Advertisement
ಸುದ್ದಿಗಳು

ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ಸೇವೆಗಳಿಗೆ ದಾಖಲೆ ಕೇಳುವಂತಿಲ್ಲ

Share

ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಾದಾಗ ವೈದ್ಯರು, ಇಲ್ಲವೇ ಸಿಬ್ಬಂದಿಯವರು ರೋಗಿಗಳಿಗೆ ದಾಖಲೆಗಳನ್ನು ಕೇಳಿ ಚಿಕಿತ್ಸೆ ನೀಡಲು ವಿಳಂಬ ಮಾಡಿ ಅವರ ಸಾವಿಗೆ ಕಾರಣರಾದರೆ ಅಂಥವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಸಿದೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಸೇವೆಗಳ ಆಯುಕ್ತರು ಮಾರ್ಗಸೂಚಿಯನ್ನು ಹೊರಡಿಸಿದ್ದು, ರೋಗಿಗಳಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ತಾಯಿ ಕಾರ್ಡ್, ಆಧಾರ್ ಕಾರ್ಡ್ ಪಡಿತರಚೀಟಿ ಇಲ್ಲದೆಯೇ ಆಸ್ಪತ್ರೆಗೆ ದಾಖಲಿಸಿಕೊಂಡು ಆರೋಗ್ಯ ಸೇವೆಗಳನ್ನು ಒದಗಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಈವರೆಗೂ ರೋಗಿಗಳು, ತಾಯಿ, ಶಿಶುಗಳು, ಮಕ್ಕಳು ಸೇರಿದಂತೆ ಯಾವುದೇ ಒಬ್ಬ ವ್ಯಕ್ತಿ ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ದಾಖಲೆಗಳು ಅವಶ್ಯವಿರುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ರೋಗಿಯು ದಾಖಲೆಗಳನ್ನು ವೈದ್ಯರಿಗೆ ಇಲ್ಲವೇ ಸಂಬಂಧಪಟ್ಟವರಿಗೆ ಹಾಜರುಪಡಿಸಬೇಕೆಂಬ ನಿಯಮವಿಲ್ಲ. ತಾಯಿ ಕಾರ್ಡ್, ಆಧಾರ್ ಕಾರ್ಡ್ ಪಡಿತರಚೀಟಿ ಸೇರಿದಂತೆ ಯಾವುದೇ ದಾಖಲೆಗಳಿಲ್ಲದಿದ್ದರೂ ತುರ್ತು ಪರಿಸ್ಥಿತಿಯಲ್ಲಿ ಆರೋಗ್ಯ ಸೇವೆ ನೀಡುವುದು ಆಸ್ಪತ್ರೆಗಳ ಕರ್ತವ್ಯ ಎಂದು ಹೇಳಿದೆ.

ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ತುರ್ತು ಪರಿಸ್ಥಿತಿಯಲ್ಲಿ ಯಾವುದೇ ರೀತಿಯ ದಾಖಲೆಗಳನ್ನು ನೀಡುವಂತೆ ಯಾರಿಗೂ ಒತ್ತಾಯಿಸಬಾರದೆಂದು ಆಯುಕ್ತರು ಸೂಚನೆಯಲ್ಲಿ ಎಚ್ಚರಿಕೆ ಕೊಟ್ಟಿದ್ದಾರೆ.

ತುಮಕೂರಿನಲ್ಲಿ ಬಾಣಂತಿ ಮತ್ತು ನವಜಾತ ಶಿಶುಗಳಿಗೆ ಆಧಾರ್ ಮತ್ತು ತಾಯಿ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಚಿಕಿತ್ಸೆ ನೀಡಲು ನಿರಾಕರಿಸಿ ಸಾವನ್ನಪ್ಪಿದ ಪ್ರಕರಣದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚೆತ್ತುಕೊಂಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

7 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

7 hours ago

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

12 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

20 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

2 days ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

2 days ago