ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ರಾಜ್ಯ ಸರ್ಕಾರ 8 ಕೋಟಿ ರೂಪಾಯಿ ಅನುದಾನ ನಿಗದಿ ಮಾಡಿದ್ದು ಅದರಲ್ಲಿ 4 ಕೋಟಿ ಋೂಪಾಯಿಯನ್ನು ತಕ್ಷಣಕ್ಕೆ ರೈತರಿಗೆ ವಿತರಿಸಲು ಬಿಡುಗಡೆ ಮಾಡಲಾಗಿದೆ ಎಂದು ಗೃಹ ಸಚಿವ, ಅಡಿಕೆ ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಹಾಸನ ಜಿಲ್ಲೆಯಲ್ಲಿ ಒಟ್ಟು 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಎಲೆ ಚುಕ್ಕೆ ರೋಗ ಹಬ್ಬಿದ್ದು, ತೋಟಗಾರಿಕೆ ಇಲಾಖೆಯಿಂದ ಔಷಧಿ ಹಾಗೂ ಸಿಂಪಡಣೆ ವೆಚ್ಚ ಭರಿಸಲು ಅನುದಾನ ಬಿಡುಗಡೆಗೊಳಿಸಲಾಗಿದೆ. ರೋಗ ನಿಯಂತ್ರಣಕ್ಕೆ ಗುಣಮಟ್ಟದ ಸಸ್ಯ ಸಂರಕ್ಷಣೆ ಔಷಧ ಕೊಳ್ಳಲು ಪ್ರತಿ ಹೆಕ್ಟೇರ್ ಗೆ ರೂಪಾಯಿ 4000 ಹಾಗೂ ಮೊದಲ ಸಿಂಪಡಣೆಗಾಗಿ 1.5 ಹೆಕ್ಟೇರ್ ತೋಟಗಾರಿಕಾ ಪ್ರದೇಶ ಮಿತಿಗೊಳಪಟ್ಟು ಅನುದಾನ ಒದಗಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಅಡಿಕೆ ಬೆಳೆಗಾರರ ಸಮಸ್ಯೆ ಪರಿಹರಿಸಲು ಸರ್ಕಾರ ಕಟಿಬದ್ಧವಾಗಿದೆ. ಇದಕ್ಕಾಗಿ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿದೆ ಎಂದು ಅರಗ ಜ್ಞಾನೇಂದ್ರ ಅವರು ಇದೇ ವೇಳೆ ಹೇಳಿದ್ದಾರೆ.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…