಮುಖ ಅಂಶಗಳನ್ನು ಒಳಗೊಂಡಿದೆ.

ಇದಲ್ಲದೆ, ಕೀಟನಾಶಕ ಸಿಂಪಡಣೆಯ ನಿರ್ವಾಹಕರು ಪ್ರಥಮ ಚಿಕಿತ್ಸಾ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಕೀಟನಾಶಕವನ್ನು ವೈಮಾನಿಕವಾಗಿ ಸಿಂಪಡಣೆಗೆ ಮುನ್ನ ಅಧಿಕಾರಿಗಳ ಮೂಲಕ 24 ಗಂಟೆಗಳ ಮುಂಚಿತವಾಗಿ ಸಾರ್ವಜನಿಕರಿಗೆ ತಿಳಿಸಬೇಕು. ಇದಲ್ಲದೆ, ಪೈಲಟ್‌ಗಳು ಕೀಟನಾಶಕಗಳ ಕ್ಲಿನಿಕಲ್ ಪರಿಣಾಮಗಳನ್ನು ಒಳಗೊಂಡಂತೆ ವಿಶೇಷ ತರಬೇತಿಗೆ ಒಳಗಾಗಬೇಕು ಎಂದು ಸಚಿವಾಲಯ ಹೇಳಿದೆ.

ಡ್ರೋನ್‌ ತಂತ್ರಜ್ಞಾನವು ಕೆಲವು ಕೃಷಿಯಲ್ಲಿ ಬಹಳಷ್ಟು ಉಪಯೋಗವಾಗಿದೆ. ಹೀಗಾಗಿ ಕೃಷಿಕರು ಈ ತಂತ್ರಜ್ಞಾನದ ಬಳಕೆಗೆ ಆಸಕ್ತರಾಗಿದ್ದಾರೆ. ಹೀಗಾಗಿ ಸರ್ಕಾರವು ಕೆಲವು ನಿಬಂಧನೆಗಳೊಂದಿಗೆ ಬಳಕೆಗೆ ಸದ್ಯ ಅನುಮೋದನೆ ನೀಡಿದೆ.

Source:BS Digital media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

5 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

14 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

20 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

20 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

2 days ago