ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಚಿಂತನೆ | 262 ಲಕ್ಷ ಟನ್​ಗಳಷ್ಟು ಗೋಧಿ ಬೆಂಬಲ ಬೆಲೆಗೆ ಖರೀದಿ |

June 2, 2023
12:43 PM

ರೈತ ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಇಲ್ಲದೆ ಅನ್ನದಾತ ಹೈರಾಣಾಗಿದ್ದಾನೆ. ಇರುವ ಸರ್ಕಾರಗಳು ರೈತನ ಕಷ್ಟವನ್ನು ಅರ್ಥಮಾಡಿಕೊಂಡು ಸಂಕಷ್ಟಕ್ಕೆ ನೆರವಾದರೆ ರೈತರು ಬೆಳೆ ಬೆಳೆಯಲು ಅನುಕೂಲವಾಗುತ್ತದೆ.  ಅದರೆಂತೆ ಈ ವರ್ಷದ ಮುಂಗಾರು ಬೆಳೆ ಅಥವಾ ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತಿಸುತ್ತಿದೆ.

ಮಾಹಿತಿ ಪ್ರಕಾರ ಬೆಳೆಗಳಿಗೆ ಇರುವ ಎಂಎಸ್​ಪಿಯನ್ನು ಶೇ. 3ರಿಂದ 8ರಷ್ಟು ಏರಿಸುವ ಸಾಧ್ಯತೆ ಇದೆ. ಗೋಧಿ, ಭತ್ತ ಇತ್ಯಾದಿ ಬೆಳೆಗಳಿಗೆ ಸರ್ಕಾರ ಹೆಚ್ಚು ದರ ಕೊಟ್ಟು ಖರೀದಿಸಬಹುದು ಎನ್ನಲಾಗಿದೆ. 2040 ರೂ ಇರುವ ಭತ್ತದ ಎಂಎಸ್​ಪಿ ದರವನ್ನು 2,200 ರೂವರೆಗೂ ಏರಿಸುವ ಸಾಧ್ಯತೆ ಇದೆ.

ಕನಿಷ್ಠ ಬೆಂಬಲ ಬೆಲೆ ದರದಲ್ಲಿ ಈ ವರ್ಷ ಇದುವರೆಗೂ ಕೇಂದ್ರ ಸರ್ಕಾರ ರೈತರಿಂದ 262 ಲಕ್ಷ ಟನ್​ಗಳಷ್ಟು ಗೋಧಿ ಖರೀದಿ ಮಾಡಿದೆ. ಒಟ್ಟು 47,000 ಕೋಟಿ ರೂ ಹಣವನ್ನು ಈ ಗೋಧಿ ಬೆಳೆದ ರೈತರಿಗೆ ತಲುಪಿಸಲಾಗಿದೆ. 21.27 ಲಕ್ಷ ರೈತರಿಗೆ ಅನುಕೂಲವಾಗಿದೆ. ಕಳೆದ ವರ್ಷ (2022) ಕೇಂದ್ರ ಸರ್ಕಾರ ಎಂಎಸ್​ಪಿ ದರದಲ್ಲಿ ರೈತರಿಂದ 188 ಲಕ್ಷ ಟನ್​ಗಳಷ್ಟು ಗೋಧಿ ಖರೀದಿ ಮಾಡಿತ್ತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!
May 17, 2026
11:53 AM
by: ಸಾಯಿಶೇಖರ್ ಕರಿಕಳ
ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!
May 17, 2026
7:43 AM
by: ಸಮರ್ಥ ಸಮನ್ಯು
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು
May 17, 2026
7:28 AM
by: ದ ರೂರಲ್ ಮಿರರ್.ಕಾಂ
“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್
May 16, 2026
10:28 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror