Advertisement
ಸುದ್ದಿಗಳು

ಅಡಿಕೆ ರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿ ನೀಡಬೇಕು | ಸದನದಲ್ಲಿ ಶಾಸಕ ಅಶೋಕ್ ರೈ ಮನವಿ

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆಗೆ ಹಳದಿ ಎಲೆರೋಗ ಹಾಗೂ ಎಲೆ ಚುಕ್ಕಿ ರೋಗ ಬಂದಿದೆ ಇವೆಲ್ಲಾ ಕಾರಣಕ್ಕೆ ಕರಾವಳಿ ಜನ ತತ್ತರಿಸಿದ್ದಾರೆ. ಸರಕಾರ ಈ ಎಲ್ಲಾ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ನೀಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನಸೆಳೆದರು. ಸರಕಾರವು ಶಾಸಕ ಅಶೋಕ್ ರೈ ಪ್ರಸ್ತಾಪವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇ ಗೌಡ ಸಭೆಗೆ ತಿಳಿಸಿದರು.

ವ್ಯಾಪಕ ಮಳೆಯಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ಅಡಿಕೆಗೆ ಹಳದಿ ಮತ್ತು ಎಲೆ ಚುಕ್ಕಿ ರೋಗ ಬಂದಿದೆ. ಎಲೆ ಚುಕ್ಕಿ ರೋಗದಿಂದ ಅಡಿಕೆ ಹಿಂಗಾರ ಒಣಗಿ ಹೋಗಿದ್ದು ಇದರಿಂದ ಕೃಷಿಕರಿಗೆ ತುಂಬಾ ನಷ್ಟವಾಗಿದೆ. ಅಡಿಕೆಯನ್ನೇ ನಂಬಿ ಜೀವನ ಮಾಡುತ್ತಿರುವ ಕರಾವಳಿಯ ಕೃಷಿಕರು ಆತಂಕದಲ್ಲಿದ್ದಾರೆ. ಅಡಿಕೆಗೆ ಬಿಡುವ ಔಷಧಿ ಮತ್ತು ಮೈಲುತುತ್ತನ್ನು ಸರಕಾರ ಉಚಿತವಾಗಿ ನೀಡುವ ಮೂಲಕ ಕೃಷಿಕರ ನೆರವಿಗೆ ಬರಬೇಕು ಮತ್ತು ಈ ರೋಗದಿಂದ ಅಡಿಕೆ ನಷ್ಟವಾದ ಕೃಷಿಕರಿಗೆ ಸರಕಾರ ಸೂಕ್ತ ರೀತಿಯಲ್ಲಿ ಪರಿಹಾರವನ್ನು ನೀಡಬೇಕು ಎಂದು ಶಾಸಕ ಅಶೋಕ್ ರೈ ಸದನದಲ್ಲಿ ಸರಕಾರದ ಗಮನಸೆಳೆದರು.

ಕರಾವಳಿ ಜಿಲ್ಲೆಗಳಾದ ಉಡುಪಿ ಮ್ತತು ದಕ ಜಿಲ್ಲೆಯ ಜನರ ಸಮಸ್ಯೆಯನ್ನು ಪುತ್ತೂರು ಶಾಸಕರಾದ ಅಶೋಕ್ ರೈಯವರು ಸರಕಾರದ ಗಮನಕ್ಕೆ ತಂದಿದ್ದಾರೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಸೋಮವಾರ ಸಚಿವ ಸಂಪುಟದ ಸಭೆಯಲ್ಲಿ ವಿಚಾರವನ್ನು ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ. ವ್ಯಾಪಕ ಮಳೆಗೆ ರಸ್ತೆ ಹಾನಿ, ವಿದ್ಯುತ್ ವ್ಯತ್ಯಯ ಮತ್ತು ಮನೆ ಕಳೆದುಕೊಂಡವರು ಮತ್ತು ಬೆಳೆ ಹಾನಿಯ ಬಗ್ಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರಕಾರದ ಜೊತೆ ಮಾತುಕತೆ ನಡೆಸುತ್ತೇನೆ ಎಂದರು.

ಈ ಬಾರಿ ವಾಡಿಕೆಗಿಂದ ಹೆಚ್ಚು ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ. 21 ಹೆಚ್ಚು ಮಳೆಯಾಗಿರುವ ಕಾರಣ ಬಹುತೇಕ ಕಡೆ ಸಮಸ್ಯೆ ಸೃಷ್ಟಿಯಾಗಿದೆ. ತುರ್ತು ಕ್ರಮಕ್ಕಾಗಿ ಈಗಾಗಲೇ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ಇನ್ನೂ ಹೆಚ್ಚಿನ ಪರಿಹಾರ ಮೊತ್ತವನ್ನು ನೀಡಲಿದ್ದೇವೆ. ಎಷ್ಟು ಬೇಡಿಕೆ ಇದೆಯೋ ಅಷ್ಟು ಪರಿಹಾರ ಕೊಡಲು ಸರಕರ ಬದ್ದವಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಸಭೆಗೆ ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

7 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

8 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

8 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

15 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

20 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago