Advertisement
ಕೃಷಿ

ಭೂತಾನ್‌ ನಿಂದ 17,000 ಟನ್ ಅಡಿಕೆ ಆಮದಿಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ |

Share

ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ಅಡಿಕೆ ಬೆಳೆ ವಿಸ್ತರಣೆ, ಅಡಿಕೆ ಉತ್ಪಾದನೆ ಹೆಚ್ಚಳದ ನಡುವೆಯೇ ಭೂತಾನ್‌ನಿಂದ ಪ್ರತಿವರ್ಷ  ಷರತ್ತು ಇಲ್ಲದೆಯೇ 17,000 ಟನ್ ಹಸಿರು ಅಡಿಕೆಯನ್ನು(Arecanut) ಆಮದು ಮಾಡಿಕೊಳ್ಳಬಹುದು ಎಂದು ಬುಧವಾರ ಕೇಂದ್ರ ಸರ್ಕಾರದ ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ (DGFT)  ಅನುಮತಿ ನೀಡಿದೆ.

Advertisement
Advertisement

ಇದೀಗ ಭೂತಾನ್‌ನಿಂದ ಕನಿಷ್ಟ ಆಮದು ಬೆಲೆಯ ಷರತ್ತು ಇಲ್ಲದೆಯೇ ಪ್ರತೀ ವರ್ಷ 17000 ಟನ್‌ ಹಸಿರು ಅಡಿಕೆಯನ್ನು ಆಮದು ಮಾಡಿಕೊಳ್ಳಬಹುದಾಗಿದೆ. ಅಂದರೆ ಕನಿಷ್ಟ ಆಮದು ಬೆಲೆ 251 ರೂಪಾಯಿ ವಿಧಿಸಲಾಗಿತ್ತು. ಇದನ್ನು ಏರಿಕೆ ಮಾಡಲು ಪ್ರಯತ್ನ ನಡೆಯುತ್ತಿದೆ. 2017 ರಲ್ಲಿ, ದೇಶೀಯ ರೈತರನ್ನು ರಕ್ಷಿಸುವ ಉದ್ದೇಶದಿಂದ ಸರ್ಕಾರವು ಪ್ರತಿ ಕೆಜಿಗೆ 251 ರೂ.ಗೆ ಕನಿಷ್ಟ ಆಮದು ದರವನ್ನು ವಿಧಿಸಿತು. ಈ ಮಿತಿಗಿಂತ ಕಡಿಮೆ ಇರುವ ಅಡಿಕೆಯನ್ನು ಆಮದು ಮಾಡಿವಂತಿಲ್ಲ, ಆಮದು ಬೆಲೆಗಿಂತ ಅಧಿಕ ದರದ ಅಡಿಕೆಯನ್ನು ಆಮದು ಮಾಡಬಹುದು ಎಂದು ತಿಳಿಸಲಾಗಿತ್ತು. ಈ ನಡುವೆಯೇ ಯಾವುದೇ ಷರತ್ತು ಇಲ್ಲದೆ ಅಡಿಕೆ ಆಮದು ಮಾಡಲು ಅವಕಾಶ ನೀಡಲಾಗಿದೆ. ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ (DGFT) 2022-23ನೇ ಪ್ರಸಕ್ತ ಸಾಲಿನಲ್ಲಿ ಭೂತಾನ್‌ನಿಂದ ಕನಿಷ್ಟ ಆಮದು ಬೆಲೆ ಇಲ್ಲದೇ 8,500 ಮೆಟ್ರಿಕ್ ಟನ್‌ನಷ್ಟು ಹಸಿರು ಅಡಿಕೆಯನ್ನು ಆಮದು ಮಾಡಿಕೊಳ್ಳಬಹುದು ಎಂದು ಹೇಳಿತ್ತು. ಮುಂದಿನ ವರ್ಷದಿಂದ  ಅಂದರೆ 2023-24 ರಿಂದ 17000 ಮೆಟ್ರಿಕ್ ಟನ್ ಆಮದು ಮಾಡಿಕೊಳ್ಳಬಹುದು ಈಗಾಗಲೇ ತಿಳಿಸಲಾಗಿದೆ.  ಇದಕ್ಕಾಗಿ ವಿವಿಧ ನೀತಿಗಳನ್ನು ರೂಪಿಸಲಾಗಿದೆ.

ಈಗ ಆಗಿರುವ ನೀತಿಯಿಂದ ಅಡಿಕೆ ಬೆಳೆಗಾರರಿಗರ ಆತಂಕ ಇದೆ. ಮುಕ್ತ ವ್ಯಾಪಾರ ಒಪ್ಪಂದದ ಪ್ರಕಾರ ಕೆಲವು ದೇಶಗಳಿಂದ ಮುಕ್ತ ವ್ಯಾಪಾರ ವಹಿವಾಟು ನಡೆಸಬಹುದು. ಭಾರತ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವೆ ಆಮದು ಸುಂಕ ಇತ್ಯಾದಿ ಕೆಲವು ನಿಯಮಗಳ ಮೂಲಕ ಆಮದು ಹಾಗೂ ರಫ್ತು ನಡೆಸಬಹುದಾಗಿದೆ. ಈಗ ಅಡಿಕೆ ಆಮದು ಕನಿಷ್ಟ ಬೆಲೆ ಇಲ್ಲದೆಯೇ ಅಡಿಕೆ ಆಮದು ಅವಕಾಶ ನೀಡಿದರೆ ಭವಿಷ್ಯದಲ್ಲಿ ಭಾರತದ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಲಿದೆ ಎನ್ನುವುದು ಕೃಷಿ  ಮಾರುಕಟ್ಟೆ ವಲಯದ ಅಭಿಪ್ರಾಯ. ಸದ್ಯ ಈ ಆಮದು ನಿಯಮಗಳಿಂದ ಅಡಿಕೆ ಬೆಳೆಗಾರರಿಗೆ , ಮಾರುಕಟ್ಟೆಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಭವಿಷ್ಯದಲ್ಲಿ ಅಡಿಕೆ ಧಾರಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

4 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago