Advertisement
ಸುದ್ದಿಗಳು

ಅಡಿಕೆ ರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿ ನೀಡಬೇಕು | ಸದನದಲ್ಲಿ ಶಾಸಕ ಅಶೋಕ್ ರೈ ಮನವಿ

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆಗೆ ಹಳದಿ ಎಲೆರೋಗ ಹಾಗೂ ಎಲೆ ಚುಕ್ಕಿ ರೋಗ ಬಂದಿದೆ ಇವೆಲ್ಲಾ ಕಾರಣಕ್ಕೆ ಕರಾವಳಿ ಜನ ತತ್ತರಿಸಿದ್ದಾರೆ. ಸರಕಾರ ಈ ಎಲ್ಲಾ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ನೀಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನಸೆಳೆದರು. ಸರಕಾರವು ಶಾಸಕ ಅಶೋಕ್ ರೈ ಪ್ರಸ್ತಾಪವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇ ಗೌಡ ಸಭೆಗೆ ತಿಳಿಸಿದರು.

Advertisement
Advertisement

ವ್ಯಾಪಕ ಮಳೆಯಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ಅಡಿಕೆಗೆ ಹಳದಿ ಮತ್ತು ಎಲೆ ಚುಕ್ಕಿ ರೋಗ ಬಂದಿದೆ. ಎಲೆ ಚುಕ್ಕಿ ರೋಗದಿಂದ ಅಡಿಕೆ ಹಿಂಗಾರ ಒಣಗಿ ಹೋಗಿದ್ದು ಇದರಿಂದ ಕೃಷಿಕರಿಗೆ ತುಂಬಾ ನಷ್ಟವಾಗಿದೆ. ಅಡಿಕೆಯನ್ನೇ ನಂಬಿ ಜೀವನ ಮಾಡುತ್ತಿರುವ ಕರಾವಳಿಯ ಕೃಷಿಕರು ಆತಂಕದಲ್ಲಿದ್ದಾರೆ. ಅಡಿಕೆಗೆ ಬಿಡುವ ಔಷಧಿ ಮತ್ತು ಮೈಲುತುತ್ತನ್ನು ಸರಕಾರ ಉಚಿತವಾಗಿ ನೀಡುವ ಮೂಲಕ ಕೃಷಿಕರ ನೆರವಿಗೆ ಬರಬೇಕು ಮತ್ತು ಈ ರೋಗದಿಂದ ಅಡಿಕೆ ನಷ್ಟವಾದ ಕೃಷಿಕರಿಗೆ ಸರಕಾರ ಸೂಕ್ತ ರೀತಿಯಲ್ಲಿ ಪರಿಹಾರವನ್ನು ನೀಡಬೇಕು ಎಂದು ಶಾಸಕ ಅಶೋಕ್ ರೈ ಸದನದಲ್ಲಿ ಸರಕಾರದ ಗಮನಸೆಳೆದರು.

Advertisement

ಕರಾವಳಿ ಜಿಲ್ಲೆಗಳಾದ ಉಡುಪಿ ಮ್ತತು ದಕ ಜಿಲ್ಲೆಯ ಜನರ ಸಮಸ್ಯೆಯನ್ನು ಪುತ್ತೂರು ಶಾಸಕರಾದ ಅಶೋಕ್ ರೈಯವರು ಸರಕಾರದ ಗಮನಕ್ಕೆ ತಂದಿದ್ದಾರೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಸೋಮವಾರ ಸಚಿವ ಸಂಪುಟದ ಸಭೆಯಲ್ಲಿ ವಿಚಾರವನ್ನು ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ. ವ್ಯಾಪಕ ಮಳೆಗೆ ರಸ್ತೆ ಹಾನಿ, ವಿದ್ಯುತ್ ವ್ಯತ್ಯಯ ಮತ್ತು ಮನೆ ಕಳೆದುಕೊಂಡವರು ಮತ್ತು ಬೆಳೆ ಹಾನಿಯ ಬಗ್ಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರಕಾರದ ಜೊತೆ ಮಾತುಕತೆ ನಡೆಸುತ್ತೇನೆ ಎಂದರು.

Advertisement

ಈ ಬಾರಿ ವಾಡಿಕೆಗಿಂದ ಹೆಚ್ಚು ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ. 21 ಹೆಚ್ಚು ಮಳೆಯಾಗಿರುವ ಕಾರಣ ಬಹುತೇಕ ಕಡೆ ಸಮಸ್ಯೆ ಸೃಷ್ಟಿಯಾಗಿದೆ. ತುರ್ತು ಕ್ರಮಕ್ಕಾಗಿ ಈಗಾಗಲೇ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ಇನ್ನೂ ಹೆಚ್ಚಿನ ಪರಿಹಾರ ಮೊತ್ತವನ್ನು ನೀಡಲಿದ್ದೇವೆ. ಎಷ್ಟು ಬೇಡಿಕೆ ಇದೆಯೋ ಅಷ್ಟು ಪರಿಹಾರ ಕೊಡಲು ಸರಕರ ಬದ್ದವಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಸಭೆಗೆ ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೌರಶಕ್ತಿಯ ಬಳಕೆ ಅನಿವಾರ್ಯ ಏಕೆ..? | ರೈತರಿಗೆ ಮಾಹಿತಿ ಕಾರ್ಯಕ್ರಮ |

ಮುಂಬರುವ ದಿನಗಳಲ್ಲಿ ಪಳಯುಳಿಕೆ ಇಂಧನ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುವುದು ಅಗತ್ಯವಾಗಿದೆ. ಜಾಗತಿಕ ತಾಪಮಾನವನ್ನು…

8 hours ago

ರೈತರ ಆದಾಯ ಮತ್ತು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು 7 ಯೋಜನೆಗಳಿಗೆ 13,966 ಕೋಟಿ ರೂಪಾಯಿ | ಕೇಂದ್ರ ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಏಳು ಪ್ರಮುಖ ಕೃಷಿ ಯೋಜನೆಗಳಿಗೆ ಅನುಮೋದನೆ ನೀಡಿದೆ. ಕೃಷಿ ಸಂಶೋಧನೆ,…

8 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ 2027 ಕ್ಕೆ ಪೂರ್ಣ | ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಎತ್ತಿನಹೊಳೆ ಯೋಜನೆ 2027 ಕ್ಕೆ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್…

8 hours ago

ಹವಾಮಾನ ವರದಿ | 02-09-2024 | ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ |

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ತೆಲಂಗಾಣದಿಂದ ಮುಂದುವರಿಯುತ್ತಿದ್ದು ಮಹಾರಾಷ್ಟ್ರ ಕಡೆಗೆ ಚಲಿಸುತ್ತಿದೆ. ಇದರ ಪರಿಣಾಮದಿಂದ…

17 hours ago

ಅಸ್ನಾ ಚಂಡಮಾರುತದ ಆತಂಕದ ದೂರ | ಮುಂದಿನ ಐದು ದಿನಗಳಲ್ಲಿ ಭಾರೀ ಮಳೆ ಇಲ್ಲ |

ಈಶಾನ್ಯ ಅರಬ್ಬಿ ಸಮುದ್ರದ ಮೇಲೆ ಅಪ್ಪಳಿಸುತ್ತಿದ್ದ 'ಅಸ್ನಾ' ಚಂಡಮಾರುತವು ಪಶ್ಚಿಮಾಭಿಮುಖವಾಗಿ ಚಲಿಸಿದೆ ಮತ್ತು…

1 day ago