Advertisement
MIRROR FOCUS

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

Share

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ  ರಫ್ತಿಗೆ ಮತ್ತಷ್ಟು ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರವು ಕ್ರಿಯಾ ಯೋಜನೆಗಳನ್ನು ರೂಪಿಸುತ್ತಿದೆ. ಈ ಪ್ರತಿಯೊಂದು ಉತ್ಪನ್ನಗಳ ರಫ್ತಿನ ಹೆಚ್ಚಳದ ಬಗ್ಗೆ ಸೂಕ್ತ ಕ್ರಮವು ಮುಂದಿನ 3-4 ತಿಂಗಳುಗಳಲ್ಲಿ ಸಿದ್ಧವಾಗಲಿದೆ ಎಂದು ವಾಣಿಜ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಹೇಳಿದ್ದಾರೆ.

ಉತ್ತಮ ಗುಣಮಟ್ಟದ  ವಸ್ತುಗಳ ಉತ್ಪಾದನೆ ಇಲ್ಲಿ ಇರುವುದರಿಂದ ಮತ್ತು ಜಾಗತಿಕ ಮಾರುಕಟ್ಟೆಗಳಲ್ಲಿ ಅವುಗಳಿಗೆ ಬೇಡಿಕೆ ಇರುವುದರಿಂದ ರಫ್ತುಗಳನ್ನು ಮತ್ತಷ್ಟು ಹೆಚ್ಚಿಸಲು ಅನುಕೂಲವಾಗಿದೆ.  ಸದ್ಯ  20 ಉತ್ಪನ್ನಗಳನ್ನು ಗುರುತಿಸಲಾಗಿದೆ. ಪ್ರಸ್ತುತ, ಜಾಗತಿಕ ರಫ್ತಿನಲ್ಲಿ ಭಾರತದ ಪಾಲು ಕಡಿಮೆಯಾಗಿದೆ. ಈ ಎಲ್ಲಾ ಉತ್ಪನ್ನಗಳಿಗೆ ಸೂಕ್ತವಾದ ಸ್ಥಾನಮಾನಕ್ಕಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಅಗರ್ವಾಲ್  ಹೇಳಿದ್ದಾರೆ.ಜಾಗತಿಕ ರಫ್ತಿನಲ್ಲಿ ಭಾರತದ ಪಾಲು ಶೇ.2.5ರಷ್ಟಿದ್ದು, ಮುಂಬರುವ ವರ್ಷಗಳಲ್ಲಿ ಇದನ್ನು ಶೇ.4-5ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. 20 ಉತ್ಪನ್ನಗಳಲ್ಲಿ ತಾಜಾ ದ್ರಾಕ್ಷಿ, ಪೇರಳೆ, ದಾಳಿಂಬೆ, ಕಲ್ಲಂಗಡಿ, ಈರುಳ್ಳಿ, ಹಸಿಮೆಣಸಿನಕಾಯಿ, ಕ್ಯಾಪ್ಸಿಕಂ, ಬೆಂಡೆಕಾಯಿ, ಬೆಳ್ಳುಳ್ಳಿ, ನೆಲಗಡಲೆ, ಗೋಡಂಬಿ, ಬೆಲ್ಲ, ನೈಸರ್ಗಿಕ ಜೇನುತುಪ್ಪ ಮತ್ತು ತುಪ್ಪ , ಬಾಸ್ಮತಿ ಅಕ್ಕಿ ಸೇರಿದಂತೆ 20 ಕೃಷಿ ಉತ್ಪನ್ನಗಳ ರಫ್ತುಗಳನ್ನು ಹೆಚ್ಚಿಸಲು ಮುಂದಿನ ಮೂರು ತಿಂಗಳಲ್ಲಿ ಈ ಬಗ್ಗೆ ಕ್ರಿಯಾ ಯೋಜನೆ ಸಿದ್ಧವಾಗಲಿದೆ.

Source:business Standard

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

31 minutes ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

7 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

16 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

16 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

18 hours ago