ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣ 8 ಕೋಟಿ ಅನುದಾನ | 4 ಕೋಟಿ ರೂ ತಕ್ಷಣಕ್ಕೆ ರೈತರಿಗೆ ವಿತರಣೆ | ಸಚಿವ ಅರಗ ಜ್ಞಾನೇಂದ್ರ |

October 3, 2022
10:17 PM

ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ರಾಜ್ಯ ಸರ್ಕಾರ 8 ಕೋಟಿ ರೂಪಾಯಿ ಅನುದಾನ ನಿಗದಿ ಮಾಡಿದ್ದು ಅದರಲ್ಲಿ 4 ಕೋಟಿ ಋೂಪಾಯಿಯನ್ನು ತಕ್ಷಣಕ್ಕೆ ರೈತರಿಗೆ ವಿತರಿಸಲು ಬಿಡುಗಡೆ ಮಾಡಲಾಗಿದೆ ಎಂದು ಗೃಹ ಸಚಿವ, ಅಡಿಕೆ ಟಾಸ್ಕ್‌ಫೋರ್ಸ್‌ ಸಮಿತಿ ಅಧ್ಯಕ್ಷ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಹಾಸನ ಜಿಲ್ಲೆಯಲ್ಲಿ ಒಟ್ಟು 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಎಲೆ ಚುಕ್ಕೆ ರೋಗ ಹಬ್ಬಿದ್ದು, ತೋಟಗಾರಿಕೆ ಇಲಾಖೆಯಿಂದ ಔಷಧಿ ಹಾಗೂ ಸಿಂಪಡಣೆ ವೆಚ್ಚ ಭರಿಸಲು ಅನುದಾನ ಬಿಡುಗಡೆಗೊಳಿಸಲಾಗಿದೆ. ರೋಗ ನಿಯಂತ್ರಣಕ್ಕೆ ಗುಣಮಟ್ಟದ ಸಸ್ಯ ಸಂರಕ್ಷಣೆ ಔಷಧ ಕೊಳ್ಳಲು ಪ್ರತಿ ಹೆಕ್ಟೇರ್ ಗೆ  ರೂಪಾಯಿ 4000 ಹಾಗೂ ಮೊದಲ ಸಿಂಪಡಣೆಗಾಗಿ 1.5 ಹೆಕ್ಟೇರ್ ತೋಟಗಾರಿಕಾ ಪ್ರದೇಶ ಮಿತಿಗೊಳಪಟ್ಟು ಅನುದಾನ ಒದಗಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಅಡಿಕೆ ಬೆಳೆಗಾರರ ಸಮಸ್ಯೆ ಪರಿಹರಿಸಲು  ಸರ್ಕಾರ ಕಟಿಬದ್ಧವಾಗಿದೆ. ಇದಕ್ಕಾಗಿ  ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿದೆ ಎಂದು ಅರಗ ಜ್ಞಾನೇಂದ್ರ ಅವರು ಇದೇ ವೇಳೆ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror