20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

April 27, 2024
9:05 PM

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ  ರಫ್ತಿಗೆ ಮತ್ತಷ್ಟು ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರವು ಕ್ರಿಯಾ ಯೋಜನೆಗಳನ್ನು ರೂಪಿಸುತ್ತಿದೆ. ಈ ಪ್ರತಿಯೊಂದು ಉತ್ಪನ್ನಗಳ ರಫ್ತಿನ ಹೆಚ್ಚಳದ ಬಗ್ಗೆ ಸೂಕ್ತ ಕ್ರಮವು ಮುಂದಿನ 3-4 ತಿಂಗಳುಗಳಲ್ಲಿ ಸಿದ್ಧವಾಗಲಿದೆ ಎಂದು ವಾಣಿಜ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಹೇಳಿದ್ದಾರೆ.

Advertisement
Advertisement

ಉತ್ತಮ ಗುಣಮಟ್ಟದ  ವಸ್ತುಗಳ ಉತ್ಪಾದನೆ ಇಲ್ಲಿ ಇರುವುದರಿಂದ ಮತ್ತು ಜಾಗತಿಕ ಮಾರುಕಟ್ಟೆಗಳಲ್ಲಿ ಅವುಗಳಿಗೆ ಬೇಡಿಕೆ ಇರುವುದರಿಂದ ರಫ್ತುಗಳನ್ನು ಮತ್ತಷ್ಟು ಹೆಚ್ಚಿಸಲು ಅನುಕೂಲವಾಗಿದೆ.  ಸದ್ಯ  20 ಉತ್ಪನ್ನಗಳನ್ನು ಗುರುತಿಸಲಾಗಿದೆ. ಪ್ರಸ್ತುತ, ಜಾಗತಿಕ ರಫ್ತಿನಲ್ಲಿ ಭಾರತದ ಪಾಲು ಕಡಿಮೆಯಾಗಿದೆ. ಈ ಎಲ್ಲಾ ಉತ್ಪನ್ನಗಳಿಗೆ ಸೂಕ್ತವಾದ ಸ್ಥಾನಮಾನಕ್ಕಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಅಗರ್ವಾಲ್  ಹೇಳಿದ್ದಾರೆ.ಜಾಗತಿಕ ರಫ್ತಿನಲ್ಲಿ ಭಾರತದ ಪಾಲು ಶೇ.2.5ರಷ್ಟಿದ್ದು, ಮುಂಬರುವ ವರ್ಷಗಳಲ್ಲಿ ಇದನ್ನು ಶೇ.4-5ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. 20 ಉತ್ಪನ್ನಗಳಲ್ಲಿ ತಾಜಾ ದ್ರಾಕ್ಷಿ, ಪೇರಳೆ, ದಾಳಿಂಬೆ, ಕಲ್ಲಂಗಡಿ, ಈರುಳ್ಳಿ, ಹಸಿಮೆಣಸಿನಕಾಯಿ, ಕ್ಯಾಪ್ಸಿಕಂ, ಬೆಂಡೆಕಾಯಿ, ಬೆಳ್ಳುಳ್ಳಿ, ನೆಲಗಡಲೆ, ಗೋಡಂಬಿ, ಬೆಲ್ಲ, ನೈಸರ್ಗಿಕ ಜೇನುತುಪ್ಪ ಮತ್ತು ತುಪ್ಪ , ಬಾಸ್ಮತಿ ಅಕ್ಕಿ ಸೇರಿದಂತೆ 20 ಕೃಷಿ ಉತ್ಪನ್ನಗಳ ರಫ್ತುಗಳನ್ನು ಹೆಚ್ಚಿಸಲು ಮುಂದಿನ ಮೂರು ತಿಂಗಳಲ್ಲಿ ಈ ಬಗ್ಗೆ ಕ್ರಿಯಾ ಯೋಜನೆ ಸಿದ್ಧವಾಗಲಿದೆ.

Advertisement

Source:business Standard

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಸ ಎಸೆದರೂ “ದಂಡ” | ರಥಬೀದಿಯಲ್ಲಿ ಮಲಗಿದರೂ “ದಂಡ” |
May 9, 2024
10:10 PM
by: ಮಹೇಶ್ ಪುಚ್ಚಪ್ಪಾಡಿ
ಬೆಳೆಗಳಿಗೆ ಕೀಟನಾಶಕ ಸಿಂಪಡಣೆಗೆ ಡ್ರೋನ್‌ ಬಳಕೆ | 1 ವರ್ಷಕ್ಕೆ ಅನುಮೋದನೆಯನ್ನು ವಿಸ್ತರಿಸಿದ ಸರ್ಕಾರ
May 9, 2024
8:27 PM
by: ದ ರೂರಲ್ ಮಿರರ್.ಕಾಂ
Karnataka Weather | 09-05-2024 | ಅಲ್ಲಲ್ಲಿ ಗುಡುಗು ಸಹಿತ ಮಳೆ | ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ |
May 9, 2024
12:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ
May 8, 2024
9:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror