Advertisement
ಸುದ್ದಿಗಳು

ಅಡಿಕೆ ರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿ ನೀಡಬೇಕು | ಸದನದಲ್ಲಿ ಶಾಸಕ ಅಶೋಕ್ ರೈ ಮನವಿ

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆಗೆ ಹಳದಿ ಎಲೆರೋಗ ಹಾಗೂ ಎಲೆ ಚುಕ್ಕಿ ರೋಗ ಬಂದಿದೆ ಇವೆಲ್ಲಾ ಕಾರಣಕ್ಕೆ ಕರಾವಳಿ ಜನ ತತ್ತರಿಸಿದ್ದಾರೆ. ಸರಕಾರ ಈ ಎಲ್ಲಾ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ನೀಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನಸೆಳೆದರು. ಸರಕಾರವು ಶಾಸಕ ಅಶೋಕ್ ರೈ ಪ್ರಸ್ತಾಪವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇ ಗೌಡ ಸಭೆಗೆ ತಿಳಿಸಿದರು.

ವ್ಯಾಪಕ ಮಳೆಯಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ಅಡಿಕೆಗೆ ಹಳದಿ ಮತ್ತು ಎಲೆ ಚುಕ್ಕಿ ರೋಗ ಬಂದಿದೆ. ಎಲೆ ಚುಕ್ಕಿ ರೋಗದಿಂದ ಅಡಿಕೆ ಹಿಂಗಾರ ಒಣಗಿ ಹೋಗಿದ್ದು ಇದರಿಂದ ಕೃಷಿಕರಿಗೆ ತುಂಬಾ ನಷ್ಟವಾಗಿದೆ. ಅಡಿಕೆಯನ್ನೇ ನಂಬಿ ಜೀವನ ಮಾಡುತ್ತಿರುವ ಕರಾವಳಿಯ ಕೃಷಿಕರು ಆತಂಕದಲ್ಲಿದ್ದಾರೆ. ಅಡಿಕೆಗೆ ಬಿಡುವ ಔಷಧಿ ಮತ್ತು ಮೈಲುತುತ್ತನ್ನು ಸರಕಾರ ಉಚಿತವಾಗಿ ನೀಡುವ ಮೂಲಕ ಕೃಷಿಕರ ನೆರವಿಗೆ ಬರಬೇಕು ಮತ್ತು ಈ ರೋಗದಿಂದ ಅಡಿಕೆ ನಷ್ಟವಾದ ಕೃಷಿಕರಿಗೆ ಸರಕಾರ ಸೂಕ್ತ ರೀತಿಯಲ್ಲಿ ಪರಿಹಾರವನ್ನು ನೀಡಬೇಕು ಎಂದು ಶಾಸಕ ಅಶೋಕ್ ರೈ ಸದನದಲ್ಲಿ ಸರಕಾರದ ಗಮನಸೆಳೆದರು.

ಕರಾವಳಿ ಜಿಲ್ಲೆಗಳಾದ ಉಡುಪಿ ಮ್ತತು ದಕ ಜಿಲ್ಲೆಯ ಜನರ ಸಮಸ್ಯೆಯನ್ನು ಪುತ್ತೂರು ಶಾಸಕರಾದ ಅಶೋಕ್ ರೈಯವರು ಸರಕಾರದ ಗಮನಕ್ಕೆ ತಂದಿದ್ದಾರೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಸೋಮವಾರ ಸಚಿವ ಸಂಪುಟದ ಸಭೆಯಲ್ಲಿ ವಿಚಾರವನ್ನು ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ. ವ್ಯಾಪಕ ಮಳೆಗೆ ರಸ್ತೆ ಹಾನಿ, ವಿದ್ಯುತ್ ವ್ಯತ್ಯಯ ಮತ್ತು ಮನೆ ಕಳೆದುಕೊಂಡವರು ಮತ್ತು ಬೆಳೆ ಹಾನಿಯ ಬಗ್ಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರಕಾರದ ಜೊತೆ ಮಾತುಕತೆ ನಡೆಸುತ್ತೇನೆ ಎಂದರು.

ಈ ಬಾರಿ ವಾಡಿಕೆಗಿಂದ ಹೆಚ್ಚು ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ. 21 ಹೆಚ್ಚು ಮಳೆಯಾಗಿರುವ ಕಾರಣ ಬಹುತೇಕ ಕಡೆ ಸಮಸ್ಯೆ ಸೃಷ್ಟಿಯಾಗಿದೆ. ತುರ್ತು ಕ್ರಮಕ್ಕಾಗಿ ಈಗಾಗಲೇ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ಇನ್ನೂ ಹೆಚ್ಚಿನ ಪರಿಹಾರ ಮೊತ್ತವನ್ನು ನೀಡಲಿದ್ದೇವೆ. ಎಷ್ಟು ಬೇಡಿಕೆ ಇದೆಯೋ ಅಷ್ಟು ಪರಿಹಾರ ಕೊಡಲು ಸರಕರ ಬದ್ದವಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಸಭೆಗೆ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

5 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

6 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

7 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

7 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

7 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

8 hours ago