Advertisement
ಸುದ್ದಿಗಳು

ಸಿರಿಧಾನ್ಯಕ್ಕೆ ಉತ್ತೇಜನ | ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಸಿರಿಧಾನ್ಯದ ತಿಂಡಿ ತಿನಿಸು, ಪಾನೀಯ ಬಳಸಲು ಸುತ್ತೋಲೆ | ನಂದಿನಿ ಔಟ್ ಲೆಟ್, ಸ್ವಸಹಾಯ ಸಂಘ, ಸಾವಯವ ಸಂತೆಗಳಲ್ಲಿ ಲಭ್ಯ |

Share

ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಆಹಾರ ಬೇಕೇ ಬೇಕು. ಆಹಾರವಿಲ್ಲದೇ ನಮ್ಮ ಬದುಕಿಲ್ಲ. ಆದ್ದರಿಂದ ಆಹಾರ ಬದುಕಿನ ಪ್ರಾಥಮಿಕ ಅವಶ್ಯಕತೆಗಳಲ್ಲಿ ಒಂದಾಗಿದೆ. ಆಹಾರದಿಂದಲೇ ಆರೋಗ್ಯ. ನಾವು ಆಯ್ಕೆ ಮಾಡಿಕೊಳ್ಳುವ ಆಹಾರ ಪದಾರ್ಥಗಳು ಅರೋಗ್ಯದ ಮೇಲೆ ಪರಿಣಾಮ ಬೀರುತ್ತವೆ ಎಂಬುದು ಈಗಾಗಲೇ ವೈಜ್ಞಾನಿಕವಾಗಿ ಸಾಬೀತಾಗಿದೆ.ಧಾನ್ಯಗಳು ನಮ್ಮ ಸಾಂಪ್ರದಾಯಿಕ ಆಹಾರಗಳು. ಹತ್ತಾರು ಸಾವಿರ ವರ್ಷಗಳ ಹಿಂದೆಯೇ ಧಾನ್ಯಗಳನ್ನು ಮಾನವರು ಬೆಳೆಯುತ್ತಿದ್ದರು. ಅದರಲ್ಲೂ ಇಂದು ಜಗತ್ತಿನಾದ್ಯಂತ ಸಾವಿರಕ್ಕೂ ಮೇಲ್ಪಟ್ಟು ಬೇರೆ ಬೇರೆ ಧಾನ್ಯಗಳನ್ನು ಬೆಳೆಯಲಾಗುತ್ತದೆ. ಈ ಬೆಳೆಗಳನ್ನು ಬೆಳೆಯುವ ದೇಶಗಳಲ್ಲಿ ನಮ್ಮ ಭಾರತ ಅಗ್ರಸ್ಥಾನದಲ್ಲಿದೆ.

ಸಿರಿಧಾನ್ಯಗಳ ಕೃಷಿಯು ಕೇವಲ ಸಾಂಪ್ರದಾಯಿಕ ಕೃಷಿಯಲ್ಲ. ಇದೊಂದು ವಿಶೇಷ ಮತ್ತು ವಿಶಿಷ್ಟ ಕೃಷಿಯಾಗಿದೆ. ಈ ನಿಟ್ಟಿನಲ್ಲಿ  ಸಿರಿಧಾನ್ಯ ಬಳಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಎಲ್ಲ ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಸಿರಿಧಾನ್ಯ ಆಧಾರಿತ ತಿಂಡಿ ತಿನಿಸು, ಪಾನೀಯಗಳನ್ನು ಬಳಸುವಂತೆ ಸರ್ಕಾರ ಆದೇಶ ಹೊರಡಿಸಿದೆ.  ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷ 2023ನ್ನು ಅರ್ಥಪೂರ್ಣವಾಗಿ ಆಚರಿಸುವ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ಕಾರ್ಯದರ್ಶಿ ಶಿವಯೋಗಿ ಕಳಸದ ಅವರು ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯದ ಎಲ್ಲಾ ಇಲಾಖೆಗಳು ಹಾಗೂ ಎಲ್ಲಾ ಅಧೀನ ಕಛೇರಿಗಳಲ್ಲಿ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‍ ರಾಜ್ ಇಲಾಖಾ ವತಿಯಿಂದ ಎಲ್ಲಾ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಮತ್ತು ಗ್ರಾಮ ಪಂಚಾಯತ್ ಗಳಲ್ಲಿ ಆಯೋಜಿಸಲಾಗುವ ಎಲ್ಲಾ ಸಭೆ ಸಮಾರಂಭಗಳಲ್ಲಿ ಸಿರಿಧಾನ್ಯ ಆಧರಿತ ತಿಂಡಿ ತಿನಿಸು/ಪಾನಿಯಗಳನ್ನು ಬಳಸುವಂತೆ ಸೂಚನೆ ನೀಡಲಾಗಿದೆ.

ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಸಿರಿಧಾನ್ಯಗಳ ಉತ್ಪಾದನೆ ಮತ್ತು ಬಳಕೆಯನ್ನು ಉತ್ತೇಜಿಸುವ ಸಲುವಾಗಿ ಹಾಗೂ ಸಿರಿಧಾನ್ಯಗಳಿಗೆ ದೇಶೀಯ ಮತ್ತು ಜಾಗತಿಕ ಬೇಡಿಕೆಯನ್ನು ಸೃಷ್ಟಿಸಲು ಮತ್ತು ಜನರಿಗೆ ಪೌಷ್ಟಿಕಾಂಶದ ಆಹಾರವನ್ನು ಒದಗಿಸಲು ಅಂತರಾಷ್ಟ್ರೀಯ ಸಿರಿ ಧಾನಗಳು ವರ್ಷ ಎಂದು ಘೋಷಿಸಲು ವಿಶ್ವ ಸಂಸ್ಥೆಗೆ ಭಾರತ ಸರ್ಕಾರ 2021ರಲ್ಲಿ ಪ್ರಸ್ತಾಪಿಸಿದ ಮೇರೆಗೆ ವಿಶ್ವಸಂಸ್ಥೆ `2023ನೇ ವರ್ಷವನ್ನು ಅಂತರಾಷ್ಟ್ರೀಯ  ಸಿರಿಧಾನ್ಯಗಳ ವರ್ಷ’ ಎಂದು ಘೋಷಿಸಿದೆ.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಹಯೋಗದಿಂದ ಸಿರಿಧಾನ್ಯಗಳ ಉತ್ಪಾದನೆ ಮತ್ತು ಬಳಕೆಗೆ ಹಲವಾರು ಕಾರ್ಯಕ್ರಮಗಳನ್ನು ಕೃಷಿ ಇಲಾಖೆ ರೂಪಿಸುತ್ತಿದೆ. `ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷ – 2023’ನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ಆಚರಿಸುವ ಸಲುವಾಗಿ, ನಾಗರೀಕ ಚಳವಳಿ ಮೂಲಕ ಭಾರತೀಯ ಸಿರಿಧಾನ್ಯಗಳು ಹಾಗೂ ಇವುಗಳ ಆಧಾರಿತ ತಿಂಡಿ ತಿನಸು, ಖಾದ್ಯ, ಪಾನೀಯಗಳನ್ನು ದೇಶದಲ್ಲಿ ಮಾತ್ರಲ್ಲದೆ ವಿಶ್ವದಾದ್ಯಂತ ಪರಿಚಯಿಸಬೇಕಾದ ಅವಶ್ಯಕತೆ ಇದೆ.

ಸಿರಿಧಾನ್ಯ ಆಧಾರಿತ ತಿಂಡಿ ತಿನಿಸು, ಖಾದ್ಯ, ಪಾನೀಯಗಳು, ಕೆಎಂಎಫ್‍ ಸಂಸ್ಥೆಯ ನಂದಿನಿ ಔಟ್ ಲೆಟ್ (ಸಿರಿಧಾನ್ಯ ಮಾಲ್ಟ್, ಲಟ್ಟು, ಬರ್ಫಿ, ಬಿಸ್ಕತ್) ರಾಜ್ಯದ ಎಲ್ಲಾ ಕೃಷಿ ಸಂಬಂಧಿತ ವಿಶ್ವವಿದ್ಯಾಲಯಗಳ ಫುಡ್ ಮತ್ತು ನ್ಯೂಟ್ರೀಷನ್ ವಿಭಾಗ, ಸ್ವಸಹಾಯ ಸಂಘಗಳು ಹಾಗೂ ರಾಜ್ಯದ ಸಾವಯವ ರೈತರ ಪ್ರಾಂತೀಯ ಒಕ್ಕೂಟಗಳು, ಪ್ರಮುಖ ಪಟ್ಟಣಗಳ ಸೂಪರ್‍ ಮಾರುಕಟ್ಟೆಗಳು ಹಾಗೂ ನಿಯಮಿತವಾಗಿ ಆಯೋಜಿಸಲಾಗುವ ಸಾವಯವ ಸಂತೆಗಳಲ್ಲಿ ಲಭ್ಯವಿರಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

11 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

12 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

1 day ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 day ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

1 day ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

1 day ago