ಕೇಂದ್ರ ಸರ್ಕಾರ ರೈತರ ಮತ್ತು ಬಡವರ ಹಿತ ಕಾಯಲು ಬದ್ಧವಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ ಮತ್ತು ನಾಗರಿಕ ಪೂರೈಕೆ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಪರಿಹಾರವಾಗಿ ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಭಾರತ್ ಬ್ರ್ಯಾಂಡ್ ಉತ್ಪನ್ನಗಳ ಎರಡನೇ ಹಂತದ ಮಾರಾಟಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು. ಭಾರತ್ ಬ್ರ್ಯಾಂಡ್ನ ಅಕ್ಕಿ, ಗೋದಿ ಹಿಟ್ಟು, ಬೇಳೆಗಳು ಮುಂತಾದ ಅಗತ್ಯ ವಸ್ತುಗಳು ಅತೀ ಕಡಿಮೆ ದರದಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದು, ಈ ಯೋಜನೆಯನ್ನು ಸಾರ್ವಜನಿಕರು ಸದುಪಯೋಗಪಡೆದುಕೊಳ್ಳಬೇಕೆಂದು ಕರೆ ನೀಡಿದ್ದಾರೆ.
ಹುಬ್ಬಳ್ಳಿಯ ಮೂರು ಸಾವಿರ ಮಠದ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ 50 ಕ್ಕೂ ಹೆಚ್ಚು ವಾಹನಗಳಿಗೆ ಚಾಲನೆ ನೀಡಲಾಗಿದ್ದು, ನೆರೆದಿದ್ದ ಮಹಿಳೆಯರಿಗೆ ಉತ್ಪನ್ನಗಳನ್ನು ಅಗ್ಗದ ಬೆಲೆಯಲ್ಲಿ ವಿತರಿಸಲಾಯಿತು. ಭಾರತ್ ಉತ್ಪನ್ನ ಖರೀದಿಸಿದ ಗ್ರಾಹಕರು ಸಂತಸ ವ್ಯಕ್ತಪಡಿಸಿದ್ದಾರೆ. ಭಾರತ್ ಅಕ್ಕಿ 34 ರೂಪಾಯಿ, ಗೋಧಿ ಹಿಟ್ಟು 30, ಕಡಲೆ ಬೇಳೆ 70, ಹೆಸರು ಬೇಳೆ 107 ರೂಪಾಯಿಗೆ ರಿಯಾಯಿತಿ ದರದಲ್ಲಿ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಉತ್ಪನ್ನಗಳಿಗೆ ಬೆಂಬಲಬೆಲೆ ನೀಡಿ ರೈತರ ಹಿತರಕ್ಷಣೆಗೆ ದೇಶಾದ್ಯಂತ ಕಡಿಮೆ ಬೆಲೆಗೆ ಆಹಾರಧಾನ್ಯವನ್ನು ಪೂರೈಸಿ ಜನಸಾಮಾನ್ಯರಿಗೆ ವಿತರಿಸುವ ಮೂಲಕ ಅವರ ಹಿತರಕ್ಷಣೆಗೆ ಮುಂದಾಗಿದೆ ಎಂದು ತಿಳಿಸಿದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…