ಭೂತಾನ್‌ ನಿಂದ 17,000 ಟನ್ ಅಡಿಕೆ ಆಮದಿಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ |

September 29, 2022
3:31 PM

ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ಅಡಿಕೆ ಬೆಳೆ ವಿಸ್ತರಣೆ, ಅಡಿಕೆ ಉತ್ಪಾದನೆ ಹೆಚ್ಚಳದ ನಡುವೆಯೇ ಭೂತಾನ್‌ನಿಂದ ಪ್ರತಿವರ್ಷ  ಷರತ್ತು ಇಲ್ಲದೆಯೇ 17,000 ಟನ್ ಹಸಿರು ಅಡಿಕೆಯನ್ನು(Arecanut) ಆಮದು ಮಾಡಿಕೊಳ್ಳಬಹುದು ಎಂದು ಬುಧವಾರ ಕೇಂದ್ರ ಸರ್ಕಾರದ ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ (DGFT)  ಅನುಮತಿ ನೀಡಿದೆ.

ಇದೀಗ ಭೂತಾನ್‌ನಿಂದ ಕನಿಷ್ಟ ಆಮದು ಬೆಲೆಯ ಷರತ್ತು ಇಲ್ಲದೆಯೇ ಪ್ರತೀ ವರ್ಷ 17000 ಟನ್‌ ಹಸಿರು ಅಡಿಕೆಯನ್ನು ಆಮದು ಮಾಡಿಕೊಳ್ಳಬಹುದಾಗಿದೆ. ಅಂದರೆ ಕನಿಷ್ಟ ಆಮದು ಬೆಲೆ 251 ರೂಪಾಯಿ ವಿಧಿಸಲಾಗಿತ್ತು. ಇದನ್ನು ಏರಿಕೆ ಮಾಡಲು ಪ್ರಯತ್ನ ನಡೆಯುತ್ತಿದೆ. 2017 ರಲ್ಲಿ, ದೇಶೀಯ ರೈತರನ್ನು ರಕ್ಷಿಸುವ ಉದ್ದೇಶದಿಂದ ಸರ್ಕಾರವು ಪ್ರತಿ ಕೆಜಿಗೆ 251 ರೂ.ಗೆ ಕನಿಷ್ಟ ಆಮದು ದರವನ್ನು ವಿಧಿಸಿತು. ಈ ಮಿತಿಗಿಂತ ಕಡಿಮೆ ಇರುವ ಅಡಿಕೆಯನ್ನು ಆಮದು ಮಾಡಿವಂತಿಲ್ಲ, ಆಮದು ಬೆಲೆಗಿಂತ ಅಧಿಕ ದರದ ಅಡಿಕೆಯನ್ನು ಆಮದು ಮಾಡಬಹುದು ಎಂದು ತಿಳಿಸಲಾಗಿತ್ತು. ಈ ನಡುವೆಯೇ ಯಾವುದೇ ಷರತ್ತು ಇಲ್ಲದೆ ಅಡಿಕೆ ಆಮದು ಮಾಡಲು ಅವಕಾಶ ನೀಡಲಾಗಿದೆ. ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ (DGFT) 2022-23ನೇ ಪ್ರಸಕ್ತ ಸಾಲಿನಲ್ಲಿ ಭೂತಾನ್‌ನಿಂದ ಕನಿಷ್ಟ ಆಮದು ಬೆಲೆ ಇಲ್ಲದೇ 8,500 ಮೆಟ್ರಿಕ್ ಟನ್‌ನಷ್ಟು ಹಸಿರು ಅಡಿಕೆಯನ್ನು ಆಮದು ಮಾಡಿಕೊಳ್ಳಬಹುದು ಎಂದು ಹೇಳಿತ್ತು. ಮುಂದಿನ ವರ್ಷದಿಂದ  ಅಂದರೆ 2023-24 ರಿಂದ 17000 ಮೆಟ್ರಿಕ್ ಟನ್ ಆಮದು ಮಾಡಿಕೊಳ್ಳಬಹುದು ಈಗಾಗಲೇ ತಿಳಿಸಲಾಗಿದೆ.  ಇದಕ್ಕಾಗಿ ವಿವಿಧ ನೀತಿಗಳನ್ನು ರೂಪಿಸಲಾಗಿದೆ.

ಈಗ ಆಗಿರುವ ನೀತಿಯಿಂದ ಅಡಿಕೆ ಬೆಳೆಗಾರರಿಗರ ಆತಂಕ ಇದೆ. ಮುಕ್ತ ವ್ಯಾಪಾರ ಒಪ್ಪಂದದ ಪ್ರಕಾರ ಕೆಲವು ದೇಶಗಳಿಂದ ಮುಕ್ತ ವ್ಯಾಪಾರ ವಹಿವಾಟು ನಡೆಸಬಹುದು. ಭಾರತ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವೆ ಆಮದು ಸುಂಕ ಇತ್ಯಾದಿ ಕೆಲವು ನಿಯಮಗಳ ಮೂಲಕ ಆಮದು ಹಾಗೂ ರಫ್ತು ನಡೆಸಬಹುದಾಗಿದೆ. ಈಗ ಅಡಿಕೆ ಆಮದು ಕನಿಷ್ಟ ಬೆಲೆ ಇಲ್ಲದೆಯೇ ಅಡಿಕೆ ಆಮದು ಅವಕಾಶ ನೀಡಿದರೆ ಭವಿಷ್ಯದಲ್ಲಿ ಭಾರತದ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಲಿದೆ ಎನ್ನುವುದು ಕೃಷಿ  ಮಾರುಕಟ್ಟೆ ವಲಯದ ಅಭಿಪ್ರಾಯ. ಸದ್ಯ ಈ ಆಮದು ನಿಯಮಗಳಿಂದ ಅಡಿಕೆ ಬೆಳೆಗಾರರಿಗೆ , ಮಾರುಕಟ್ಟೆಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಭವಿಷ್ಯದಲ್ಲಿ ಅಡಿಕೆ ಧಾರಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ
July 14, 2026
6:41 AM
by: ದ ರೂರಲ್ ಮಿರರ್.ಕಾಂ
ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ
July 13, 2026
10:46 PM
by: ದ ರೂರಲ್ ಮಿರರ್.ಕಾಂ
ಬಾಂಗ್ಲಾದೇಶದಲ್ಲಿ ಭೀಕರ ಪ್ರವಾಹ – ಭಾರಿ ಮಳೆಯಿಂದ 50 ಕ್ಕೂ ಅಧಿಕ ಮಂದಿ ಸಾವು ; 10 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ
July 13, 2026
10:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ
July 13, 2026
2:42 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror