Advertisement
ಸುದ್ದಿಗಳು

ಅಡಿಕೆ ರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿ ನೀಡಬೇಕು | ಸದನದಲ್ಲಿ ಶಾಸಕ ಅಶೋಕ್ ರೈ ಮನವಿ

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆಗೆ ಹಳದಿ ಎಲೆರೋಗ ಹಾಗೂ ಎಲೆ ಚುಕ್ಕಿ ರೋಗ ಬಂದಿದೆ ಇವೆಲ್ಲಾ ಕಾರಣಕ್ಕೆ ಕರಾವಳಿ ಜನ ತತ್ತರಿಸಿದ್ದಾರೆ. ಸರಕಾರ ಈ ಎಲ್ಲಾ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ನೀಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನಸೆಳೆದರು. ಸರಕಾರವು ಶಾಸಕ ಅಶೋಕ್ ರೈ ಪ್ರಸ್ತಾಪವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇ ಗೌಡ ಸಭೆಗೆ ತಿಳಿಸಿದರು.

Advertisement

ವ್ಯಾಪಕ ಮಳೆಯಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ಅಡಿಕೆಗೆ ಹಳದಿ ಮತ್ತು ಎಲೆ ಚುಕ್ಕಿ ರೋಗ ಬಂದಿದೆ. ಎಲೆ ಚುಕ್ಕಿ ರೋಗದಿಂದ ಅಡಿಕೆ ಹಿಂಗಾರ ಒಣಗಿ ಹೋಗಿದ್ದು ಇದರಿಂದ ಕೃಷಿಕರಿಗೆ ತುಂಬಾ ನಷ್ಟವಾಗಿದೆ. ಅಡಿಕೆಯನ್ನೇ ನಂಬಿ ಜೀವನ ಮಾಡುತ್ತಿರುವ ಕರಾವಳಿಯ ಕೃಷಿಕರು ಆತಂಕದಲ್ಲಿದ್ದಾರೆ. ಅಡಿಕೆಗೆ ಬಿಡುವ ಔಷಧಿ ಮತ್ತು ಮೈಲುತುತ್ತನ್ನು ಸರಕಾರ ಉಚಿತವಾಗಿ ನೀಡುವ ಮೂಲಕ ಕೃಷಿಕರ ನೆರವಿಗೆ ಬರಬೇಕು ಮತ್ತು ಈ ರೋಗದಿಂದ ಅಡಿಕೆ ನಷ್ಟವಾದ ಕೃಷಿಕರಿಗೆ ಸರಕಾರ ಸೂಕ್ತ ರೀತಿಯಲ್ಲಿ ಪರಿಹಾರವನ್ನು ನೀಡಬೇಕು ಎಂದು ಶಾಸಕ ಅಶೋಕ್ ರೈ ಸದನದಲ್ಲಿ ಸರಕಾರದ ಗಮನಸೆಳೆದರು.

ಕರಾವಳಿ ಜಿಲ್ಲೆಗಳಾದ ಉಡುಪಿ ಮ್ತತು ದಕ ಜಿಲ್ಲೆಯ ಜನರ ಸಮಸ್ಯೆಯನ್ನು ಪುತ್ತೂರು ಶಾಸಕರಾದ ಅಶೋಕ್ ರೈಯವರು ಸರಕಾರದ ಗಮನಕ್ಕೆ ತಂದಿದ್ದಾರೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಸೋಮವಾರ ಸಚಿವ ಸಂಪುಟದ ಸಭೆಯಲ್ಲಿ ವಿಚಾರವನ್ನು ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ. ವ್ಯಾಪಕ ಮಳೆಗೆ ರಸ್ತೆ ಹಾನಿ, ವಿದ್ಯುತ್ ವ್ಯತ್ಯಯ ಮತ್ತು ಮನೆ ಕಳೆದುಕೊಂಡವರು ಮತ್ತು ಬೆಳೆ ಹಾನಿಯ ಬಗ್ಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರಕಾರದ ಜೊತೆ ಮಾತುಕತೆ ನಡೆಸುತ್ತೇನೆ ಎಂದರು.

ಈ ಬಾರಿ ವಾಡಿಕೆಗಿಂದ ಹೆಚ್ಚು ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ. 21 ಹೆಚ್ಚು ಮಳೆಯಾಗಿರುವ ಕಾರಣ ಬಹುತೇಕ ಕಡೆ ಸಮಸ್ಯೆ ಸೃಷ್ಟಿಯಾಗಿದೆ. ತುರ್ತು ಕ್ರಮಕ್ಕಾಗಿ ಈಗಾಗಲೇ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ಇನ್ನೂ ಹೆಚ್ಚಿನ ಪರಿಹಾರ ಮೊತ್ತವನ್ನು ನೀಡಲಿದ್ದೇವೆ. ಎಷ್ಟು ಬೇಡಿಕೆ ಇದೆಯೋ ಅಷ್ಟು ಪರಿಹಾರ ಕೊಡಲು ಸರಕರ ಬದ್ದವಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಸಭೆಗೆ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

6 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

6 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

19 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

1 day ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

1 day ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

1 day ago