Advertisement
MIRROR FOCUS

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

Share

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ  ರಫ್ತಿಗೆ ಮತ್ತಷ್ಟು ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರವು ಕ್ರಿಯಾ ಯೋಜನೆಗಳನ್ನು ರೂಪಿಸುತ್ತಿದೆ. ಈ ಪ್ರತಿಯೊಂದು ಉತ್ಪನ್ನಗಳ ರಫ್ತಿನ ಹೆಚ್ಚಳದ ಬಗ್ಗೆ ಸೂಕ್ತ ಕ್ರಮವು ಮುಂದಿನ 3-4 ತಿಂಗಳುಗಳಲ್ಲಿ ಸಿದ್ಧವಾಗಲಿದೆ ಎಂದು ವಾಣಿಜ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಹೇಳಿದ್ದಾರೆ.

ಉತ್ತಮ ಗುಣಮಟ್ಟದ  ವಸ್ತುಗಳ ಉತ್ಪಾದನೆ ಇಲ್ಲಿ ಇರುವುದರಿಂದ ಮತ್ತು ಜಾಗತಿಕ ಮಾರುಕಟ್ಟೆಗಳಲ್ಲಿ ಅವುಗಳಿಗೆ ಬೇಡಿಕೆ ಇರುವುದರಿಂದ ರಫ್ತುಗಳನ್ನು ಮತ್ತಷ್ಟು ಹೆಚ್ಚಿಸಲು ಅನುಕೂಲವಾಗಿದೆ.  ಸದ್ಯ  20 ಉತ್ಪನ್ನಗಳನ್ನು ಗುರುತಿಸಲಾಗಿದೆ. ಪ್ರಸ್ತುತ, ಜಾಗತಿಕ ರಫ್ತಿನಲ್ಲಿ ಭಾರತದ ಪಾಲು ಕಡಿಮೆಯಾಗಿದೆ. ಈ ಎಲ್ಲಾ ಉತ್ಪನ್ನಗಳಿಗೆ ಸೂಕ್ತವಾದ ಸ್ಥಾನಮಾನಕ್ಕಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಅಗರ್ವಾಲ್  ಹೇಳಿದ್ದಾರೆ.ಜಾಗತಿಕ ರಫ್ತಿನಲ್ಲಿ ಭಾರತದ ಪಾಲು ಶೇ.2.5ರಷ್ಟಿದ್ದು, ಮುಂಬರುವ ವರ್ಷಗಳಲ್ಲಿ ಇದನ್ನು ಶೇ.4-5ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. 20 ಉತ್ಪನ್ನಗಳಲ್ಲಿ ತಾಜಾ ದ್ರಾಕ್ಷಿ, ಪೇರಳೆ, ದಾಳಿಂಬೆ, ಕಲ್ಲಂಗಡಿ, ಈರುಳ್ಳಿ, ಹಸಿಮೆಣಸಿನಕಾಯಿ, ಕ್ಯಾಪ್ಸಿಕಂ, ಬೆಂಡೆಕಾಯಿ, ಬೆಳ್ಳುಳ್ಳಿ, ನೆಲಗಡಲೆ, ಗೋಡಂಬಿ, ಬೆಲ್ಲ, ನೈಸರ್ಗಿಕ ಜೇನುತುಪ್ಪ ಮತ್ತು ತುಪ್ಪ , ಬಾಸ್ಮತಿ ಅಕ್ಕಿ ಸೇರಿದಂತೆ 20 ಕೃಷಿ ಉತ್ಪನ್ನಗಳ ರಫ್ತುಗಳನ್ನು ಹೆಚ್ಚಿಸಲು ಮುಂದಿನ ಮೂರು ತಿಂಗಳಲ್ಲಿ ಈ ಬಗ್ಗೆ ಕ್ರಿಯಾ ಯೋಜನೆ ಸಿದ್ಧವಾಗಲಿದೆ.

Source:business Standard

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

8 minutes ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

24 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago