ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಚಿಂತನೆ | 262 ಲಕ್ಷ ಟನ್​ಗಳಷ್ಟು ಗೋಧಿ ಬೆಂಬಲ ಬೆಲೆಗೆ ಖರೀದಿ |

June 2, 2023
12:43 PM

ರೈತ ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಇಲ್ಲದೆ ಅನ್ನದಾತ ಹೈರಾಣಾಗಿದ್ದಾನೆ. ಇರುವ ಸರ್ಕಾರಗಳು ರೈತನ ಕಷ್ಟವನ್ನು ಅರ್ಥಮಾಡಿಕೊಂಡು ಸಂಕಷ್ಟಕ್ಕೆ ನೆರವಾದರೆ ರೈತರು ಬೆಳೆ ಬೆಳೆಯಲು ಅನುಕೂಲವಾಗುತ್ತದೆ.  ಅದರೆಂತೆ ಈ ವರ್ಷದ ಮುಂಗಾರು ಬೆಳೆ ಅಥವಾ ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತಿಸುತ್ತಿದೆ.

ಮಾಹಿತಿ ಪ್ರಕಾರ ಬೆಳೆಗಳಿಗೆ ಇರುವ ಎಂಎಸ್​ಪಿಯನ್ನು ಶೇ. 3ರಿಂದ 8ರಷ್ಟು ಏರಿಸುವ ಸಾಧ್ಯತೆ ಇದೆ. ಗೋಧಿ, ಭತ್ತ ಇತ್ಯಾದಿ ಬೆಳೆಗಳಿಗೆ ಸರ್ಕಾರ ಹೆಚ್ಚು ದರ ಕೊಟ್ಟು ಖರೀದಿಸಬಹುದು ಎನ್ನಲಾಗಿದೆ. 2040 ರೂ ಇರುವ ಭತ್ತದ ಎಂಎಸ್​ಪಿ ದರವನ್ನು 2,200 ರೂವರೆಗೂ ಏರಿಸುವ ಸಾಧ್ಯತೆ ಇದೆ.

ಕನಿಷ್ಠ ಬೆಂಬಲ ಬೆಲೆ ದರದಲ್ಲಿ ಈ ವರ್ಷ ಇದುವರೆಗೂ ಕೇಂದ್ರ ಸರ್ಕಾರ ರೈತರಿಂದ 262 ಲಕ್ಷ ಟನ್​ಗಳಷ್ಟು ಗೋಧಿ ಖರೀದಿ ಮಾಡಿದೆ. ಒಟ್ಟು 47,000 ಕೋಟಿ ರೂ ಹಣವನ್ನು ಈ ಗೋಧಿ ಬೆಳೆದ ರೈತರಿಗೆ ತಲುಪಿಸಲಾಗಿದೆ. 21.27 ಲಕ್ಷ ರೈತರಿಗೆ ಅನುಕೂಲವಾಗಿದೆ. ಕಳೆದ ವರ್ಷ (2022) ಕೇಂದ್ರ ಸರ್ಕಾರ ಎಂಎಸ್​ಪಿ ದರದಲ್ಲಿ ರೈತರಿಂದ 188 ಲಕ್ಷ ಟನ್​ಗಳಷ್ಟು ಗೋಧಿ ಖರೀದಿ ಮಾಡಿತ್ತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror