ನಕಲಿ ರಸಗೊಬ್ಬರ, ಕೀಟನಾಶಕ ವಿರುದ್ಧ ಮಸೂದೆ ಅಗತ್ಯ

December 22, 2025
7:59 AM

ಮುಂದಿನ ಸಂಸತ್ ಅಧಿವೇಶನದಲ್ಲಿ ಸರ್ಕಾರ ನಕಲಿ ರಸಗೊಬ್ಬರಗಳು ಹಾಗೂ ಕೀಟನಾಶಕಗಳ ವಿರುದ್ಧ ಮಸೂದೆಯನ್ನು ಮಂಡಿಸಲಿದೆ ಎಂದು ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ದೆಹಲಿಯಲ್ಲಿ ಕಿಸಾನ್ ಟ್ರಸ್ಟ್ ಆಯೋಜಿಸಿದ್ದ ಚೌಧರಿ ಚರಣ್ ಸಿಂಗ್ ಕಿಸಾನ್ ಸಮ್ಮಾನ್ ಸಮಾರಂಭದಲ್ಲಿ ಅವರು ಮಾತನಾಡಿದರು. ಗ್ರಾಹಕರು ಮತ್ತು ಕೃಷಿಕರನ್ನು ದಾರಿತಪ್ಪಿಸುವ ಟ್ಯಾಗ್ ಗಳ ಅಡಿಯಲ್ಲಿ ನಕಲಿ ರಸಗೊಬ್ಬಕ ಕೀಟನಾಶಕ ಮತ್ತು ಅನಧಿಕೃತ ಜೈವಿಕ ಉತ್ತೇಜಕಗಳ ಮಾರಾಟ ಕಳವಳಕಾರಿಯಾಗಿದೆ. ಇವುಗಳ ನಿಗ್ರಹಕ್ಕೆ ಕಠಿಣ ಕಾನೂನು ಕ್ರಮಗಳನ್ನು ಜಾರಿಗೊಳಿಸಲಾಗುವುದು, ಅಪ್ರಾಮಾಣಿಕ ವ್ಯಾಪಾರಿಗಳ ವಿರುದ್ಧ ಸರ್ಕಾರ ಸಮಗ್ರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದರು.

Advertisement

ಇತ್ತೀಚೆಗೆ ಅಂಗೀಕರಿಸಲ್ಪಟ್ಟ ವಿಕಸಿತ ಭಾರತ ಜಿ ರಾಮ್ ಜಿ ಯೋಜನೆ ಅಡಿಯಲ್ಲಿ ಖಾತ್ರಿಪಡಿಸಲಾದ ಉದ್ಯೋಗ ದಿನಗಳನ್ನು ನೂರರಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ ಎಂದು ಹೇಳಿದರು.

ವಿಜ್ಞಾನಿಗಳು ಮತ್ತು ರೈತರ ನಡುವಿನ ನೇರ ಸಂವಾದದ ಮಹತ್ವವನ್ನು ಹೇಳಿದ ಅವರು, ಸಂಶೋಧನಾ ಸಂಶೋಧನೆಗಳನ್ನು ನೇರವಾಗಿ ಕ್ಷೇತ್ರಗಳಿಗೆ ತರುವ ‘ಪ್ರಯೋಗಾಲಯದಿಂದ ಭೂಮಿಗೆ’ ಎಂಬ ದೃಷ್ಟಿಕೋನ ಅಗತ್ಯ ಇದೆ ಎಂದರು. ರೈತರೊಂದಿಗೆ ನೇರ ಸಂವಹನ ಮತ್ತು ಜ್ಞಾನ ವಿನಿಮಯಕ್ಕಾಗಿ ವಿಜ್ಞಾನಿಗಳು ವರ್ಷಕ್ಕೊಮ್ಮೆ ಕೃಷಿ ಜಮೀನುಗಳಿಗೆ ಭೇಟಿ ನೀಡಬೇಕೆಂದು ಸರ್ಕಾರ ನಿರ್ಧರಿಸಿದೆ ಎಂದರು. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ
July 1, 2026
7:06 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 1, 2026
6:41 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ
July 1, 2026
2:57 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!
July 1, 2026
11:29 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror