Advertisement
MIRROR FOCUS

ಬೆಳೆಗಳಿಗೆ ಕೀಟನಾಶಕ ಸಿಂಪಡಣೆಗೆ ಡ್ರೋನ್‌ ಬಳಕೆ | 1 ವರ್ಷಕ್ಕೆ ಅನುಮೋದನೆಯನ್ನು ವಿಸ್ತರಿಸಿದ ಸರ್ಕಾರ

Share

ಕೆಲವು ಬೆಳೆಗಳಿಗೆ ಕೀಟನಾಶಕಗಳನ್ನು ಸಿಂಪಡಿಸಲು ಡ್ರೋನ್‌ ಬಳಕೆ ಮಾಡಲು ಸರ್ಕಾರವು 1 ವರ್ಷದ ಅವಧಿಗೆ ಅನುಮೋದನೆಯನ್ನು ವಿಸ್ತರಣೆ ಮಾಡಿದೆ. ಕೆಲವು ಕೃಷಿಯಲ್ಲಿ ಡ್ರೋನ್ ಬಳಕೆಯುವ ಹಲವು ಪ್ರಯೋಜನಗಳನ್ನು ನೀಡುತ್ತಿದೆ.  ಹೀಗಾಗಿ ನಿಗದಿತ ಕೀಟನಾಶಕಗಳನ್ನು ಮಾತ್ರಾ ಸಿಂಪಡಿಸಲು ಡ್ರೋನ್‌ಗಳನ್ನು ಬಳಸಲು ಸಸ್ಯ ಸಂರಕ್ಷಣಾ ಕಂಪನಿಗಳಿಗೆ ನೀಡಲಾದ ಮಧ್ಯಂತರ ಅನುಮೋದನೆಯನ್ನು ಸರ್ಕಾರ ವಿಸ್ತರಿಸಿದೆ.

Advertisement
Advertisement

ಏಪ್ರಿಲ್  2024 ರಿಂದ ಪ್ರಾರಂಭವಾಗುವಂತೆ ಈ ಅನುಮೋದನೆಯನ್ನು  ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ. ಈಗಾಗಲೇ ಎಲ್A ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚನೆ ನೀಡಿ ಅನುಮತಿ ನೀಡಲಾಗಿತ್ತು. ಅದೇ ನಿಯಮಗಳನ್ನು ಮುಂದುವರಿಸಲಾಗಿದೆ. ಕೆಲವು ಸಮಯದ ಹಿಂದೆ ಬೆಳೆಗಳಿಗೆ ಕೀಟನಾಶಕಗಳನ್ನು ಸಿಂಪಡಿಸಲು ಡ್ರೋನ್‌ಗಳ ಬಳಕೆಯ ಮಾರ್ಗಸೂಚಿಯನ್ನು ತಿಳಿಸಲಾಗಿತ್ತು. ನಿಬಂಧನೆಗಳು, ಹಾರುವ ಅನುಮತಿಗಳು, ಪ್ರದೇಶದ ದೂರ ನಿರ್ಬಂಧಗಳು, ತೂಕದ ವರ್ಗೀಕರಣ, ಜನದಟ್ಟಣೆ ಪ್ರದೇಶಗಳ ನಿರ್ಬಂಧ, ಡ್ರೋನ್ ನೋಂದಣಿ, ಸುರಕ್ಷತಾ ವಿಮೆ, ಪೈಲಟಿಂಗ್ ಪ್ರಮಾಣೀಕರಣ, ಕಾರ್ಯಾಚರಣೆ ಯೋಜನೆ, ವಿಮಾನ ಹಾರಾಟದಂತಹ ಪ್ರಮುಖ ಅಂಶಗಳನ್ನು ಒಳಗೊಂಡಿದೆ.

Advertisement

ಇದಲ್ಲದೆ, ಕೀಟನಾಶಕ ಸಿಂಪಡಣೆಯ ನಿರ್ವಾಹಕರು ಪ್ರಥಮ ಚಿಕಿತ್ಸಾ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಕೀಟನಾಶಕವನ್ನು ವೈಮಾನಿಕವಾಗಿ ಸಿಂಪಡಣೆಗೆ ಮುನ್ನ ಅಧಿಕಾರಿಗಳ ಮೂಲಕ 24 ಗಂಟೆಗಳ ಮುಂಚಿತವಾಗಿ ಸಾರ್ವಜನಿಕರಿಗೆ ತಿಳಿಸಬೇಕು. ಇದಲ್ಲದೆ, ಪೈಲಟ್‌ಗಳು ಕೀಟನಾಶಕಗಳ ಕ್ಲಿನಿಕಲ್ ಪರಿಣಾಮಗಳನ್ನು ಒಳಗೊಂಡಂತೆ ವಿಶೇಷ ತರಬೇತಿಗೆ ಒಳಗಾಗಬೇಕು ಎಂದು ಸಚಿವಾಲಯ ಹೇಳಿದೆ.

ಡ್ರೋನ್‌ ತಂತ್ರಜ್ಞಾನವು ಕೆಲವು ಕೃಷಿಯಲ್ಲಿ ಬಹಳಷ್ಟು ಉಪಯೋಗವಾಗಿದೆ. ಹೀಗಾಗಿ ಕೃಷಿಕರು ಈ ತಂತ್ರಜ್ಞಾನದ ಬಳಕೆಗೆ ಆಸಕ್ತರಾಗಿದ್ದಾರೆ. ಹೀಗಾಗಿ ಸರ್ಕಾರವು ಕೆಲವು ನಿಬಂಧನೆಗಳೊಂದಿಗೆ ಬಳಕೆಗೆ ಸದ್ಯ ಅನುಮೋದನೆ ನೀಡಿದೆ.

Advertisement

Source:BS Digital media

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಲೋಕಸಭೆ ಸಮರ : ಇಂದು 5 ನೇ ಹಂತದ ಮತದಾನ : 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

52 seconds ago

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

3 hours ago

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ | ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ |

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

20 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? | ಪರಿಸರಿದಿಂದ ನಮಗಾಗುವ ಪ್ರಯೋಜನವೇನು..? |

ಪರಿಸರದಿಂದ ಏನೆಲ್ಲಾ ಪ್ರಯೋಜನ ಇದೆ ಎಂಬುದರ ಬಗ್ಗೆ ಪರಿಸರ ಪರಿವಾರದ ಮಾಹಿತಿ ಇಲ್ಲಿದೆ...

21 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

21 hours ago