Advertisement
MIRROR FOCUS

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

Share

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ  ರಫ್ತಿಗೆ ಮತ್ತಷ್ಟು ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರವು ಕ್ರಿಯಾ ಯೋಜನೆಗಳನ್ನು ರೂಪಿಸುತ್ತಿದೆ. ಈ ಪ್ರತಿಯೊಂದು ಉತ್ಪನ್ನಗಳ ರಫ್ತಿನ ಹೆಚ್ಚಳದ ಬಗ್ಗೆ ಸೂಕ್ತ ಕ್ರಮವು ಮುಂದಿನ 3-4 ತಿಂಗಳುಗಳಲ್ಲಿ ಸಿದ್ಧವಾಗಲಿದೆ ಎಂದು ವಾಣಿಜ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಹೇಳಿದ್ದಾರೆ.

ಉತ್ತಮ ಗುಣಮಟ್ಟದ  ವಸ್ತುಗಳ ಉತ್ಪಾದನೆ ಇಲ್ಲಿ ಇರುವುದರಿಂದ ಮತ್ತು ಜಾಗತಿಕ ಮಾರುಕಟ್ಟೆಗಳಲ್ಲಿ ಅವುಗಳಿಗೆ ಬೇಡಿಕೆ ಇರುವುದರಿಂದ ರಫ್ತುಗಳನ್ನು ಮತ್ತಷ್ಟು ಹೆಚ್ಚಿಸಲು ಅನುಕೂಲವಾಗಿದೆ.  ಸದ್ಯ  20 ಉತ್ಪನ್ನಗಳನ್ನು ಗುರುತಿಸಲಾಗಿದೆ. ಪ್ರಸ್ತುತ, ಜಾಗತಿಕ ರಫ್ತಿನಲ್ಲಿ ಭಾರತದ ಪಾಲು ಕಡಿಮೆಯಾಗಿದೆ. ಈ ಎಲ್ಲಾ ಉತ್ಪನ್ನಗಳಿಗೆ ಸೂಕ್ತವಾದ ಸ್ಥಾನಮಾನಕ್ಕಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಅಗರ್ವಾಲ್  ಹೇಳಿದ್ದಾರೆ.ಜಾಗತಿಕ ರಫ್ತಿನಲ್ಲಿ ಭಾರತದ ಪಾಲು ಶೇ.2.5ರಷ್ಟಿದ್ದು, ಮುಂಬರುವ ವರ್ಷಗಳಲ್ಲಿ ಇದನ್ನು ಶೇ.4-5ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. 20 ಉತ್ಪನ್ನಗಳಲ್ಲಿ ತಾಜಾ ದ್ರಾಕ್ಷಿ, ಪೇರಳೆ, ದಾಳಿಂಬೆ, ಕಲ್ಲಂಗಡಿ, ಈರುಳ್ಳಿ, ಹಸಿಮೆಣಸಿನಕಾಯಿ, ಕ್ಯಾಪ್ಸಿಕಂ, ಬೆಂಡೆಕಾಯಿ, ಬೆಳ್ಳುಳ್ಳಿ, ನೆಲಗಡಲೆ, ಗೋಡಂಬಿ, ಬೆಲ್ಲ, ನೈಸರ್ಗಿಕ ಜೇನುತುಪ್ಪ ಮತ್ತು ತುಪ್ಪ , ಬಾಸ್ಮತಿ ಅಕ್ಕಿ ಸೇರಿದಂತೆ 20 ಕೃಷಿ ಉತ್ಪನ್ನಗಳ ರಫ್ತುಗಳನ್ನು ಹೆಚ್ಚಿಸಲು ಮುಂದಿನ ಮೂರು ತಿಂಗಳಲ್ಲಿ ಈ ಬಗ್ಗೆ ಕ್ರಿಯಾ ಯೋಜನೆ ಸಿದ್ಧವಾಗಲಿದೆ.

Source:business Standard

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

6 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

6 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

23 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago