Advertisement
MIRROR FOCUS

ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ

Share

ಕೇಂದ್ರ ಸರ್ಕಾರವು ಕರಡು ಪೆಸ್ಟಿಸೈಡ್ಸ್ ಮ್ಯಾನೇಜ್ಮೆಂಟ್ ಬಿಲ್–2025 ಕುರಿತು ಸಾರ್ವಜನಿಕರು ಮತ್ತು ಎಲ್ಲಾ ಹಿತಾಸಕ್ತಿದಾರರಿಂದ ಅಭಿಪ್ರಾಯ ಹಾಗೂ ಸಲಹೆಗಳನ್ನು ಆಹ್ವಾನಿಸಿದೆ. ಈ ಹೊಸ ಮಸೂದೆ ಜಾರಿಗೆ ಬಂದಲ್ಲಿ, ಇನ್ಸೆಕ್ಟಿಸೈಡ್ಸ್ ಕಾಯ್ದೆ–1968 ಹಾಗೂ ಇನ್ಸೆಕ್ಟಿಸೈಡ್ಸ್ ನಿಯಮಗಳು–1971 ರದ್ದುಪಡಿಸಲ್ಪಡಲಿವೆ.  ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯು (MoA&FW) ಪ್ರಸ್ತುತ ಅಗತ್ಯಗಳಿಗೆ ಅನುಗುಣವಾಗಿ ಈ ಹೊಸ ಕರಡು ಮಸೂದೆಯನ್ನು ತಯಾರಿಸಿದೆ.

ರೈತಕೇಂದ್ರಿತ ಮಸೂದೆ : ಈ ಕರಡು ಮಸೂದೆ ರೈತಕೇಂದ್ರಿತ ಕಾನೂನು ಆಗಿದ್ದು, ರೈತರಿಗೆ ಗುಣಮಟ್ಟದ ಕೀಟನಾಶಕಗಳ ಲಭ್ಯತೆ ಖಚಿತಪಡಿಸುವುದರ ಜೊತೆಗೆ Ease of Living ಮತ್ತು Ease of Doing Business ಅನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ ಎಂದು ಸರ್ಕಾರ ತಿಳಿಸಿದೆ.

ಕರಡು ಮಸೂದೆಯ ಪ್ರಮುಖ ಅಂಶಗಳು :

  • ರೈತರಿಗೆ ಉತ್ತಮ ಸೇವೆ ನೀಡಲು ಪಾರದರ್ಶಕತೆ ಮತ್ತು ಟ್ರೇಸಬಿಲಿಟಿ ವ್ಯವಸ್ಥೆ
  • ಕೀಟನಾಶಕ ನಿರ್ವಹಣೆಯಲ್ಲಿ ಡಿಜಿಟಲ್ ತಂತ್ರಜ್ಞಾನ ಬಳಕೆ
  • ನಕಲಿ ಮತ್ತು ಕಳಪೆ ಕೀಟನಾಶಕಗಳ ವಿರುದ್ಧ ಕಠಿಣ ದಂಡಾತ್ಮಕ ಕ್ರಮಗಳು
  • ಸಣ್ಣ ತಪ್ಪುಗಳಿಗೆ ಅಪರಾಧರಹಿತಗೊಳಿಸುವ (Decriminalisation) ವ್ಯವಸ್ಥೆ
  • ರಾಜ್ಯ ಮಟ್ಟದ ಅಧಿಕಾರಿಗಳಿಗೆ ದಂಡ ನಿಗದಿಪಡಿಸುವ ಅಧಿಕಾರ
  • ಕೀಟನಾಶಕಗಳ ನಿಯಂತ್ರಣ ಮತ್ತು ಆಡಳಿತ ವ್ಯವಸ್ಥೆ ಬಲಪಡಿಸುವ ತಿದ್ದುಪಡಿಗಳು
  • ಪರೀಕ್ಷಾ ಪ್ರಯೋಗಾಲಯಗಳಿಗೆ ಕಡ್ಡಾಯ ಮಾನ್ಯತೆ, ಇದರಿಂದ ಗುಣಮಟ್ಟದ ಕೀಟನಾಶಕಗಳು ಮಾತ್ರ ರೈತರಿಗೆ ಲಭ್ಯವಾಗಲಿವೆ

ಈ ಮಸೂದೆ ರೈತರ ಹಿತ ಹಾಗೂ ವ್ಯಾಪಾರ ಸುಲಭತೆ ನಡುವೆ ಸಮತೋಲನ ಸಾಧಿಸುವುದನ್ನು ಗುರಿಯಾಗಿಸಿಕೊಂಡಿದೆ.

ಸಾರ್ವಜನಿಕ ಸಲಹೆ ಸಲ್ಲಿಸಲು ಅವಕಾಶ:  ಪೂರ್ವ-ಶಾಸನಾತ್ಮಕ ಸಮಾಲೋಚನೆ ಪ್ರಕ್ರಿಯೆಯ ಭಾಗವಾಗಿ, ಕರಡು ಪೆಸ್ಟಿಸೈಡ್ಸ್ ಮ್ಯಾನೇಜ್ಮೆಂಟ್ ಬಿಲ್–2025 ಮತ್ತು ಸಲಹೆ ಸಲ್ಲಿಸುವ ನಿಗದಿತ ನಮೂನೆಯನ್ನು ಕೃಷಿ ಸಚಿವಾಲಯದ ಅಧಿಕೃತ ವೆಬ್‌ಸೈಟ್ನಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಹಾಗೂ ಹಿತಾಸಕ್ತಿದಾರರು ತಮ್ಮ ಅಭಿಪ್ರಾಯ ಮತ್ತು ಸಲಹೆಗಳನ್ನು MS Word ಅಥವಾ PDF ರೂಪದಲ್ಲಿ ಇಮೇಲ್ ಮೂಲಕ ಸಲ್ಲಿಸಬಹುದು. ಅಂತಿಮ ದಿನಾಂಕ: ಫೆಬ್ರವರಿ 4, 2026

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

21 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago