ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಾದಾಗ ವೈದ್ಯರು, ಇಲ್ಲವೇ ಸಿಬ್ಬಂದಿಯವರು ರೋಗಿಗಳಿಗೆ ದಾಖಲೆಗಳನ್ನು ಕೇಳಿ ಚಿಕಿತ್ಸೆ ನೀಡಲು ವಿಳಂಬ ಮಾಡಿ ಅವರ ಸಾವಿಗೆ ಕಾರಣರಾದರೆ ಅಂಥವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಸಿದೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಸೇವೆಗಳ ಆಯುಕ್ತರು ಮಾರ್ಗಸೂಚಿಯನ್ನು ಹೊರಡಿಸಿದ್ದು, ರೋಗಿಗಳಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ತಾಯಿ ಕಾರ್ಡ್, ಆಧಾರ್ ಕಾರ್ಡ್ ಪಡಿತರಚೀಟಿ ಇಲ್ಲದೆಯೇ ಆಸ್ಪತ್ರೆಗೆ ದಾಖಲಿಸಿಕೊಂಡು ಆರೋಗ್ಯ ಸೇವೆಗಳನ್ನು ಒದಗಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಈವರೆಗೂ ರೋಗಿಗಳು, ತಾಯಿ, ಶಿಶುಗಳು, ಮಕ್ಕಳು ಸೇರಿದಂತೆ ಯಾವುದೇ ಒಬ್ಬ ವ್ಯಕ್ತಿ ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ದಾಖಲೆಗಳು ಅವಶ್ಯವಿರುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.
ರೋಗಿಯು ದಾಖಲೆಗಳನ್ನು ವೈದ್ಯರಿಗೆ ಇಲ್ಲವೇ ಸಂಬಂಧಪಟ್ಟವರಿಗೆ ಹಾಜರುಪಡಿಸಬೇಕೆಂಬ ನಿಯಮವಿಲ್ಲ. ತಾಯಿ ಕಾರ್ಡ್, ಆಧಾರ್ ಕಾರ್ಡ್ ಪಡಿತರಚೀಟಿ ಸೇರಿದಂತೆ ಯಾವುದೇ ದಾಖಲೆಗಳಿಲ್ಲದಿದ್ದರೂ ತುರ್ತು ಪರಿಸ್ಥಿತಿಯಲ್ಲಿ ಆರೋಗ್ಯ ಸೇವೆ ನೀಡುವುದು ಆಸ್ಪತ್ರೆಗಳ ಕರ್ತವ್ಯ ಎಂದು ಹೇಳಿದೆ.
ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ತುರ್ತು ಪರಿಸ್ಥಿತಿಯಲ್ಲಿ ಯಾವುದೇ ರೀತಿಯ ದಾಖಲೆಗಳನ್ನು ನೀಡುವಂತೆ ಯಾರಿಗೂ ಒತ್ತಾಯಿಸಬಾರದೆಂದು ಆಯುಕ್ತರು ಸೂಚನೆಯಲ್ಲಿ ಎಚ್ಚರಿಕೆ ಕೊಟ್ಟಿದ್ದಾರೆ.
ತುಮಕೂರಿನಲ್ಲಿ ಬಾಣಂತಿ ಮತ್ತು ನವಜಾತ ಶಿಶುಗಳಿಗೆ ಆಧಾರ್ ಮತ್ತು ತಾಯಿ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಚಿಕಿತ್ಸೆ ನೀಡಲು ನಿರಾಕರಿಸಿ ಸಾವನ್ನಪ್ಪಿದ ಪ್ರಕರಣದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚೆತ್ತುಕೊಂಡಿದೆ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…