ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ರಾಜ್ಯ ಸರ್ಕಾರ 8 ಕೋಟಿ ರೂಪಾಯಿ ಅನುದಾನ ನಿಗದಿ ಮಾಡಿದ್ದು ಅದರಲ್ಲಿ 4 ಕೋಟಿ ಋೂಪಾಯಿಯನ್ನು ತಕ್ಷಣಕ್ಕೆ ರೈತರಿಗೆ ವಿತರಿಸಲು ಬಿಡುಗಡೆ ಮಾಡಲಾಗಿದೆ ಎಂದು ಗೃಹ ಸಚಿವ, ಅಡಿಕೆ ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಹಾಸನ ಜಿಲ್ಲೆಯಲ್ಲಿ ಒಟ್ಟು 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಎಲೆ ಚುಕ್ಕೆ ರೋಗ ಹಬ್ಬಿದ್ದು, ತೋಟಗಾರಿಕೆ ಇಲಾಖೆಯಿಂದ ಔಷಧಿ ಹಾಗೂ ಸಿಂಪಡಣೆ ವೆಚ್ಚ ಭರಿಸಲು ಅನುದಾನ ಬಿಡುಗಡೆಗೊಳಿಸಲಾಗಿದೆ. ರೋಗ ನಿಯಂತ್ರಣಕ್ಕೆ ಗುಣಮಟ್ಟದ ಸಸ್ಯ ಸಂರಕ್ಷಣೆ ಔಷಧ ಕೊಳ್ಳಲು ಪ್ರತಿ ಹೆಕ್ಟೇರ್ ಗೆ ರೂಪಾಯಿ 4000 ಹಾಗೂ ಮೊದಲ ಸಿಂಪಡಣೆಗಾಗಿ 1.5 ಹೆಕ್ಟೇರ್ ತೋಟಗಾರಿಕಾ ಪ್ರದೇಶ ಮಿತಿಗೊಳಪಟ್ಟು ಅನುದಾನ ಒದಗಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಅಡಿಕೆ ಬೆಳೆಗಾರರ ಸಮಸ್ಯೆ ಪರಿಹರಿಸಲು ಸರ್ಕಾರ ಕಟಿಬದ್ಧವಾಗಿದೆ. ಇದಕ್ಕಾಗಿ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿದೆ ಎಂದು ಅರಗ ಜ್ಞಾನೇಂದ್ರ ಅವರು ಇದೇ ವೇಳೆ ಹೇಳಿದ್ದಾರೆ.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…