Advertisement
ಸುದ್ದಿಗಳು

ಪಿಎಂ ಗತಿ ಶಕ್ತಿ ಯೋಜನೆ ಮೂಲಕ ಮೂಲಸೌಕರ್ಯ ಅಭಿವೃದ್ಧಿಗೆ 100 ಲಕ್ಷ ಕೋಟಿ ರೂ. ಬೃಹತ್ ಮೊತ್ತ

Share

ಆಧುನಿಕ ಮೂಲಸೌಕರ್ಯಗಳ ಅಭಿವೃದ್ಧಿಗೆ ಮಾರ್ಗದರ್ಶನ ನೀಡಲು ಮೋದಿ ನೇತೃತ್ವದ ಸರ್ಕಾರವು ಪಿಎಂ ಗತಿ ಶಕ್ತಿ, ನ್ಯಾಷನಲ್ ಮಾಸ್ಟರ್ ಪ್ಲಾನ್ ಯೋಜನೆಯನ್ನು ಪರಿಚಯಿಸಿದೆ. 2021 ಅಕ್ಟೋಬರ್‌ನಲ್ಲಿ ಸರ್ಕಾರ ಈ ಯೋಜನೆಗೆ ಚಾಲನೆ ನೀಡಿತ್ತು. ಮೂಲಸೌಕರ್ಯ ಯೋಜನೆಗಳ ಯೋಜನೆ ಮತ್ತು ಅನುಷ್ಠಾನದ ವಿಷಯದಲ್ಲಿ ಸಮನ್ವಯಕ್ಕಾಗಿ ಸರ್ಕಾರ ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ.

ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆಗೊಳಿಸುವ ಉದ್ದೇಶದಿಂದ ಒಂದೇ ಡಿಜಿಟಲ್ ವೇದಿಕೆಯಲ್ಲಿ 16 ವಲಯಗಳಲ್ಲಿ ಅಭಿವೃದ್ಧಿ ಯೋಜನೆಗಳನ್ನು ತರಲಾಗುತ್ತದೆ. ಇದರಲ್ಲಿ ರೈಲ್ವೆ ಮತ್ತು ರಸ್ತೆಗಳು ಒಳಗೊಂಡಿವೆ. 100 ಲಕ್ಷ ಕೋಟಿ ರೂ. ವೆಚ್ಚದಲ್ಲಿ ಸರ್ಕಾರ ಕಾರ್ಯಕ್ರಮ ರೂಪಿಸಿದೆ. ಯೋಜನೆಯು ಮುಂದಿನ 25 ವರ್ಷಗಳ ದೀರ್ಘಾವಧಿಯ ಗುರಿ ಸಾಧಿಸುವ ಉದ್ದೇಶ ಹೊಂದಿದೆ. ಪಿಎಂ ಗತಿ ಶಕ್ತಿ ಯೋಜನೆ ಮೂಲಕ ರಸ್ತೆ, ರೈಲ್ವೆ, ವಾಯುಯಾನ, ಬಂದರು, ಸಾರ್ವಜನಿಕ ಸಾರಿಗೆ, ಜಲಮಾರ್ಗ ಮತ್ತು ಲಾಜಿಸ್ಟಿಕ್ಸ್ ಮೂಲಸೌಕರ್ಯಗಳ  ಕ್ಷೇತ್ರಗಳಿಗೆ ಸರ್ಕಾರ ಆದ್ಯತೆ ನೀಡಲಿದೆ. ರಾಜ್ಯ ಸರ್ಕಾರಗಳು ಅಭಿವೃದ್ಧಿಪಡಿಸುತ್ತಿರುವ ಮೂಲಸೌಕರ್ಯ ಯೋಜನೆಗಳು ಕೂಡ ಪಿಎಂ ಗತಿಶಕ್ತಿ ಮಾಸ್ಟರ್ ಪ್ಲಾನ್‌ನ ಭಾಗವಾಗಿದೆ.

2022-23ರಲ್ಲಿ ಪಿಎಂ ಗತಿಶಕ್ತಿ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಸಾವಿರಾರು ಎಕ್ಸ್‌ಪ್ರೆಸ್‌ವೇಗಳ ನಿರ್ಮಾಣವನ್ನು ತ್ವರಿತಗೊಳಿಸಲು ಸರ್ಕಾರ ನಿರ್ಧರಿಸಿದೆ. 2022-23ರ ವೇಳೆಗೆ 25,000 ಕಿ.ಮೀ ರಾಷ್ಟ್ರೀಯ ಹೆದ್ದಾರಿ ಜಾಲ ವಿಸ್ತರಿಸಲು ಯೋಜನೆ ಹಾಕಿದೆ. ಬಹು ಮಾದರಿ ಲಾಜಿಸ್ಟಿಕ್ಸ್‌ ಪಾರ್ಕ್‌ಗಳನ್ನು ಸ್ಥಾಪಿಸಲು ಹೊರಟಿದೆ. ಸಾರ್ವಜನಿಕರಿಗೆ ಪಾರ್ಸೆಲ್‌ಗಳನ್ನು ವೇಗವಾಗಿ ತಲುಪಿಸಲು ಅಂಚೆ ಮತ್ತು ರೈಲ್ವೆ ಜಾಲಗಳು ಪ್ರಧಾನ ಪಾತ್ರ ವಹಿಸಿವೆ. ಸ್ಥಳೀಯ ವ್ಯಾಪಾರಿಗಳು ಮತ್ತು ಪೂರೈಕೆ ಸರಪಳಿಗಳಿಗೆ ಸಹಾಯ ಮಾಡಲು ‘ಒಂದು ನಿಲ್ದಾಣ-ಒಂದು ಉತ್ಪನ್ನ’ ವಿಧಾನವನ್ನು ಅಳವಡಿಸಲಾಗುತ್ತಿದೆ.

ಮುಂದಿನ ಮೂರು ವರ್ಷಗಳಲ್ಲಿ ಭಾರತವು 400 ಹೊಸ ತಲೆಮಾರಿನ ರೈಲುಗಳನ್ನು ನಿರ್ಮಿಸುತ್ತಿದೆ.
ಬಹು ಮಾದರಿ ಲಾಜಿಸ್ಟಿಕ್ ಸೌಲಭ್ಯಗಳಿಗಾಗಿ 100 ಪಿಎಂ ಗತಿಶಕ್ತಿ ಕಾರ್ಗೋ ಟರ್ಮಿನಲ್‌ಗಳನ್ನು ಸ್ಥಾಪಿಸಲಾಗುತ್ತಿದೆ. ಮೆಟ್ರೋ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸಲು ತ್ವರಿತ ಹಣಕಾಸು ನೀಡಲಾಗುತ್ತಿದೆ. ಆದ್ಯತೆಯ ಆಧಾರದ ಮೇಲೆ ಸಾಮೂಹಿಕ ನಗರ ಸಾರಿಗೆ ಮತ್ತು ರೈಲು ನಿಲ್ದಾಣಗಳ ನಡುವೆ ಮಲ್ಟಿಮಾಡೆಲ್‌ ಸಂಪರ್ಕ ಒದಗಿಸಲಾಗುತ್ತದೆ.

ಈ ಯೋಜನೆ ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಗೆ ಹೊಸ ಚೈತನ್ಯ ನೀಡಲಿದೆ. ಮಲ್ಟಿಮಾಡೆಲ್‌ ಸಂಪರ್ಕದೊಂದಿಗೆ ಭಾರತಕ್ಕೆ ಹೆಚ್ಚಿನ ಹೂಡಿಕೆಗಳು ಬರುತ್ತಿವೆ. ಒಟ್ಟಿನಲ್ಲಿ ಪ್ರಧಾನಿ ಮೋದಿ ನೇತೃತ್ವದ ಈ ಯೋಜನೆ ದೇಶದ ಮೂಲಸೌಕರ್ಯದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಿದೆ. ದೇಶಕ್ಕೆ ಹೊಸ ದಿಕ್ಸೂಚಿಯಾಗಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

3 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

10 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

18 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

20 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 day ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

1 day ago