20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

April 27, 2024
9:05 PM

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ  ರಫ್ತಿಗೆ ಮತ್ತಷ್ಟು ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರವು ಕ್ರಿಯಾ ಯೋಜನೆಗಳನ್ನು ರೂಪಿಸುತ್ತಿದೆ. ಈ ಪ್ರತಿಯೊಂದು ಉತ್ಪನ್ನಗಳ ರಫ್ತಿನ ಹೆಚ್ಚಳದ ಬಗ್ಗೆ ಸೂಕ್ತ ಕ್ರಮವು ಮುಂದಿನ 3-4 ತಿಂಗಳುಗಳಲ್ಲಿ ಸಿದ್ಧವಾಗಲಿದೆ ಎಂದು ವಾಣಿಜ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಹೇಳಿದ್ದಾರೆ.

Advertisement
Advertisement

ಉತ್ತಮ ಗುಣಮಟ್ಟದ  ವಸ್ತುಗಳ ಉತ್ಪಾದನೆ ಇಲ್ಲಿ ಇರುವುದರಿಂದ ಮತ್ತು ಜಾಗತಿಕ ಮಾರುಕಟ್ಟೆಗಳಲ್ಲಿ ಅವುಗಳಿಗೆ ಬೇಡಿಕೆ ಇರುವುದರಿಂದ ರಫ್ತುಗಳನ್ನು ಮತ್ತಷ್ಟು ಹೆಚ್ಚಿಸಲು ಅನುಕೂಲವಾಗಿದೆ.  ಸದ್ಯ  20 ಉತ್ಪನ್ನಗಳನ್ನು ಗುರುತಿಸಲಾಗಿದೆ. ಪ್ರಸ್ತುತ, ಜಾಗತಿಕ ರಫ್ತಿನಲ್ಲಿ ಭಾರತದ ಪಾಲು ಕಡಿಮೆಯಾಗಿದೆ. ಈ ಎಲ್ಲಾ ಉತ್ಪನ್ನಗಳಿಗೆ ಸೂಕ್ತವಾದ ಸ್ಥಾನಮಾನಕ್ಕಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಅಗರ್ವಾಲ್  ಹೇಳಿದ್ದಾರೆ.ಜಾಗತಿಕ ರಫ್ತಿನಲ್ಲಿ ಭಾರತದ ಪಾಲು ಶೇ.2.5ರಷ್ಟಿದ್ದು, ಮುಂಬರುವ ವರ್ಷಗಳಲ್ಲಿ ಇದನ್ನು ಶೇ.4-5ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. 20 ಉತ್ಪನ್ನಗಳಲ್ಲಿ ತಾಜಾ ದ್ರಾಕ್ಷಿ, ಪೇರಳೆ, ದಾಳಿಂಬೆ, ಕಲ್ಲಂಗಡಿ, ಈರುಳ್ಳಿ, ಹಸಿಮೆಣಸಿನಕಾಯಿ, ಕ್ಯಾಪ್ಸಿಕಂ, ಬೆಂಡೆಕಾಯಿ, ಬೆಳ್ಳುಳ್ಳಿ, ನೆಲಗಡಲೆ, ಗೋಡಂಬಿ, ಬೆಲ್ಲ, ನೈಸರ್ಗಿಕ ಜೇನುತುಪ್ಪ ಮತ್ತು ತುಪ್ಪ , ಬಾಸ್ಮತಿ ಅಕ್ಕಿ ಸೇರಿದಂತೆ 20 ಕೃಷಿ ಉತ್ಪನ್ನಗಳ ರಫ್ತುಗಳನ್ನು ಹೆಚ್ಚಿಸಲು ಮುಂದಿನ ಮೂರು ತಿಂಗಳಲ್ಲಿ ಈ ಬಗ್ಗೆ ಕ್ರಿಯಾ ಯೋಜನೆ ಸಿದ್ಧವಾಗಲಿದೆ.

Source:business Standard

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್
February 11, 2026
7:29 AM
by: ದ ರೂರಲ್ ಮಿರರ್.ಕಾಂ
ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ
February 11, 2026
7:11 AM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ
February 11, 2026
7:04 AM
by: ಮಿರರ್‌ ಡೆಸ್ಕ್
ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ
February 11, 2026
7:01 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror